Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಜನ್ಮಾಷ್ಟಮಿಯಂದು ಮಧುಮೇಹಿಗಳು ಸಿಹಿ ತಿಂಡಿಗಳನ್ನು ತ್ಯಾಗ ಮಾಡಬೇಕಾಗಿಲ್ಲ; ನೀವು ಸವಿಯಬಹುದಾದ ಪಾಕವಿಧಾನಗಳು ಇಲ್ಲಿವೆ

Krishna Janmashtami 2021: ಕೃಷ್ಣ ಜನ್ಮಾಷ್ಟಮಿಯ ದಿನದಂದು ಮಧುಮೇಹ ಸಮಸ್ಯೆ ಹೊಂದಿರುವವರು ತ್ಯಾಗ ಮಾಡಬೇಕಾಗಿಲ್ಲ. ಈ ರುಚಿಕರವಾದ ರೆಸಿಪಿಗಳನ್ನು ಮಾಡಿ ಸವಿಯಬಹುದು. 

ಕೃಷ್ಣ ಜನ್ಮಾಷ್ಟಮಿಯಂದು ಮಧುಮೇಹಿಗಳು ಸಿಹಿ ತಿಂಡಿಗಳನ್ನು ತ್ಯಾಗ ಮಾಡಬೇಕಾಗಿಲ್ಲ; ನೀವು ಸವಿಯಬಹುದಾದ ಪಾಕವಿಧಾನಗಳು ಇಲ್ಲಿವೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Aug 30, 2021 | 11:50 AM

ಸಿಹಿ ತಿನಿಸುಗಳಿಲ್ಲದೇ ಭಾರತೀಯ ಹಬ್ಬವು ಸಂಪೂರ್ಣಗೊಳ್ಳುವುದಿಲ್ಲ. ಸಿಹಿ ಹಂಚುತ್ತಾ ಹಬ್ಬವನ್ನು ಖುಷಿಯಿಂದ ಸಂಭ್ರಮಿಸುತ್ತಾರೆ ಭಾರತೀಯರು. ಕೃಷ್ಣ ಜನ್ಮಾಷ್ಟಮಿ ಹಬ್ಬದಂದು ಸಿಹಿ ತಿನ್ನಬೇಕೆಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಆರೋಗ್ಯ ತೊಂದರೆಗಳಿಂದಾಗಿ ಕೆಲವರು ಸಿಹಿ ತಿನ್ನುವ ಆಸೆಯನ್ನು ಕೈಬಿಡಬೇಕಾಗುತ್ತದೆ. ಹಾಗೆಂದು ಚಿಂತಿಸಬೇಕಿಲ್ಲ. ಹಬ್ಬದ ದಿನದಂದು ನೀವೂ ಸಿಹಿ ತಿನ್ನಬಹುದು. ಮಧುಮೇಹ ಸಮಸ್ಯೆ ಇರುವವರು ದಿಢೀರ್​ಆಗಿ ಸಿಗಿ ತಯಾರಿಸಿ ಸವಿಯಬಹುದಾದ ಸಿಹಿ ತಿಂಡಿಗಳು ಯಾವುವುದು ಎಂಬುದನ್ನು ತಿಳಿಯೋಣ.

ಕೃಷ್ಣ ಜನ್ಮಾಷ್ಟಮಿಯ ದಿನದಂದು ಮಧುಮೇಹ ಸಮಸ್ಯೆ ಹೊಂದಿರುವವರು ತ್ಯಾಗ ಮಾಡಬೇಕಾಗಿಲ್ಲ. ಈ ರುಚಿಕರವಾದ ರೆಸಿಪಿಗಳನ್ನು ಮಾಡಿ ಸವಿಯಬಹುದು.

ಪನೀರ್ ಖೀರ್ ಹಾಲನ್ನು ನಾನ್​ಸ್ಟಿಕ್​ ಪ್ಯಾನ್​ನಲ್ಲಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿ. ಹಾಲು ಚೆನ್ನಾಗಿ ಕುದಿಯಬೇಕು. ಏಲಕ್ಕಿ ಪುಡಿ ಮತ್ತು ಡ್ರೈ ಫ್ರೂಟ್ಸ್​ಗಳನ್ನು ಪ್ಯಾನ್​ಗೆ ಹಾಕಿ. ಜತೆಗೆ ಪನೀರ್​ಅನ್ನು ಪ್ಯಾನ್​ಗೆ ಹಾಕಿ. ಚೆನ್ನಾಗಿ ಮಿಶ್ರಣ ಮಾಡಿ. ಇದೀಗ ಪನೀರ್ ಖೀರ್ ಸಿದ್ಧವಾಗಿದೆ. ತಣ್ಣಗಾದ ಬಳಿಕ ನೀವು ಖೀರ್​ಅನ್ನು ಸೇವಿಸಬಹುದು.

ಶುಗರ್ ಫ್ರೀ ಶ್ರಿಖಂಡ ಒಂದು ಪಾತ್ರೆಯಲ್ಲಿ ಹಾಲನ್ನು ತೆಗೆದುಕೊಳ್ಳಿ. ಕೇಸರಿ ಎಳೆಗಳನ್ನು ಸೇರಿಸಿ ಸ್ವಲ್ಪ ಸಮಯ ಹಾಗೆಯೇ ಬಿಡಿ. ಬಟ್ಟಲಿನಲ್ಲಿದ್ದ ಏಲಕ್ಕಿ ಪುಡಿ ಮತ್ತು ಮೊಸರನ್ನು ಸೇರಿಸಿ. ಅದನ್ನು ಚೆನ್ನಾಗಿ ಮಿಶ್ರಣ ಮಾಡಿ. ಅದಕ್ಕೆ ಸಕ್ಕರೆ ಮುಕ್ತ ಪದಾರ್ಥಗಳನ್ನು ಸೇರಿಸಿ ಮತ್ತೆ ಮಿಶ್ರಣ ಮಾಡಿ. ತಣ್ಣಗಾದರೆ ಶುಗರ್ ಫ್ರೀ ಶ್ರೀಖಂಡ ಸವಿಯಲು ಸಿದ್ಧ.

ತೆಂಗಿನಕಾಯಿ ಬರ್ಫಿ ತೆಂಗಿನ ತುರಿಯನ್ನು ತೆಗೆದುಕೊಂಡು 2 ರಿಂದ 3 ಚಮಚ ತುಪ್ಪದೊಂದಿಗೆ ಪ್ಯಾನ್​ನಲ್ಲಿ ಹುರಿಯಿರಿ. ಶುಗರ್ ಫ್ರೀ ಪದಾರ್ಥಗಳನ್ನು ಸದಕ್ಕೆ ಸೇರಿಸಿ. ಏಲಕ್ಕಿ ಪುಡಿಯನ್ನು ರುಚಿಗಾಗಿ ಸ್ವಲ್ಪ ಸೇರಿಸಿ. ಸ್ವಲ್ಪ ನೀರು ಸೇರಿಸಿ ಮಿಶ್ರಣ ಮಾಡಿ. ಬಟ್ಟಲಿಗೆ ಸ್ವಲ್ಪ ತುಪ್ಪ ಸವರಿ ನಂತರ ಅದನ್ನು ಬಟ್ಟಲಿನಲ್ಲಿ ಹಾಕಿ ಬರ್ಫಿ ಆಕಾರದಲ್ಲಿ ಕತ್ತರಿಸಿ. ಫ್ರಿಜ್​ನಲ್ಲಿಯೂ ಸಹ ಇಟ್ಟು ಕೋಲ್ಡ್ ಮಾಡಬಹುದು. ಇದೀಗ ತೆಂಗಿನ ತುರಿ ಬರ್ಫಿ ಸವಿಯಲು ಸಿದ್ಧ.

ಇದನ್ನೂ ಓದಿ:

Krishna Janmashtami 2021 ಶ್ರೀ ಕೃಷ್ಣನ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಆಸಕ್ತಿಕರ ಸಂಗತಿಗಳು

Krishna Janmashtami 2021: ಶ್ರೀ ಕೃಷ್ಣನ 50 ಹೆಸರುಗಳು

(Krishna Janmashtami 2021 quick recipes for diabetes)

Published On - 11:46 am, Mon, 30 August 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ