AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2024: ರಾಧಾ, ಕೃಷ್ಣರ ಸಂಬಂಧ ಗಟ್ಟಿಯಾಗಿರಲು ಈ ಮೂರು ನಿಯಮಗಳು ಕಾರಣ

ರಾಧಾ- ಕೃಷ್ಣರ ಸ್ನೇಹ ಸಂಬಂಧ ಎಲ್ಲರಿಗೂ ಸ್ಫೂರ್ತಿ ನೀಡುವಂತದ್ದು. ಅವರು ಜೀವನ ನಡೆಸುವುದಕ್ಕೆ ಜೊತೆಗಾರರಾಗದಿದ್ದರೂ ಅವರ ಪವಿತ್ರ ಸಂಬಂಧ, ಅದನ್ನು ಅವರು ಕಾಪಾಡಿಕೊಂಡ ರೀತಿ ಎಲ್ಲವೂ ಯುವ ಜನತೆಗೆ ಮಾದರಿಯಾಗುವಂತದ್ದು. ಆದರೆ ರಾಧಾ- ಕೃಷ್ಣರು ತಮ್ಮ ಸ್ನೇಹವನ್ನು ಅಷ್ಟು ಚೆಂದವಾಗಿ ಇಟ್ಟುಕೊಳ್ಳಲು ಕಾರಣವೇನು? ಕೃಷ್ಣನ ಹೇಳಿರುವ ಪ್ರಕಾರ ಗೆಳೆತನದಲ್ಲಿ ಈ ಮೂರು ನಿಯಮ ಪಾಲಿಸಿದರೆ ನಿಮ್ಮ ಫ್ರೆಂಡ್ ಶಿಪ್ ಎಂದಿಗೂ ದೂರವಾಗಲಾರದು. ಹಾಗಾದರೆ ಗೆಳೆತನ ಶಾಶ್ವತವಾಗಿ ಉಳಿಯುವಂತಹ ಆ ಮೂರು ನಿಯಮಗಳೇನು? ತಿಳಿದುಕೊಳ್ಳಿ.

Krishna Janmashtami 2024: ರಾಧಾ, ಕೃಷ್ಣರ ಸಂಬಂಧ ಗಟ್ಟಿಯಾಗಿರಲು ಈ ಮೂರು ನಿಯಮಗಳು ಕಾರಣ
Krishna Janmashtami
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 25, 2024 | 12:19 PM

Share

ರಾಧಾ- ಕೃಷ್ಣರ ಸಂಬಂಧದ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ!. ಅವರ ಪ್ರೀತಿ, ಅವರಿಬ್ಬರ ನಡುವೆ ಇದ್ದ ಸ್ನೇಹ ಸಂಬಂಧ ಎಲ್ಲರಿಗೂ ಸ್ಫೂರ್ತಿ ನೀಡುವಂತದ್ದು. ಅವರು ಜೀವನ ನಡೆಸುವುದಕ್ಕೆ ಜೊತೆಗಾರರಾಗದಿದ್ದರೂ ಅವರ ಪವಿತ್ರ ಸಂಬಂಧ, ಅದನ್ನು ಅವರು ಕಾಪಾಡಿಕೊಂಡ ರೀತಿ ಎಲ್ಲವೂ ಯುವ ಜನತೆಗೆ ಮಾದರಿಯಾಗುವಂತದ್ದು. ಆದರೆ ರಾಧಾ- ಕೃಷ್ಣರು ತಮ್ಮ ಸ್ನೇಹವನ್ನು ಅಷ್ಟು ಚೆಂದವಾಗಿ ಇಟ್ಟುಕೊಳ್ಳಲು ಕಾರಣವೇನು? ಕೃಷ್ಣನ ಹೇಳಿರುವ ಪ್ರಕಾರ ಗೆಳೆತನದಲ್ಲಿ ಈ ಮೂರು ನಿಯಮ ಪಾಲಿಸಿದರೆ ನಿಮ್ಮ ಫ್ರೆಂಡ್ ಶಿಪ್ ಎಂದಿಗೂ ದೂರವಾಗಲಾರದು. ಹಾಗಾದರೆ ಗೆಳೆತನ ಶಾಶ್ವತವಾಗಿ ಉಳಿಯುವಂತಹ ಆ ಮೂರು ನಿಯಮಗಳೇನು? ತಿಳಿದುಕೊಳ್ಳಿ.

ಕೃಷ್ಣನ ಪ್ರಕಾರ ಗೆಳೆತನವನ್ನು ಶಾಶ್ವತವಾಗಿ ಕಾಪಾಡಿಕೊಳ್ಳಲು ಈ 3 ನಿಯಮಗಳನ್ನು ಪಾಲನೆ ಮಾಡಬೇಕು.

ಮೊದಲನೇಯ ನಿಯಮ:

ಗೆಳೆತನಕ್ಕೆ ಆಧಾರವಾಗಿರುವುದು ವಿಶ್ವಾಸ. ಅಂದರೆ ಯಾವುದೇ ಸ್ಥಿತಿಯಲ್ಲಿಯೂ ನಿನ್ನ ಗೆಳೆಯನ ಮೇಲೆ ನಂಬಿಕೆ ಕಳೆದುಕೊಳ್ಳಬಾರದು. ಯಾವುದೇ ಸಂದರ್ಭದಲ್ಲಿಯೂ ಸ್ನೇಹಿತನ ಮೇಲೆ ಅನುಮಾನ ಪಡಬಾರದು.

ಎರಡನೇಯ ನಿಯಮ:

ಪ್ರತಿ ಗೆಳೆತನದಲ್ಲಿಯೂ ಸಾಂಗತ್ಯ ಬಹಳ ಮುಖ್ಯವಾಗುತ್ತದೆ. ಅಂದರೆ ಸ್ನೇಹಿತ ತಪ್ಪು ದಾರಿ ಆಯ್ಕೆ ಮಾಡಿಕೊಂಡರೆ ಅವನನ್ನು ಸರಿಯಾಗಿ ತಿದ್ದಿ, ಬುದ್ದಿ ಹೇಳಬೇಕು. ಅದರ ಜೊತೆಗೆ ಅವನನ್ನು ಸರಿಯಾದ ದಾರಿಗೆ ತರುವ ಪ್ರಯತ್ನ ಮಾಡಬೇಕು. ಗೆಳೆತನದಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಗೆಳೆಯನಿಂದ ದೂರ ಆಗಬಾರದು ಎಂದು ಕೃಷ್ಣ ಹೇಳುತ್ತಾನೆ.

ಇದನ್ನೂ ಓದಿ: ಜನ್ಮಾಷ್ಟಮಿಗೆ ಭೇಟಿ ನೀಡಬಹುದಾದ ಕರ್ನಾಟಕದ ಶ್ರೀಕೃಷ್ಣ ದೇವಾಲಯಗಳಿವು

ಮೂರನೇಯ ನಿಯಮ:

ಗೆಳೆಯ ಯಾವಾಗ ಕರೆದರೂ ಅಂದರೆ ಅವನಿಗೆ ಅಗತ್ಯ ಇದ್ದಾಗ, ಅದು ರಾತ್ರಿ ಇರಲಿ, ಮಳೆ, ಬಿರುಗಾಳಿ ಇರಲಿ ಚಳಿ ಇರಲಿ ಯಾವಾಗ ಕರೆದರೂ ಬರಬೇಕು. ಅಗತ್ಯದಲ್ಲಿ ಬರದವನು ಗೆಳೆಯನೇ ಅಲ್ಲ. ನಿನ್ನ ಗೆಳೆಯನಿಗೋಸ್ಕರ ಯಾವಾಗ ಬೇಕಾದರೂ ಬರಬೇಕು.

ಈ ಮೂರು ನಿಯಮಗಳಿಗೆ ನಿಮ್ಮ ಒಪ್ಪಿಗೆ ಇದ್ದರೆ ನಿಮ್ಮ ಗೆಳೆಯನನ್ನು ಎಂದಿಗೂ, ಯಾರಿಂದಲೂ ದೂರ ಮಾಡಲು ಸಾಧ್ಯವೇ ಇಲ್ಲ ಎನ್ನುತ್ತಾನೆ ಕೃಷ್ಣ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!