AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2024 : ಕೃಷ್ಣನಿಗೆ ಬಲು ಪ್ರಿಯ ಈ ಅವಲಕ್ಕಿ ಲಡ್ಡು, ರೆಸಿಪಿ ಮಾಡೋದು ಸುಲಭ

ಕೃಷ್ಣ ಜನ್ಮಾಷ್ಟಮಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈ ಬಾರಿ ಆಗಸ್ಟ್ 26 ರಂದು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಈ ಜನ್ಮಾಷ್ಟಮಿಯ ದಿನದಂದು ಶ್ರೀಕೃಷ್ಣನಿಗೆ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಕೃಷ್ಣನಿಗೆ ಪ್ರಿಯವಾದ ಅವಲಕ್ಕಿ ಲಡ್ಡನ್ನು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Krishna Janmashtami 2024 : ಕೃಷ್ಣನಿಗೆ ಬಲು ಪ್ರಿಯ ಈ ಅವಲಕ್ಕಿ ಲಡ್ಡು, ರೆಸಿಪಿ ಮಾಡೋದು ಸುಲಭ
ಅವಲಕ್ಕಿ ಲಡ್ಡು
ಸಾಯಿನಂದಾ
| Edited By: |

Updated on: Aug 23, 2024 | 6:27 PM

Share

ಶ್ರೀ ಕೃಷ್ಣ ಜನ್ಮಾಷ್ಟಮಿ ಎಂದಾಕ್ಷಣ ನೆನಪಾಗುವುದು ಶ್ರೀ ಕೃಷ್ಣ, ಯಶೋದೆಯರ ವೇಷಧಾರಿಗಳು, ಮೊಸರು ಕುಡಿಕೆ, ಕೃಷ್ಣ ದೇವಾಲಯಗಳಲ್ಲಿ ವಿಶೇಷ ಪೂಜೆ, ಹಬ್ಬದ ಸಂಭ್ರಮ ಹಾಗೂ ಅಷ್ಟಮಿಯಂದು ತಯಾರಿಸಲಾಗುವ ಬಗೆ ಬಗೆಯ ಖಾದ್ಯಗಳು. ಈ ದಿನ ಕೃಷ್ಣನಿಗೆ ಪ್ರಿಯವಾದ ಉಂಡೆಗಳು, ಚಕ್ಕುಲಿ, ನಿಪ್ಪಟ್ಟು ಇಂತಹ ತಿನಿಸುಗಳನ್ನು ತಯಾರಿಸಿ ನೈವೇದ್ಯವಾಗಿ ಇಡಲಾಗುತ್ತದೆ. ಆದರೆ ಕೃಷ್ಣನಿಗೆ ಅವಲಕ್ಕಿ ಲಡ್ಡು ಪ್ರಿಯವಾಗಿದ್ದು, ಈ ಕೆಲವು ಐಟಂಗಳಿದ್ದರೆ ಮನೆಯಲ್ಲೇ ಸುಲಭವಾಗಿ ಈ ತಿನಿಸನ್ನು ಮಾಡಬಹುದಾಗಿದೆ.

ಅವಲಕ್ಕಿ ಲಡ್ಡು ಮಾಡಲು ಬೇಕಾಗಿರುವ ಸಾಮಾಗ್ರಿಗಳು

* 200 ಗ್ರಾಂ ಅವಲಕ್ಕಿ

* 100 ಗ್ರಾಂ ಬೆಲ್ಲ

* ಕಾಲು ಕಪ್ ಒಣ ತೆಂಗಿನಕಾಯಿ ತುರಿ

* ಗೋಡಂಬಿ ಮತ್ತು ಒಣ ದ್ರಾಕ್ಷಿ

* ಏಲಕ್ಕಿ ಪುಡಿ

* ತುಪ್ಪ

ಇದನ್ನೂ ಓದಿ: ಭಾರತಕ್ಕೆ ಹೆಮ್ಮೆ ತಂದ ಇಸ್ರೋ, ಈ ಸಾಹಸದ ಹಿಂದಿದೆ ಹಲವು ವಿಜ್ಞಾನಿಗಳ ಶ್ರಮ

ಅವಲಕ್ಕಿ ಲಡ್ಡು ತಯಾರಿಸುವ ಸುಲಭ ವಿಧಾನ

* ಮೊದಲಿಗೆ ಗ್ಯಾಸ್ ಮೇಲೆ ಒಂದು ಪ್ಯಾನ್ ಇಟ್ಟು ಅದಕ್ಕೆ ಅವಲಕ್ಕಿ ಹಾಕಿ ಸ್ವಲ್ಪ ಹುರಿದುಕೊಳ್ಳಿ, ನಂತರ ಒಣ ತೆಂಗಿನಕಾಯಿ ತುರಿಯನ್ನು ಹುರಿದುಕೊಂಡು ತಣ್ಣಗಾಗಲು ಬಿಡಿ.

* ಈ ಮಿಶ್ರಣ ತಣ್ಣಗಾದ ಬಳಿಕ ಮಿಕ್ಸಿ ಜಾರಿಗೆ ಹಾಕಿ, ಬೆಲ್ಲವನ್ನು ತುರಿದುಕೊಂಡು ಹಾಕಿ ತರಿತರಿಯಾಗಿ ರುಬ್ಬಿಕೊಳ್ಳಿ.

* ಒಂದು ಬಾಣಲೆಯಲ್ಲಿ ತುಪ್ಪವನ್ನು ಬಿಸಿ ಮಾಡಿಕೊಂಡು ಅದರಲ್ಲಿ ಗೋಡಂಬಿ ಮತ್ತು ಒಣದ್ರಾಕ್ಷಿಯನ್ನು ಹುರಿದುಕೊಳ್ಳಿ.

* ನಂತರ ಪ್ಯಾನ್ ಗೆ ಸ್ವಲ್ಪ ತುಪ್ಪವನ್ನು ಹಾಕಿ, ರುಬ್ಬಿಟ್ಟ ಬೆಲ್ಲ ಮತ್ತು ಅವಲಕ್ಕಿಯ ಮಿಶ್ರಣ, ಏಲಕ್ಕಿ ಪುಡಿ, ಹುರಿದಿಟ್ಟ ಒಣದ್ರಾಕ್ಷಿ ಮತ್ತು ಗೋಡಂಬಿಯನ್ನು ಸೇರಿಸಿಕೊಂಡು ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.

* ಆ ಬಳಿಕ ಅಂಗೈಗೆ ಸಲ್ಪ ತುಪ್ಪವನ್ನು ಸವರಿಕೊಂಡು ಅವಲಕ್ಕಿ ಮಿಶ್ರಣದಿಂದ ಸಣ್ಣ ಸ್ಣಣ ಲಡ್ಡುಗಳನ್ನು ಮಾಡಿಕೊಂಡರೆ ಕೃಷ್ಣನಿಗೆ ಪ್ರಿಯವಾದ ನೈವೇದ್ಯ ಪ್ರಸಾದ ಸಿದ್ಧವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್