AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ- ಸೊಸೆಯ ನಡುವಿನ ಜಗಳಕ್ಕೆ ಕಾರಣಗಳೇನು? ಇವರಿಬ್ಬರ ಸಂಬಂಧವನ್ನು ಸರಿಪಡಿಸುವುದು ಹೇಗೆ?

ಕುಟುಂಬದಲ್ಲಿ ಸಣ್ಣಪುಟ್ಟ ಜಗಳಗಳು ಕಾಮನ್.‌ ಅದರಲ್ಲೂ ಪ್ರತಿ ಮನೆಯನ್ನೂ ಅತ್ತೆ ಸೊಸೆ ಮಧ್ಯೆ ಸಣ್ಣಪುಟ್ಟ ಕಿರಿಕ್‌, ಮನಸ್ತಾಪಗಳು ಇದ್ದೇ ಇರುತ್ತದೆ. ಕೆಲವೊಂದು ಬಾರಿ ಈ ಅತ್ತೆ ಸೊಸೆ ಜಗಳಗಳು ತಾರಕಕ್ಕೇರುತ್ತವೆ. ಹೀಗೆ ಅತ್ತೆ-ಸೊಸೆ ಮಧ್ಯೆ ಜಗಳಗಳು ನಡೆಯಲು ಕಾರಣವೇನು, ಇವರಿಬ್ಬರ ಸಂಬಂಧವನ್ನು ಹೇಗೆ ಸರಿಪಡಿಸಬಹುದು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.

ಅತ್ತೆ- ಸೊಸೆಯ ನಡುವಿನ ಜಗಳಕ್ಕೆ ಕಾರಣಗಳೇನು? ಇವರಿಬ್ಬರ ಸಂಬಂಧವನ್ನು ಸರಿಪಡಿಸುವುದು ಹೇಗೆ?
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Apr 27, 2026 | 5:59 PM

Share

ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವು (relationship) ಅತ್ಯಂತ ಸೂಕ್ಷ್ಮ ಮತ್ತು ಸೂಕ್ಷ್ಮವಾದದದ್ದು, ಈ ಸಂಬಂಧದಲ್ಲಿ ಸಣ್ಣದೊಂದು ತಪ್ಪು ನಡೆದರೂ ಕೂಡ ಇದು ಇಡೀ ಸಂಬಂಧದ ಸಾರವನ್ನೇ ಬದಲಾಯಿಸಬಹುದು. ಇದೇ ಕಾರಣಕ್ಕೇನೋ ಅತ್ತೆ ಸೊಸೆ ಮಧ್ಯೆ ಸಣ್ಣಪುಟ್ಟ ವಿಚಾರಗಳಿಗೂ ಮನಸ್ತಾಪ ಏರ್ಪಡೋದು. ಯಾವ ಮನೆಯಲ್ಲಿ ಅತ್ತೆ ಸೊಸೆ ಜಗಳವಿರುತ್ತದೆಯೋ ಆ ಮನೆಯಲ್ಲಿ ಶಾಂತಿ, ನೆಮ್ಮದಿ ಅನ್ನೋದೇ ಇರೋದಿಲ್ಲ. ಆದ ಕಾರಣದಿಂದ ಇಬ್ಬರೂ ಹೊಂದಿಕೊಂಡು ಜೀವನ ನಡೆಸುತ್ತಾ ಹೋಗಬೇಕಾಗುತ್ತದೆ. ಹೀಗಿರುವಾಗ ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವನ್ನು ಬಲಪಡಿಸಲು, ಇವರಿಬ್ಬರ ನಡುವೆ ಜಗಳಗಳಯ ನಡೆಯಲು ಕಾರಣಗಳೇನು, ಅವುಗಳನ್ನು ಯಾವ ರೀತಿ ಸರಿಪಡಿಸಬಹುದು ಎಂಬುದನ್ನು ನೋಡೋಣ ಬನ್ನಿ.

ಅತ್ತೆ-ಸೊಸೆ ಮಧ್ಯೆ ಜಗಳಗಳು ನಡೆಯಲು ಕಾರಣಗಳೇನು?

ಮಗನ ವಿಚಾರ: ಹಲವು ಬಾರಿ, ಮಗನ ವಿಚಾರವಾಗಿ ಅತ್ತೆ ಮತ್ತು ಸೊಸೆಯ ನಡುವೆ ಸಂಘರ್ಷ ನಡೆಯುತ್ತದೆ. ಮದುವೆಯ ನಂತರ ತನ್ನ ಮಗ ಬದಲಾಗಿದ್ದಾನೆ, ಯಾವಾಗಲೂ ಹೆಂಡತಿಯ ಮಾತನ್ನೇ ಕೇಳುತ್ತಾಳೆ ಎಂದು ಅತ್ತೆ ಕೋಪ ಮಾಡಿಕೊಂಡರೆ, ಸೊಸೆಯಾದವಳು ನನ್ನ ಗಂಡ ಯಾವಾಗಲು ನನಗಿಂತ ಆತನ ತಾಯಿಯ ಬಗ್ಗೆಯೇ ಹೆಚ್ಚು ಕಾಳಜಿ ವಹಿಸುತ್ತಾನೆ ಎಂದುಕೊಳ್ಳುತ್ತಾಳೆ. ಈ ವಿಚಾರವಾಗಿ ಅನೇಕ ಮನೆಗಳಲ್ಲಿ ಜಗಳಗಳು ನಡೆಯುತ್ತವೆ.

 ಮನೆಕೆಲಸದ ವಿಚಾರವಾಗಿ: ಮನೆ ಕೆಲಸದ ವಿಚಾರವಾಗಿಯೂ ಅತ್ತೆ ಸೊಸೆಯ ಮಧ್ಯೆ ಮನಸ್ತಾಪ ಏರ್ಪಡುತ್ತದೆ.  ಇತ್ತೀಚಿನ ದಿನಗಳಲ್ಲಿ ಶೇಕಡ 80 ರಷ್ಟು ಯುವತಿಯರು ಮನೆಯ ಹೊರಗಡೆ ಕೆಲಸ ಮಾಡುವವರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಮನೆಕೆಲಸದಲ್ಲಿ ಸಹಾಯ ಮಾಡಲು ಸಾಧ್ಯವಾಗುವುದಿಲ್ಲ. ಇದರಿಂದ ಅತ್ತೆ ಸೊಸೆಯ ಮೇಲೆ ಕೋಪ ಮಾಡುತ್ತಾರೆ. ಈ ಪರಿಸ್ಥಿತಿಯನ್ನು ತಕ್ಷಣ ಪರಿಹರಿಸುವುದು ಉತ್ತಮ.

ಆಗಾಗ್ಗೆ ತವರು ಮನೆಗೆ ಭೇಟಿ ನೀಡುವುದು: ಅತ್ತೆಗೆ ಸೊಸೆ ಮೇಲೆ ಎಷ್ಟೇ ಪ್ರೀತಿ ಇದ್ದರೂ, ಸೊಸೆ ಆಗಾಗ್ಗೆ ತನ್ನ ಹೆತ್ತವರ ಮನೆಗೆ ಹೋಗುವುದು ಅತ್ತೆಗೆ ಇಷ್ಟವಾಗುವುದಿಲ್ಲ. ಇದು ಕೂಡ ಅತ್ತೆ ಸೊಸೆಯ ನಡುವೆ ಅಂತರ ಹೆಚ್ಚಲು ಒಂದು ಕಾರಣ.

ಇತರರೊಂದಿಗೆ ಹೋಲಿಕೆ ಮಾಡುವುದು: ಕೆಲಸದ ವಿಚಾರದಲ್ಲಿ, ಮನೆ ನೋಡಿಕೊಳ್ಳುವ ವಿಚಾರದಲ್ಲಿ ಅತ್ತೆ ಸೊಸೆಯನ್ನು ಇತತರೊಂದಿಗೆ ಹೋಲಿಕೆ ಮಾಡುತ್ತಾರೆ. ಅದೇ ರೀತಿ ಸೊಸೆ ಕೂಡ ತನ್ನ ಅತ್ತೆಯನ್ನು ಇತರರೊಂದಿಗೆ ಹೋಲಿಕೆ ಮಾಡುತ್ತಾರೆ. ಇದು ಇವರಿಬ್ಬರ ನಡುವೆ ಸಂಘರ್ಷ ಉಂಟಾಗಲು ಕಾರಣವಾಗುತ್ತದೆ.

ಪೀಳಿಗೆಗಳ ಅಂತರ : ಹಿರಿಯರ ಜೀವನಶೈಲಿ ಮತ್ತು ಹೊಸ ಪೀಳಿಗೆಯ ಆಧುನಿಕ ಚಿಂತನೆಯ ನಡುವಿನ ಸಂಘರ್ಷವು ಆಗಾಗ್ಗೆ ಅತ್ತೆ ಸೊಸೆಯ ವಿವಾದಗಳಿಗೆ ಕಾರಣವಾಗುತ್ತದೆ. ಇದಲ್ಲದೆ ಸಂವಹನದ ಕೊರತೆ, ಹೊಂದಾಣಿಕೆ, ಪ್ರೈವೆಸಿ  ಇಲ್ಲದಿರುವುದು ಇವೆಲ್ಲವೂ ಅತ್ತೆ ಸೊಸೆಯ ಸಂಬಂಧದಲ್ಲಿ ಅಂತರ ಸೃಷ್ಟಿಯಾಗಲು ಮುಖ್ಯ ಕಾರಣ.

ಇದನ್ನೂ ಓದಿ: ಪತಿ ಪತ್ನಿಯರು ಸರಳ ಸೂತ್ರ ಪಾಲಿಸಿದರೆ ದಾಂಪತ್ಯ ಜೀವನ ಹಾಲು-ಜೇನಿನಂತೆ ಇರುವುದು ಖಂಡಿತ

ಅತ್ತೆ ಮತ್ತು ಸೊಸೆಯ ನಡುವೆ ಉತ್ತಮ ಸಂಬಂಧವನ್ನು ಹೇಗೆ ಕಾಪಾಡಿಕೊಳ್ಳುವುದು?

ಪರಸ್ಪರ ಗೌರವಿಸಿ: ಅತ್ತೆ ಮನೆಯ ಅಡಿಪಾಯ ಎಂದು ಸೊಸೆ ಅರ್ಥಮಾಡಿಕೊಳ್ಳಬೇಕು ಮತ್ತು ಸೊಸೆ ಈಗ ಆ ಮನೆಯ ಅವಿಭಾಜ್ಯ ಅಂಗ ಎಂದು ಅತ್ತೆ ಒಪ್ಪಿಕೊಳ್ಳಬೇಕು. ಈ ಹೊಂದಾಣಿಕೆ ಮತ್ತು ಪರಸ್ಪರ ಗೌರವ ಅತ್ತೆ ಸೊಸೆಯ ಬಂಧವನ್ನು ಬಿಗಿಗೊಳಿಸುತ್ತದೆ.

ತಾಳ್ಮೆ ಮತ್ತು ಸಂಯಮ: ಯಾವುದೇ ಸಮಸ್ಯೆಗೆ ಕೋಪ ಪರಿಹಾರವಲ್ಲ. ವಿವಾದ ಹೆಚ್ಚಾದರೆ ಮೌನವಾಗಿರುವುದು ಜಾಣತನ. ಮನಸ್ತಾಪ ಏರ್ಪಟ್ಟಾಗ ಮಾತಿಗೆ ಮಾತು ಬೆಳೆಸಿ ಜಗಳವನ್ನು ದೊಡ್ಡದು ಮಾಡುವ ಬದಲು ತಾಳ್ಮೆಯಿಂದ ಮೌನವಾಗಿರಿ. ಇದರಿಂದ ಸಂಬಂದ ಹಳಸುವುದಿಲ್ಲ.

ಒಟ್ಟಿಗೆ ಸಮಯ ಕಳೆಯಿರಿ: ಬ್ಯುಸಿ ಜೀವನದ ಹೊರತಾಗಿಯೂ, 15-20 ನಿಮಿಷಗಳ ಕಾಲ ಅತ್ತೆ ಸೊಸೆ ಒಟ್ಟಿಗೆ ಕುಳಿತು ಚಹಾ ಕುಡಿಯುತ್ತಾ, ಟಿವಿ ನೋಡುತ್ತಾ, ಮಾತನಾಡುತ್ತಾ ಜೊತೆಯಾಗಿ ಸಮಯ ಕಳೆಯಬೇಕು. ಅಲ್ಲದೆ ಶಾಪಿಂಗ್‌ಗೆ ಜೊತೆಯಾಗಿ ಹೋಗಬೇಕು. ಇದರಿಂದ ಅತ್ತೆ ಸೊಸೆಯ ಮಧ್ಯೆ ಹೊಂದಾಣಿಕೆ ಹೆಚ್ಚಾಗುತ್ತದೆ.

ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡರೆ, ಅತ್ತೆ-ಸೊಸೆ ಮಧ್ಯೆ ಜಗಳಗಳು ಏರ್ಪಡುವುದಿಲ್ಲ ಮತ್ತು ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ
ಅಪ್ರಾಪ್ತನಿಗೆ ಸಿಗರೇಟ್ ಸೇದಿಸಿ,ಬ್ಲಾಕ್‌ಮೇಲ್ ಮಾಡಿ 120 ಗ್ರಾಂ ಚಿನ್ನ ದರೋಡ
ಅಪ್ರಾಪ್ತನಿಗೆ ಸಿಗರೇಟ್ ಸೇದಿಸಿ,ಬ್ಲಾಕ್‌ಮೇಲ್ ಮಾಡಿ 120 ಗ್ರಾಂ ಚಿನ್ನ ದರೋಡ