AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmasthami Wishes 2024 : ಮುದ್ದು ಕೃಷ್ಣನ ಜನ್ಮ ದಿನಕ್ಕೆ ನಿಮ್ಮ ಆತ್ಮೀಯರಿಗೆ ಈ ರೀತಿ ಶುಭಾಶಯ ಕೋರಿ

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈ ಬಾರಿ ಆಗಸ್ಟ್ 26 ರಂದು ಶ್ರೀ ಕೃಷ್ಣನ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ಪ್ರತಿಬಾರಿಯಂತೆ ಈ ಕೃಷ್ಣನ ಜನ್ಮದಿನದ ಸಂದರ್ಭದಲ್ಲೂ ಪ್ರೀತಿಪಾತ್ರರಿಗೆ ಶುಭಸಂದೇಶಗಳನ್ನು ಕಳುಹಿಸುವುದು ಸಂಪ್ರದಾಯವಾಗಿದ್ದು, ನಿಮ್ಮ ಆತ್ಮೀಯರಿಗೆ ಶುಭಾಶಯಗಳನ್ನು ಕೋರಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿಕೊಳ್ಳಬಹುದು.

Krishna Janmasthami Wishes 2024 : ಮುದ್ದು ಕೃಷ್ಣನ ಜನ್ಮ ದಿನಕ್ಕೆ ನಿಮ್ಮ ಆತ್ಮೀಯರಿಗೆ ಈ ರೀತಿ ಶುಭಾಶಯ ಕೋರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 22, 2024 | 2:25 PM

Share

ಶ್ರೀ ಕೃಷ್ಣ ಜನ್ಮಾಷ್ಟಮಿ ದೇಶದಾದ್ಯಂತ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನವಾಗಿದ್ದು, ಈ ಬಾರಿ ಆಗಸ್ಟ್ 26 ರಂದು ದೇಶದಾದಂತ್ಯ ಅದ್ದೂರಿಯಿಂದ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಕೃಷ್ಣ ಮಂದಿರಗಳಲ್ಲಿ ವಿಶೇಷವಾದ ಆಚರಣೆಯ ಜೊತೆಗೆ ಸಾಂಪ್ರದಾಯಿಕ ಆಟಗಳು, ಚಿಕ್ಕ ಮಕ್ಕಳಿಗೆ ರಾಧಾ ಕೃಷ್ಣನ ಅಲಂಕಾರ ಮಾಡಿ ನೋಡುವುದೇ ಕಣ್ಣಿಗೆ ಹಬ್ಬ. ಈ ವಿಶೇಷವಾದ ದಿನದಂದು ನಿಮ್ಮ ಪ್ರೀತಿ ಪಾತ್ರರಿಗೂ ಹಬ್ಬದ ಶುಭಾಶಯಗಳನ್ನು ಕೋರುವುದು ಮುಖ್ಯ. ಈ ಸಂದೇಶಗಳನ್ನು ಕಳುಹಿಸಿ ಶುಭಾಶಯಗಳನ್ನು ಕೋರಬಹುದು.

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಆತ್ಮೀಯರಿಗೆ ಕೋರಲು ಶುಭಾಶಯಗಳು

  • ಮಹಾಭಾರತದಲ್ಲಿ ಅರ್ಜುನನಿಗೆ ದಾರಿ ತೋರಿಸಿದ ಶ್ರೀ ಕೃಷ್ಣನು ನಿಮ್ಮ ಜೀವನದಲ್ಲಿಯೂ ದಾರಿ ತೋರಲಿ. ಕಷ್ಟವನ್ನು ದೂರ ಮಾಡಿ ಬದುಕನ್ನು ಸುಖಮಯವನ್ನಾಗಿಸಲಿ. ತಮಗೆ ಹಾಗೂ ತಮ್ಮ ಕುಟುಂಬದವರಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.
  • ಧರ್ಮೋ ರಕ್ಷತಿ ರಕ್ಷಿತಃ. ಧರ್ಮದಿಂದ ನಡೆಯುವವರನ್ನು ಧರ್ಮವೇ ರಕ್ಷಿಸುತ್ತದೆ. ಯಾವಾಗಲೂ ಧರ್ಮದ ಮಾರ್ಗದಲ್ಲಿ ನಡೆಯಿರಿ. ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.
  • ಶ್ರೀಕೃಷ್ಣನ ಆಶೀರ್ವಾದ ಸದಾ ನಿಮ್ಮ ಹಾಗೂ ನಿಮ್ಮ ಕುಟುಂಬದ ಮೇಲಿರಲಿ. ಈ ಬಾರಿ ಹಬ್ಬವು ನಿಮಗೆ ಸಂತೋಷ ಹಾಗೂ ಆರೋಗ್ಯವನ್ನು ತಂದು ಕೊಡಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.
  • ಹರೇ ಕೃಷ್ಣ, ಹರೇ ಕೃಷ್ಣ… ಕೃಷ್ಣ ಕೃಷ್ಣ, ಹರೇ ಹರೇ… ನಿಮಗೂ ನಿಮ್ಮ ಕುಟುಂಬಕ್ಕೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾರ್ಥಿಕ ಶುಭಾಶಯಗಳು.
  • ನಿಮ್ಮ ಗುರಿಯನ್ನು ಸಾಧಿಸಲು ನೀವು ವಿಫಲವಾದರೆ, ತಂತ್ರವನ್ನು ಬದಲಾಯಿಸಿ, ಗುರಿಯಲ್ಲ. ಶ್ರೀಕೃಷ್ಣನು ನಿಮ್ಮ ಬದುಕಿಗೆ ಸದಾ ಒಳ್ಳೆಯದನ್ನೇ ಮಾಡಲಿ. ಶ್ರೀಕೃಷ್ಣ ಜನ್ಮಾಷ್ಟಮಿಯ ಹಾರ್ಥಿಕ ಶುಭಾಶಯಗಳು.
  • ಶ್ರೀಕೃಷ್ಣನ ಕೊಳಲು ನಿಮ್ಮ ಜೀವನದಲ್ಲಿ ಪ್ರೀತಿಯ ಮಧುರವನ್ನು ಆಹ್ವಾನಿಸಲಿ. ಕೊಳಲಿನ ನಾದದಂತೆ ನಿಮ್ಮ ಜೀವನವು ಸುಖ ಸಂತೋಷದಿಂದ ತುಂಬಿರಲಿ. ನಿಮ್ಮೆಲ್ಲರಿಗೂ ಜನ್ಮಾಷ್ಟಮಿಯ ಶುಭಾಶಯಗಳು

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ