AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2024 : ಕೃಷ್ಣನಿಗೆ ಬಲು ಪ್ರಿಯ ಈ ಅವಲಕ್ಕಿ ಲಡ್ಡು, ರೆಸಿಪಿ ಮಾಡೋದು ಸುಲಭ

ಕೃಷ್ಣ ಜನ್ಮಾಷ್ಟಮಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈ ಬಾರಿ ಆಗಸ್ಟ್ 26 ರಂದು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಈ ಜನ್ಮಾಷ್ಟಮಿಯ ದಿನದಂದು ಶ್ರೀಕೃಷ್ಣನಿಗೆ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಕೃಷ್ಣನಿಗೆ ಪ್ರಿಯವಾದ ಅವಲಕ್ಕಿ ಲಡ್ಡನ್ನು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Krishna Janmashtami 2024 : ಕೃಷ್ಣನಿಗೆ ಬಲು ಪ್ರಿಯ ಈ ಅವಲಕ್ಕಿ ಲಡ್ಡು, ರೆಸಿಪಿ ಮಾಡೋದು ಸುಲಭ
ಅವಲಕ್ಕಿ ಲಡ್ಡು
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 23, 2024 | 6:27 PM

Share

ಶ್ರೀ ಕೃಷ್ಣ ಜನ್ಮಾಷ್ಟಮಿ ಎಂದಾಕ್ಷಣ ನೆನಪಾಗುವುದು ಶ್ರೀ ಕೃಷ್ಣ, ಯಶೋದೆಯರ ವೇಷಧಾರಿಗಳು, ಮೊಸರು ಕುಡಿಕೆ, ಕೃಷ್ಣ ದೇವಾಲಯಗಳಲ್ಲಿ ವಿಶೇಷ ಪೂಜೆ, ಹಬ್ಬದ ಸಂಭ್ರಮ ಹಾಗೂ ಅಷ್ಟಮಿಯಂದು ತಯಾರಿಸಲಾಗುವ ಬಗೆ ಬಗೆಯ ಖಾದ್ಯಗಳು. ಈ ದಿನ ಕೃಷ್ಣನಿಗೆ ಪ್ರಿಯವಾದ ಉಂಡೆಗಳು, ಚಕ್ಕುಲಿ, ನಿಪ್ಪಟ್ಟು ಇಂತಹ ತಿನಿಸುಗಳನ್ನು ತಯಾರಿಸಿ ನೈವೇದ್ಯವಾಗಿ ಇಡಲಾಗುತ್ತದೆ. ಆದರೆ ಕೃಷ್ಣನಿಗೆ ಅವಲಕ್ಕಿ ಲಡ್ಡು ಪ್ರಿಯವಾಗಿದ್ದು, ಈ ಕೆಲವು ಐಟಂಗಳಿದ್ದರೆ ಮನೆಯಲ್ಲೇ ಸುಲಭವಾಗಿ ಈ ತಿನಿಸನ್ನು ಮಾಡಬಹುದಾಗಿದೆ.

ಅವಲಕ್ಕಿ ಲಡ್ಡು ಮಾಡಲು ಬೇಕಾಗಿರುವ ಸಾಮಾಗ್ರಿಗಳು

* 200 ಗ್ರಾಂ ಅವಲಕ್ಕಿ

* 100 ಗ್ರಾಂ ಬೆಲ್ಲ

* ಕಾಲು ಕಪ್ ಒಣ ತೆಂಗಿನಕಾಯಿ ತುರಿ

* ಗೋಡಂಬಿ ಮತ್ತು ಒಣ ದ್ರಾಕ್ಷಿ

* ಏಲಕ್ಕಿ ಪುಡಿ

* ತುಪ್ಪ

ಇದನ್ನೂ ಓದಿ: ಭಾರತಕ್ಕೆ ಹೆಮ್ಮೆ ತಂದ ಇಸ್ರೋ, ಈ ಸಾಹಸದ ಹಿಂದಿದೆ ಹಲವು ವಿಜ್ಞಾನಿಗಳ ಶ್ರಮ

ಅವಲಕ್ಕಿ ಲಡ್ಡು ತಯಾರಿಸುವ ಸುಲಭ ವಿಧಾನ

* ಮೊದಲಿಗೆ ಗ್ಯಾಸ್ ಮೇಲೆ ಒಂದು ಪ್ಯಾನ್ ಇಟ್ಟು ಅದಕ್ಕೆ ಅವಲಕ್ಕಿ ಹಾಕಿ ಸ್ವಲ್ಪ ಹುರಿದುಕೊಳ್ಳಿ, ನಂತರ ಒಣ ತೆಂಗಿನಕಾಯಿ ತುರಿಯನ್ನು ಹುರಿದುಕೊಂಡು ತಣ್ಣಗಾಗಲು ಬಿಡಿ.

* ಈ ಮಿಶ್ರಣ ತಣ್ಣಗಾದ ಬಳಿಕ ಮಿಕ್ಸಿ ಜಾರಿಗೆ ಹಾಕಿ, ಬೆಲ್ಲವನ್ನು ತುರಿದುಕೊಂಡು ಹಾಕಿ ತರಿತರಿಯಾಗಿ ರುಬ್ಬಿಕೊಳ್ಳಿ.

* ಒಂದು ಬಾಣಲೆಯಲ್ಲಿ ತುಪ್ಪವನ್ನು ಬಿಸಿ ಮಾಡಿಕೊಂಡು ಅದರಲ್ಲಿ ಗೋಡಂಬಿ ಮತ್ತು ಒಣದ್ರಾಕ್ಷಿಯನ್ನು ಹುರಿದುಕೊಳ್ಳಿ.

* ನಂತರ ಪ್ಯಾನ್ ಗೆ ಸ್ವಲ್ಪ ತುಪ್ಪವನ್ನು ಹಾಕಿ, ರುಬ್ಬಿಟ್ಟ ಬೆಲ್ಲ ಮತ್ತು ಅವಲಕ್ಕಿಯ ಮಿಶ್ರಣ, ಏಲಕ್ಕಿ ಪುಡಿ, ಹುರಿದಿಟ್ಟ ಒಣದ್ರಾಕ್ಷಿ ಮತ್ತು ಗೋಡಂಬಿಯನ್ನು ಸೇರಿಸಿಕೊಂಡು ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.

* ಆ ಬಳಿಕ ಅಂಗೈಗೆ ಸಲ್ಪ ತುಪ್ಪವನ್ನು ಸವರಿಕೊಂಡು ಅವಲಕ್ಕಿ ಮಿಶ್ರಣದಿಂದ ಸಣ್ಣ ಸ್ಣಣ ಲಡ್ಡುಗಳನ್ನು ಮಾಡಿಕೊಂಡರೆ ಕೃಷ್ಣನಿಗೆ ಪ್ರಿಯವಾದ ನೈವೇದ್ಯ ಪ್ರಸಾದ ಸಿದ್ಧವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!