AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2024: ಕಷ್ಣನಿಗೆ ತನ್ನ ಪ್ರೀತಿ ಸಿಗದಿರಲು ತುಳಸಿಯ ಶಾಪ ಕಾರಣವೇ!

ತುಳಸಿ ಬಹಳಷ್ಟು ಔಷಧೀಯ ಗುಣಗಳಿರುವ ಸಸ್ಯ ಎಂಬುದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಪವಿತ್ರ ತುಳಸಿಯ ಜೀವನಗಾಥೆ ಮತ್ತಷ್ಟು ವಿಶೇಷತೆಗಳನ್ನು ಹೊಂದಿದೆ. ಈ ಕಥೆಗಳು ಪದ್ಮ ಪುರಾಣ, ವಿಷ್ಣು ಪುರಾಣ ಸೇರಿದಂತೆ ಹಲವೆಡೆ ಬರುತ್ತದೆ. ಆದರೆ ಕೃಷ್ಣ ಜನ್ಮಾಷ್ಟಮಿಯ ಈ ಶುಭ ದಿನದಂದು ನಾವು ತುಳಸಿಯ ಜೀವನ, ಆಕೆಯ ಭಕ್ತಿಯ ಬಗ್ಗೆ ತಿಳಿದುಕೊಳ್ಳೋಣ. ಜೊತೆಗೆ ವೃಂದೆಯ ಶಾಪ, ವೃಂದಾ ದೇವಿ ತುಳಸಿಯಾಗಿ ಪ್ರಸಿದ್ದಿ ಪಡೆಯಲು ಕಾರಣವೇನು? ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

Krishna Janmashtami 2024: ಕಷ್ಣನಿಗೆ ತನ್ನ ಪ್ರೀತಿ ಸಿಗದಿರಲು ತುಳಸಿಯ ಶಾಪ ಕಾರಣವೇ!
ರಾಮ-ಸೀತೆ, ಕೃಷ್ಣ-ರಾಧೆ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 26, 2024 | 10:22 AM

Share

ತುಳಸಿ ಬಹಳಷ್ಟು ಔಷಧೀಯ ಗುಣಗಳಿರುವ ಸಸ್ಯ ಎಂಬುದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಪವಿತ್ರ ತುಳಸಿಯ ಜೀವನಗಾಥೆ ಮತ್ತಷ್ಟು ವಿಶೇಷತೆಗಳನ್ನು ಹೊಂದಿದೆ. ಈ ಕಥೆಗಳು ಪದ್ಮ ಪುರಾಣ, ವಿಷ್ಣು ಪುರಾಣ ಸೇರಿದಂತೆ ಹಲವೆಡೆ ಬರುತ್ತದೆ. ಆದರೆ ಕೃಷ್ಣ ಜನ್ಮಾಷ್ಟಮಿಯ ಈ ಶುಭ ದಿನದಂದು ನಾವು ತುಳಸಿಯ ಜೀವನ, ಆಕೆಯ ಭಕ್ತಿಯ ಬಗ್ಗೆ ತಿಳಿದುಕೊಳ್ಳೋಣ.

ವೃಂದಾ ದೇವಿ- ಜಲಂಧರರ ವಿವಾಹ

ವೃಂದಾ ದೇವಿ ಧರ್ಮಧ್ವಜನ ಮಗಳು. ಈತ ಮಹಾ ಶಿವಭಕ್ತ. ತಂದೆಯಂತೆ ಮಗಳೂ ಕೂಡ ಶಿವ- ಪಾರ್ವತಿಯರ ಪರಮಭಕ್ತೆ. ಈಕೆ ಸುದೀರ್ಘ ಕಾಲ ತಪಸ್ಸು ಮಾಡಿ ಪಾರ್ವತಿಯನ್ನು ಒಲಿಸಿಕೊಳ್ಳುತ್ತಾಳೆ. ಆಕೆ ಪ್ರತ್ಯಕ್ಷಳಾಗಿ “ಯಾವ ವರ ಬೇಕು” ಎಂದು ಕೇಳಿದಾಗ “ನಾನು ಪತಿವ್ರತೆಯಾಗಿರುವಷ್ಟು ಕಾಲ ನನ್ನ ಗಂಡ ಅಜೇಯನಾಗಿರಲಿ” ಎಂದು ಬೇಡಿಕೊಳ್ಳುತ್ತಾಳೆ. ವೃಂದಾ ದೇವಿಗೆ ತನ್ನ ಪಾತಿವ್ರತ್ಯದ ಮೇಲೆ ಅಷ್ಟೊಂದು ವಿಶ್ವಾಸ. ಪಾರ್ವತಿ ದೇವಿ ಆಕೆಯ ತಪಸ್ಸಿಗೆ ಮೆಚ್ಚಿ ವರ ನೀಡುತ್ತಾಳೆ. ಇದೇ ವೇಳೆಗೆ ಶಿವ ಹಣೆಗಣ್ಣ ಬೆಂಕಿ, ಸಮುದ್ರದ ನೀರಿನಲ್ಲಿ ಬಿದ್ದು ಅಗ್ನಿ ತತ್ತ್ವ – ಜಲ ತತ್ತ್ವಗಳ ಎರಡು ತದ್ವಿರುದ್ಧ ಊರ್ಜೆಗಳ ಮಿಲನದಿಂದ ‘ಜಲಂಧರ’ ಜನಿಸಿರುತ್ತಾನೆ. ಸಮುದ್ರ ರಾಜ ಈತನನ್ನು ಸಾಕಿ ತಂದೆಯಾಗಿರುತ್ತಾನೆ. ಈ ಜಲಂಧರ ಮಹಾ ಶಕ್ತಿಶಾಲಿ ಜೊತೆಗೆ ಶಿವನಂತಹ ತೋರುವ ದೇಹ, ಮೈಬಣ್ಣವನ್ನು ಹೊಂದಿರುತ್ತಾನೆ. ಈತ ಪಾರ್ವತಿಯನ್ನು ಕಂಡು ಮೋಹಗೊಳ್ಳುತ್ತಾನೆ. ಹೇಗಾದರೂ ಆಕೆಯನ್ನು ಪಡೆದೇ ತೀರಬೇಕೆಂದು ಬಯಸುತ್ತಾನೆ. ಇದನ್ನರಿತ ಶುಕ್ರಾಚಾರ್ಯರು ಜಲಂಧರನನ್ನು ಕುರಿತು, “ವೃಂದೆಯನ್ನು ವಿವಾಹವಾಗಿ ಅಜೇಯ ಮತ್ತು ಅಮರತ್ವದ ಬಲ ಪಡೆದುಕೋ. ಆಕೆ ಪತಿವ್ರತೆಯಾಗಿರುವವರೆಗೂ ನಿನಗೆ ಅಳಿವಿಲ್ಲ.” ಎಂದು ಸಲಹೆ ನೀಡುತ್ತಾರೆ. ವೃಂದೆಯನ್ನು ಮದುವೆಯಾಗಿ ಅವಳ ಮೂಲಕ ಮತ್ತಷ್ಟು ಬಲ ಪಡೆದು ಶಿವನೊಡನೆ ಹೋರಾಡಿ ಪಾರ್ವತಿಯನ್ನು ಪಡೆಯಬಹುದು ಎಂದು ಆಲೋಚಿಸುವ ಜಲಂಧರ ಅದಕ್ಕೊಪ್ಪುತ್ತಾನೆ. ಈ ರೀತಿಯಾಗಿ ವೃಂದಾದೇವಿ ಮತ್ತು ಜಲಂಧರರ ಮದುವೆ ನಡೆಯುತ್ತದೆ.

ಕೆಲ ಕಾಲಾನಂತರ ಜಲಂಧರ ಶಿವನ ಮೇಲೆ ಯುದ್ಧ ಘೋಷಿಸುತ್ತಾನೆ. ವೃಂದಾ ದೇವಿಯ ಪಾತಿವ್ರತ್ಯ ಮತ್ತು ಪಾರ್ವತಿ ಆಕೆಗೆ ನಿಡಿದ್ದ ವರಗಳ ಪರಿಣಾಮ ಆತ ಸೋಲುವುದಿಲ್ಲ. ಶಿವನೂ ಸೋಲಲಾರ. ಇವರಿಬ್ಬರಿಂದ ಸೃಷ್ಟಿಯ ಸಮತೋಲನವೇ ತಪ್ಪತೊಡಗುತ್ತದೆ. ಆಗ ಸ್ಥಿತಿಕರ್ತನಾದ ಮಹಾವಿಷ್ಣು ಸೃಷ್ಟಿಯ ಸಮತೋಲನ ಕಾಪಾಡಲು ಜಲಂಧರನಂತೆ ವೇಷ ಮರೆಸಿಕೊಂಡು ವೃಂದೆಯ ಬಳಿಗೆ ಹೋಗುತ್ತಾನೆ. ಇದರಿಂದ ಆಕೆಯ ಪಾತಿವ್ರತ್ಯ ಭಂಗವಾಗುತ್ತದೆ. ಇತ್ತ ಜಲಂಧರ ಸೋತು, ಮಹಾದೇವನ ತ್ರಿಶೂಲಕ್ಕೆ ಬಲಿಯಾಗುತ್ತಾನೆ. ವೃಂದೆ ತನ್ನ ಬಳಿ ಬಂದವ ವಿಷ್ಣು ಎಂದು ತಿಳಿದು, ಚಿತೆಗೆ ಧುಮುಕುತ್ತಾಳೆ.

ಇದನ್ನೂ ಓದಿ: ಜೀವನದಲ್ಲಿ ಅಳವಡಿಸಿಕೊಳ್ಳಬಹುದಾದ ಶ್ರೀಕೃಷ್ಣನ ಸಂದೇಶಗಳಿವು

ವೃಂದೆಯ ಶಾಪ

ವಿಷ್ಣುವಿನ ಮೇಲಿನ ಕೋಪದಿಂದ “ನಿನ್ನ ಹೆಂಡತಿಯ ಪಾತಿವ್ರತ್ಯವನ್ನೂ ಯಾರಾದರೊಬ್ಬರು ಭಂಗ ಪಡಿಸಲಿ” ಎಂದು ಶಪಿಸುತ್ತಾಳೆ. ಆಗ ಲಕ್ಷ್ಮೀ ದೇವಿ ವೃಂದೆಯ ಬಳಿ ಬಂದು ಗಂಡನ ಪರವಾಗಿ ಕ್ಷಮೆ ಬೇಡುತ್ತಾಳೆ. ಅದೇ ವೇಳೆಗೆ ಶಿವ ಪ್ರತ್ಯಕ್ಷನಾಗಿ ಜಲಂಧರನ ಪಾಪಕರ್ಮಗಳ ಬಗ್ಗೆ ವೃಂದೆಗೆ ತಿಳಿಸುತ್ತಾನೆ. ಶಿವನ ಮಾತು ಆಕೆ ನೋಡುಕೊಳ್ಳುವಂತೆ ಮಾಡುತ್ತದೆ. ಮತ್ತೊಂದು ಹೆಣ್ಣನ್ನು ಮೋಹಿಸಿದ, ಅದರಲ್ಲೂ ತನ್ನ ಆರಾಧ್ಯಳೂ ಜಗಜ್ಜನನಿಯೂ ಆದ ಪಾರ್ವತಿಯನ್ನೇ ಕಾಮಿಸಲು ಬಯಸಿದ ಜಲಂಧರನ ಬಗ್ಗೆ ಅವಳಲ್ಲಿ ತಾತ್ಸಾರ ಮೂಡುತ್ತದೆ. ವಿಷ್ಣು ಮಾಡಿದ್ದು ತಪ್ಪೇ ಆಗಿದ್ದರೂ ತನ್ನ ಶಾಪವನ್ನು ಸ್ವಲ್ಪ ನಯಗೊಳಿಸಿ, “ನಿನ್ನ ಪತ್ನಿಗೆ ಕೇವಲ ಆಪಾದನೆ ತಗುಲಲಿ, ಅದರ ಕಷ್ಟವನ್ನು ನೀನು ಅನುಭವಿಸುವಂತಾಗಲಿ” ಎನ್ನುತ್ತಾಳೆ. ಜೊತೆಗೆ ನನ್ನ ಪಾತಿವ್ರತ್ಯವನ್ನು ಹಾಳು ಮಾಡಿದ್ದಕ್ಕಾಗಿ ನನಗೆ ನಿನ್ನ ಪತ್ನಿಯ ಸ್ಥಾನ ಕೊಡಬೇಕು ಎಂದು ಕರಾರು ಹಾಕುತ್ತಾಳೆ. ಹಾಗಾಗಿ ಮಹಾವಿಷ್ಣು ಆಕೆಯನ್ನು ಎದೆಯ ಮೇಲೆ ಧರಿಸಿ “ನೀನು ಸದಾ ಅತ್ಯಂತ ಪವಿತ್ರಳೆಂಬ ಮನ್ನಣೆಗೆ ಪಾತ್ರಳಾಗುವಂತಾಗಲಿ” ಎಂದು ಹರಸುತ್ತಾನೆ ಮುಂದೆ ರಾಮಾವತಾರದಲ್ಲಿ ಸೀತಾಪಹರಣದ ಮೂಲಕ ತುಳಸಿಯ ಶಾಪ ನಿಜವಾಗುತ್ತದೆ. ಕೃಷ್ಣಾವತಾರದಲ್ಲಿ ಮಹಾವಿಷ್ಣು ವೃಂದೆಯನ್ನು ಮದುವೆಯಾಗಿ ತನ್ನ ಪತ್ನಿಯ ಸ್ಥಾನ ನೀಡುತ್ತಾನೆ. ಹೀಗೆ ವೃಂದಾ ದೇವಿ ತುಳಸಿಯಾಗಿ ಲೋಕದಲ್ಲಿ ಪ್ರಸಿದ್ದಿ ಪಡೆಯುತ್ತಾಳೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?