AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2024: ರಾಧಾ, ಕೃಷ್ಣರ ಸಂಬಂಧ ಗಟ್ಟಿಯಾಗಿರಲು ಈ ಮೂರು ನಿಯಮಗಳು ಕಾರಣ

ರಾಧಾ- ಕೃಷ್ಣರ ಸ್ನೇಹ ಸಂಬಂಧ ಎಲ್ಲರಿಗೂ ಸ್ಫೂರ್ತಿ ನೀಡುವಂತದ್ದು. ಅವರು ಜೀವನ ನಡೆಸುವುದಕ್ಕೆ ಜೊತೆಗಾರರಾಗದಿದ್ದರೂ ಅವರ ಪವಿತ್ರ ಸಂಬಂಧ, ಅದನ್ನು ಅವರು ಕಾಪಾಡಿಕೊಂಡ ರೀತಿ ಎಲ್ಲವೂ ಯುವ ಜನತೆಗೆ ಮಾದರಿಯಾಗುವಂತದ್ದು. ಆದರೆ ರಾಧಾ- ಕೃಷ್ಣರು ತಮ್ಮ ಸ್ನೇಹವನ್ನು ಅಷ್ಟು ಚೆಂದವಾಗಿ ಇಟ್ಟುಕೊಳ್ಳಲು ಕಾರಣವೇನು? ಕೃಷ್ಣನ ಹೇಳಿರುವ ಪ್ರಕಾರ ಗೆಳೆತನದಲ್ಲಿ ಈ ಮೂರು ನಿಯಮ ಪಾಲಿಸಿದರೆ ನಿಮ್ಮ ಫ್ರೆಂಡ್ ಶಿಪ್ ಎಂದಿಗೂ ದೂರವಾಗಲಾರದು. ಹಾಗಾದರೆ ಗೆಳೆತನ ಶಾಶ್ವತವಾಗಿ ಉಳಿಯುವಂತಹ ಆ ಮೂರು ನಿಯಮಗಳೇನು? ತಿಳಿದುಕೊಳ್ಳಿ.

Krishna Janmashtami 2024: ರಾಧಾ, ಕೃಷ್ಣರ ಸಂಬಂಧ ಗಟ್ಟಿಯಾಗಿರಲು ಈ ಮೂರು ನಿಯಮಗಳು ಕಾರಣ
Krishna Janmashtami
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 25, 2024 | 12:19 PM

Share

ರಾಧಾ- ಕೃಷ್ಣರ ಸಂಬಂಧದ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ!. ಅವರ ಪ್ರೀತಿ, ಅವರಿಬ್ಬರ ನಡುವೆ ಇದ್ದ ಸ್ನೇಹ ಸಂಬಂಧ ಎಲ್ಲರಿಗೂ ಸ್ಫೂರ್ತಿ ನೀಡುವಂತದ್ದು. ಅವರು ಜೀವನ ನಡೆಸುವುದಕ್ಕೆ ಜೊತೆಗಾರರಾಗದಿದ್ದರೂ ಅವರ ಪವಿತ್ರ ಸಂಬಂಧ, ಅದನ್ನು ಅವರು ಕಾಪಾಡಿಕೊಂಡ ರೀತಿ ಎಲ್ಲವೂ ಯುವ ಜನತೆಗೆ ಮಾದರಿಯಾಗುವಂತದ್ದು. ಆದರೆ ರಾಧಾ- ಕೃಷ್ಣರು ತಮ್ಮ ಸ್ನೇಹವನ್ನು ಅಷ್ಟು ಚೆಂದವಾಗಿ ಇಟ್ಟುಕೊಳ್ಳಲು ಕಾರಣವೇನು? ಕೃಷ್ಣನ ಹೇಳಿರುವ ಪ್ರಕಾರ ಗೆಳೆತನದಲ್ಲಿ ಈ ಮೂರು ನಿಯಮ ಪಾಲಿಸಿದರೆ ನಿಮ್ಮ ಫ್ರೆಂಡ್ ಶಿಪ್ ಎಂದಿಗೂ ದೂರವಾಗಲಾರದು. ಹಾಗಾದರೆ ಗೆಳೆತನ ಶಾಶ್ವತವಾಗಿ ಉಳಿಯುವಂತಹ ಆ ಮೂರು ನಿಯಮಗಳೇನು? ತಿಳಿದುಕೊಳ್ಳಿ.

ಕೃಷ್ಣನ ಪ್ರಕಾರ ಗೆಳೆತನವನ್ನು ಶಾಶ್ವತವಾಗಿ ಕಾಪಾಡಿಕೊಳ್ಳಲು ಈ 3 ನಿಯಮಗಳನ್ನು ಪಾಲನೆ ಮಾಡಬೇಕು.

ಮೊದಲನೇಯ ನಿಯಮ:

ಗೆಳೆತನಕ್ಕೆ ಆಧಾರವಾಗಿರುವುದು ವಿಶ್ವಾಸ. ಅಂದರೆ ಯಾವುದೇ ಸ್ಥಿತಿಯಲ್ಲಿಯೂ ನಿನ್ನ ಗೆಳೆಯನ ಮೇಲೆ ನಂಬಿಕೆ ಕಳೆದುಕೊಳ್ಳಬಾರದು. ಯಾವುದೇ ಸಂದರ್ಭದಲ್ಲಿಯೂ ಸ್ನೇಹಿತನ ಮೇಲೆ ಅನುಮಾನ ಪಡಬಾರದು.

ಎರಡನೇಯ ನಿಯಮ:

ಪ್ರತಿ ಗೆಳೆತನದಲ್ಲಿಯೂ ಸಾಂಗತ್ಯ ಬಹಳ ಮುಖ್ಯವಾಗುತ್ತದೆ. ಅಂದರೆ ಸ್ನೇಹಿತ ತಪ್ಪು ದಾರಿ ಆಯ್ಕೆ ಮಾಡಿಕೊಂಡರೆ ಅವನನ್ನು ಸರಿಯಾಗಿ ತಿದ್ದಿ, ಬುದ್ದಿ ಹೇಳಬೇಕು. ಅದರ ಜೊತೆಗೆ ಅವನನ್ನು ಸರಿಯಾದ ದಾರಿಗೆ ತರುವ ಪ್ರಯತ್ನ ಮಾಡಬೇಕು. ಗೆಳೆತನದಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಗೆಳೆಯನಿಂದ ದೂರ ಆಗಬಾರದು ಎಂದು ಕೃಷ್ಣ ಹೇಳುತ್ತಾನೆ.

ಇದನ್ನೂ ಓದಿ: ಜನ್ಮಾಷ್ಟಮಿಗೆ ಭೇಟಿ ನೀಡಬಹುದಾದ ಕರ್ನಾಟಕದ ಶ್ರೀಕೃಷ್ಣ ದೇವಾಲಯಗಳಿವು

ಮೂರನೇಯ ನಿಯಮ:

ಗೆಳೆಯ ಯಾವಾಗ ಕರೆದರೂ ಅಂದರೆ ಅವನಿಗೆ ಅಗತ್ಯ ಇದ್ದಾಗ, ಅದು ರಾತ್ರಿ ಇರಲಿ, ಮಳೆ, ಬಿರುಗಾಳಿ ಇರಲಿ ಚಳಿ ಇರಲಿ ಯಾವಾಗ ಕರೆದರೂ ಬರಬೇಕು. ಅಗತ್ಯದಲ್ಲಿ ಬರದವನು ಗೆಳೆಯನೇ ಅಲ್ಲ. ನಿನ್ನ ಗೆಳೆಯನಿಗೋಸ್ಕರ ಯಾವಾಗ ಬೇಕಾದರೂ ಬರಬೇಕು.

ಈ ಮೂರು ನಿಯಮಗಳಿಗೆ ನಿಮ್ಮ ಒಪ್ಪಿಗೆ ಇದ್ದರೆ ನಿಮ್ಮ ಗೆಳೆಯನನ್ನು ಎಂದಿಗೂ, ಯಾರಿಂದಲೂ ದೂರ ಮಾಡಲು ಸಾಧ್ಯವೇ ಇಲ್ಲ ಎನ್ನುತ್ತಾನೆ ಕೃಷ್ಣ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?