AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2024 : ಹಬ್ಬಕ್ಕೆ ಕರಾವಳಿ ಸಾಂಪ್ರದಾಯಿಕ ತಿನಿಸು ಚಿಲಿಂಬಿ ಅಡ್ಡೆ, ಇಲ್ಲಿದೆ ರೆಸಿಪಿ

ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಕೂಡ ಒಂದು. ಭಗವಂತ ಕೃಷ್ಣನು ಜನಿಸಿದ ಈ ದಿನವನ್ನು ಇಡೀ ದೇಶದಾದಂತ್ಯ ಸಂಭ್ರಮದಿಂದ ಆಚರಿಸಲಾಗುತ್ತದೆ. ಉಡುಪಿಯ ಭಾಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಿಂದಿನ ದಿನವೇ ಎಲ್ಲರ ಮನೆಯಲ್ಲಿ ಈ ಸಾಂಪ್ರಾದಾಯಿಕ ತಿನಿಸು ಚಿಲಿಂಬಿಯನ್ನು ಮಾಡಲಾಗುತ್ತದೆ. ಹಾಗಾದ್ರೆ ಈ ರೆಸಿಪಿಯು ಮಾಡುವ ವಿಧಾನದ ಸಂಪೂರ್ಣ ಮಾಹಿತಿ ಇಲ್ಲಿದೆ.

Krishna Janmashtami 2024 : ಹಬ್ಬಕ್ಕೆ ಕರಾವಳಿ ಸಾಂಪ್ರದಾಯಿಕ ತಿನಿಸು ಚಿಲಿಂಬಿ ಅಡ್ಡೆ, ಇಲ್ಲಿದೆ ರೆಸಿಪಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Aug 21, 2024 | 9:38 AM

Share

ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಕೃಷ್ಣ ಹುಟ್ಟಿದ ದಿನ, ಈ ದಿನದಂದು ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ದೇಶದಾದ್ಯಂತ ಭಕ್ತರು ಆಚರಿಸುತ್ತಾರೆ. ಈ ವರ್ಷ, ಆಗಸ್ಟ್ 26 ರಂದು ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತದೆ. ಶ್ರೀಕೃಷ್ಣನಿಗೆ ಪ್ರಿಯವಾದ ತಿಂಡಿ ತಿನಿಸುಗಳನ್ನು ಮನೆಯಲ್ಲಿ ಮಾಡಿ ನೈವೇದ್ಯವಾಗಿ ಇಡಲಾಗುತ್ತದೆ. ಆದರೆ ಉಡುಪಿಯ ಕೆಲ ಭಾಗದಲ್ಲಿ ಕೃಷ್ಣ ಜನ್ಮಾಷ್ಟಮಿಯ ಒಂದು ದಿನ ಮುಂಚಿತವಾಗಿಯೇ ಸಾಂಪ್ರಾದಾಯಿಕ ತಿನಿಸು ಚಿಲಿಂಬಿ ಅಡ್ಡೆ ಮಾಡಲಾಗುತ್ತದೆ. ಈ ಸಿಹಿ ತಿನಿಸು ತಿನ್ನಲು ರುಚಿಕರ ಮಾತ್ರವಲ್ಲದೇ ಮಾಡುವುದಕ್ಕೂ ಸುಲಭ. ಈ ರುಚಿಕರ ತಿನಿಸನ್ನು ಸವಿಯುವುದರೊಂದಿಗೆ ಹಬ್ಬದ ಸಂಭ್ರಮವು ಆರಂಭವಾಗುತ್ತದೆ.

ಚಿಲಿಂಬಿ ಅಡ್ಡೆ ಮಾಡಲು ಬೇಕಾಗುವ ಸಾಮಗ್ರಿಗಳು

* ಹಲಸಿನ ಮರದ ಎಲೆ

* ಒಂದು ಕಪ್ ಕುಚ್ಚಲಕ್ಕಿ

* ತೆಂಗಿನಕಾಯಿ ತುರಿ

* ಬೆಲ್ಲದ ತುರಿ

* ತುಪ್ಪ

* ಏಲಕ್ಕಿ ಪುಡಿ

* ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ; ಸಿಹಿ ಖಾರ ಮಿಶ್ರಿತವಾದ ಮಸಾಲೆ ನೀರುದೋಸೆ, ರೆಸಿಪಿ ಇಲ್ಲಿದೆ

ಚಿಲಿಂಬಿ ಅಡ್ಡೆ ಮಾಡಲು ವಿಧಾನ

* ಅಕ್ಕಿಯನ್ನು ಚೆನ್ನಾಗಿ ತೊಳೆದು ನೀರಿನಲ್ಲಿ ಎಂಟು ಗಂಟೆಗಳ ಕಾಲ ನೆನೆಸಿಡಬೇಕು.

* ನೆನೆಸಿಟ್ಟ ಅಕ್ಕಿಯನ್ನು ನೀರು ಮತ್ತು ಉಪ್ಪು ಹಾಕಿ ಗಟ್ಟಿಯಾಗಿ ನುಣ್ಣಗೆ ರುಬ್ಬಿಕೊಳ್ಳಿ.

* ತೆಂಗಿನಕಾಯಿ ತುರಿಗೆ ಬೆಲ್ಲ, ಏಲಕ್ಕಿ ಪುಡಿ ಬೆರೆಸಿಟ್ಟುಕೊಳ್ಳಿ.

* ಹಲಸಿನ ಎಲೆಗಳನ್ನು ಕೋನ್‌ ಆಕಾರದಲ್ಲಿ ಸುತ್ತಿ ಕಡ್ಡಿಯಿಂದ ಚುಚ್ಚಿ ಬಿಗಿ ಮಾಡಿಕೊಳ್ಳಿ.

* ಕೋನ್ ಒಳಗೆ ರುಬ್ಬಿದ ಮಿಶ್ರಣವನ್ನು ಹಾಕಿ ತೆಳುವಾಗಿ ಹರಡಿಸಿಕೊಳ್ಳಿ.

* ಆ ಬಳಿಕ ಇದಕ್ಕೆ ಬೆಲ್ಲ, ಕಾಯಿತುರಿ ಹಾಗೂ ಏಲಕ್ಕಿ ಮಿಶ್ರಣವನ್ನು ತುಂಬಿಸಿ, ಬೆಲ್ಲವು ಕಾಣದಂತೆ ಅದರ ಮೇಲೆ ರುಬ್ಬಿದ ಅಕ್ಕಿ ಮಿಶ್ರಣವನ್ನು ಹರಡಿಸಿಕೊಳ್ಳಿ.

* ಹೀಗೆ ಮಾಡಿದ ಈ ಚಿಲಿಂಬಿ ಕೋನ್‌ಗಳನ್ನು ಹಬೆಯಲ್ಲಿ ಹದಿನೈದು ನಿಮಿಷಗಳ ಕಾಲ ಬೇಯಿಸಿದರೆ ಸಾಂಪ್ರದಾಯಿಕ ತಿನಿಸು ಚಿಲಿಂಬಿ ಅಡ್ಡೆ ಸವಿಯಲು ಸಿದ್ಧ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:28 am, Wed, 21 August 24

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್