AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2025: ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ದಿನ ನಿಮ್ಮ ಪ್ರೀತಿಪಾತ್ರರಿಗೆ ಹೀಗೆ ಶುಭಾಶಯ ತಿಳಿಸಿ

ಪ್ರತಿವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯ ದಿನ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್‌ 16 ರಂದು ಆಚರಿಸಲಾಗುತ್ತದೆ. ಜಗತ್ಪಾಲಕ ಶ್ರೀಕೃಷ್ಣನ ಈ ಹಬ್ಬದ ದಿನ ನಿಮ್ಮ ಪ್ರೀತಿಪಾತ್ರರಿಗೆ ಈ ಮುತ್ತಿನಂತಹ ಸಂದೇಶಗಳೊಂದಿಗೆ ಶುಭಾಶಯಗಳನ್ನು ತಿಳಿಸಿ.

Krishna Janmashtami 2025: ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ದಿನ ನಿಮ್ಮ ಪ್ರೀತಿಪಾತ್ರರಿಗೆ ಹೀಗೆ ಶುಭಾಶಯ ತಿಳಿಸಿ
ಶ್ರೀಕೃಷ್ಣ ಜನ್ಮಾಷ್ಟಮಿImage Credit source: Getty Images
ಮಾಲಾಶ್ರೀ ಅಂಚನ್​
|

Updated on: Aug 14, 2025 | 6:11 PM

Share

ಶ್ರೀಕೃಷ್ಣನನ್ನು (Shree Krishna) ವಿಷ್ಣುವಿನ ಎಂಟನೇ ಅವತಾರವೆಂದು ಹೇಳಲಾಗುತ್ತದೆ. ಭೂಮಿಯಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ದುಷ್ಟರ ಸಂಹಾರಕ್ಕಾಗಿ ವಿಷ್ಣು ಮಾನವನ ರೂಪದಲ್ಲಿ ಶ್ರೀ ಕೃಷ್ಣನಾಗಿ ಜನಿಸಿದ ದಿನವೇ ಈ ಶ್ರೀಕೃಷ್ಣ ಜನ್ಮಾಷ್ಟಮಿ. ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯ ದಿನದಂದು ಜಗತ್ಪಾಲಕ ಶ್ರೀಕೃಷ್ಣ ಜನಿಸಿದ ಎಂದು ಹೇಳಲಾಗುತ್ತದೆ, ಆದ್ದರಿಂದ ಪ್ರತಿವರ್ಷ ಈ ಅಷ್ಟಮಿಯ ದಿನದಂದು ಗೋಕುಲಾಷ್ಟಮಿಯನ್ನು ಆಚರಿಸಲಾಗುತ್ತದೆ. ಈ ಬಾರಿ ಆಗಸ್ಟ್‌ 16 ರಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು (Krishna Janmashtami) ಆಚರಿಸಲಾಗುತ್ತಿದ್ದು, ಈ ಶುಭ ದಿನದಂದು ನಿಮ್ಮ ಪ್ರೀತಿಪಾತ್ರರಿಗೆ ಶ್ರೀಕೃಷ್ಣನ ಈ ಮುತ್ತಿನಂತಹ ಸಂದೇಶದೊಂದಿಗೆ ಶುಭಾಶಯಗಳನ್ನು ತಿಳಿಸಿ.

ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ದಿನ ನಿಮ್ಮ ಪ್ರೀತಿಪಾತ್ರರಿಗೆ ಹೀಗೆ ಶುಭಾಶಯ ತಿಳಿಸಿ:

  • ಶ್ರೀಕೃಷ್ಣನ ದೈವಿಕ ಆಶೀರ್ವಾದದೊಂದಿಗೆ ನಿಮ್ಮ ಜೀವನವು ದೀಪದಂತೆ ಸದಾ ಬೆಳಗಲಿ. ನಿಮಗೂ ನಿಮ್ಮ ಕುಟುಂಬಕ್ಕೂ ಜನ್ಮಾಷ್ಟಮಿಯ ಶುಭಾಶಯಗಳು.
  • ಶ್ರೀಕೃಷ್ಣಾಯ ವಾಸುದೇವಾಯ ದೇವಕಿ ನಂದನಾಯಚ ನಂದಗೋಪ ಕುಮಾರಾಯ ಗೋವಿಂದಾಯ ನವೋ ನಮಃ. ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.
  • ಧರ್ಮೋ ರಕ್ಷತಿ ರಕ್ಷಿತಃ ಅಂದರೆ ಧರ್ಮದಿಂದ ನಡೆಯುವವರನ್ನು ಧರ್ಮವೇ ರಕ್ಷಿಸುತ್ತದೆ. ಯಾವಾಗಲೂ ಧರ್ಮದಿಂದ ನಡೆಯಿರಿ. ನಿಮಗೆಲ್ಲರಿಗೂ ಕೃಷ್ಣಾಷ್ಟಮಿಯ ಶುಭಾಶಯಗಳು.
  • ನಿಮಗೂ ನಿಮ್ಮ ಕುಟುಂಬಕ್ಕೂ ಶ್ರೀಕೃಷ್ಣ ಸುಖ, ಶಾಂತಿ, ಸಮೃದ್ಧಿಯನ್ನು ಕರುಣಿಸಲಿ. ಶ್ರೀಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು.
  • ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ, ಅಭ್ಯುತ್ಥಾನಮಧರ್ಮಸ್ಯ ತದಾತ್ಮಾನಂ ಸೃಜಾಮ್ಯಹಂ, ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ, ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ. ಎಲ್ಲರಿಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.
  • ಶ್ರೀ ಕೃಷ್ಣನು ನಿಮ್ಮ ಜೀವನದಲ್ಲಿನ ಕಷ್ಟ ಕಾರ್ಪಣ್ಯಗಳನ್ನು ದೂರಾಗಿಸಿ, ನಿಮ್ಮ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸಲಿ. ಗೋಕುಲಾಷ್ಟಮಿಯ ಶುಭಾಶಯಗಳು.
  • ಎಲ್ಲರನ್ನೂ ಪ್ರೀತಿ, ಕೆಲವರನ್ನೂ ಮಾತ್ರ ನಂಬಿ, ಪ್ರಪಂಚದಲ್ಲಿ ಎಲ್ಲವೂ ಸತ್ಯ, ಆದರೆ ಎಲ್ಲರೂ ಸತ್ಯವಂತರಲ್ಲ ಎಂಬ ಸತ್ಯವನ್ನು ಅರಿತು ಜೀವನ ಸಾಗಿಸಿ, ಶ್ರೀಕೃಷ್ಣನ ಆಶಿರ್ವಾದ ಸದಾ ನಿಮ್ಮ ಮೇಲಿರಲಿ.
  • ಕರ್ಮಾಣ್ಯೇವಾಧಿಕಾರಸ್ತೆ ಮಾ ಫಲೇಷು ಕದಾಚನ ಮಾ ಕರ್ಮಫಲ ಹೇತುರ್ಭುರ್ಮಾತೇ ಸಂಗೋಸ್ತ್ವ ಕರ್ಮಣಿ. ಕೃಷ್ಣಜನ್ಮಾಷ್ಟಮಿಯ ಶುಭಾಶಯಗಳು.
  • ನಿಮ್ಮ ಕೆಲಸವನ್ನು ನೀವು ನಿಷ್ಠೆ, ಪ್ರಾಮಾಣಿಕವಾಗಿ ಮಾಡಿ ಅದರಿಂದ ಯಾವುದೇ ಫಲಾಫಲಗಳನ್ನು ನಿರೀಕ್ಷಿಸಬೇಡಿ. ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.
  • ಅಧರ್ಮದಿಂದ ಶತ್ರು ಹಲವು ಬಾರಿ ಗೆಲ್ಲಬಹುದು ಆದರೆ ಕರ್ಮ ಎದುರಾಗುವ ವೇಳೆ ಧರ್ಮ ಅವನನ್ನು ಸುಡಲು ಪ್ರಾರಂಭಿಸುತ್ತದೆ. ಹಾಗಾಗಿ ಯಾವಾಗಲೂ ಸತ್ಯದ ದಾರಿಯಲ್ಲಿಯೇ ನಡೆಯಿರಿ. ಶ್ರೀಕೃಷ್ಣ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದು ಮಾಡಲಿ.

ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿ ದಿನ ತಪ್ಪದೇ ಭೇಟಿ ನೀಡಲೇಬೇಕಾದ ಕೃಷ್ಣ ದೇವಾಲಯಗಳಿವು

ಇದನ್ನೂ ಓದಿ
Image
ಕೃಷ್ಣ ಜನ್ಮಾಷ್ಟಮಿ ದಿನ ತಪ್ಪದೇ ಭೇಟಿ ನೀಡಲೇಬೇಕಾದ ಕೃಷ್ಣ ದೇವಾಲಯಗಳಿವು
Image
ಶ್ರೀಕೃಷ್ಣನ ಮೈ ಬಣ್ಣ ನೀಲಿ ಯಾಕೆ? ಇದೇ ನೋಡಿ ಕಾರಣ
Image
ರಾಧ-ಕೃಷ್ಣ ವೇಷ ತೊಡುವುದಕ್ಕೆ ವಯಸ್ಸಿನ ಮಿತಿಯಿದೆಯೇ?
Image
ಶ್ರೀಕೃಷ್ಣ ಜಗತ್ತಿಗೆ ಹೇಳಿದ ಈ ಮೂರು ಕಟು ಸತ್ಯಗಳ ಬಗ್ಗೆ ನಿಮಗೆ ತಿಳಿದಿದ್ಯಾ
  • ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಜಗತ್ಪಾಲಕನ ಆಶಿರ್ವಾದ ಸದಾ ನಿಮ್ಮ ಹಾಗೂ ನಿಮ್ಮ ಕುಟುಂಬದ ಮೇಲಿರಲಿ ಎಂದು ನಾನು ಕೇಳಿಕೊಳ್ಳುತ್ತೇನೆ.
  • ವಸುದೇವ ಸುತಂ ದೇವಂ ಕಂಸ ಚಾರೂಣ ಮರ್ದನಂ ದೇವಕಿ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ. ಸರ್ವರಿಗೂ ಶ್ರೀಕೄಣ ಜನ್ಮಾಷ್ಟಮಿಯ ಶುಭಾಶಯಗಳು.
  • ಶ್ರೀಕೃಷ್ಣ ನಿಮಗೆ ಆರೋಗ್ಯ, ಐಶ್ವರ್ಯ, ಸಂಪತ್ತು, ಸಮೃದ್ಧಿಯನ್ನು ಕರುಣಿಸಲಿ. ಎಲ್ಲರಿಗೂ ಗೋಕುಲಾಷ್ಟಮಿಯ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ