AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSTDCನಿಂದ ವಿಶೇಷ ಪ್ಯಾಕೇಜ್: 20% ರಿಯಾಯಿತಿ, ಎಲ್ಲಿಗೆಲ್ಲ ಟೂರ್

KSTDC ಹೊಸ ವರ್ಷದ ವಿಶೇಷ ದಕ್ಷಿಣ ಭಾರತ ಪ್ರವಾಸ ಪ್ಯಾಕೇಜ್ ಪರಿಚಯಿಸಿದೆ. ಮೈಸೂರು, ಊಟಿ, ಕೊಡೆಕೆನಾಲ್ ಒಳಗೊಂಡ ಈ ಪ್ರವಾಸಕ್ಕೆ 20% ರಿಯಾಯಿತಿ ಲಭ್ಯ. ಪ್ರಮುಖ ಸ್ಥಳಗಳ ಭೇಟಿ, ಸಾರಿಗೆ, ವಸತಿ ವಿವರಗಳನ್ನು ಒಳಗೊಂಡಿದ್ದು, ಪ್ರಕೃತಿ ಸೌಂದರ್ಯದ ತಾಣಗಳನ್ನು ಕಡಿಮೆ ವೆಚ್ಚದಲ್ಲಿ ನೋಡಲು ಉತ್ತಮ ಅವಕಾಶವಾಗಿದೆ. ಸರ್ಕಾರಿ ನೌಕರರಿಗೆ LTC ಸೌಲಭ್ಯವೂ ಇದೆ.

KSTDCನಿಂದ ವಿಶೇಷ ಪ್ಯಾಕೇಜ್: 20% ರಿಯಾಯಿತಿ, ಎಲ್ಲಿಗೆಲ್ಲ ಟೂರ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jan 09, 2026 | 12:21 PM

Share

ದಕ್ಷಿಣ ಭಾರತ ಪ್ರವಾಸಗಳ ತವರು, ( KSTDC South India Tour) ಇಲ್ಲಿರುವಷ್ಟು ಪ್ರಕೃತಿ ಸೌಂದರ್ಯದ ಸೋಬಗು ಎಲ್ಲಿಯೂ ಇರಲು ಸಾಧ್ಯವಿಲ್ಲ. ಅದರಲ್ಲೂ ಕರ್ನಾಟಕ, ಕೇರಳ, ತಮಿಳುನಾಡು ತನ್ನದೇ ಆಗಿರುವ ಅದ್ಭುತ ಪ್ರಕೃತಿ ಸೌಂದರ್ಯ ಹೊಂದಿದೆ. ಆದರೆ ಇಲ್ಲಿ ಹೋಗುವುದಕ್ಕೆ ತುಂಬಾ ಖರ್ಚು ಆಗುತ್ತದೆ ಎಂಬುದು ಅನೇಕರ ಚಿಂತೆ. ಅದಕ್ಕೆ kstdc (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ) ಆಗ್ಗಾಗೆ ವಿಶೇಷ ಪ್ಯಾಕೇಜ್​​ಗಳನ್ನು ನೀಡುತ್ತದೆ. ಇದೀಗ ಹೊಸ ವರ್ಷದ ಎರಡನೇ ವಾರ ವಿಶೇಷ ಪ್ಯಾಕೇಜ್​​​​ ಒಂದನ್ನು ಬಿಡುಗಡೆ ಮಾಡಿದೆ. ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ಪ್ರವಾಸೋದ್ಯಮ ತಾಣಗಳಾದ ಮೈಸೂರು, ಊಟಿ ಮತ್ತು ಕೊಡೈಕೆನಾಲ್ ಪ್ರವಾಸ ಹೋಗಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶ. ಈ ಪ್ಯಾಕೇಜ್​​​​​ ಮೂಲಕ ವಿಶೇಷ ಸ್ಥಳಗಳನ್ನು ನೋಡಬಹುದು. ಒಂದು ವೇಳೆ ಈ ಪ್ಯಾಕೇಜ್​​​​ ಆಯ್ಕೆ ಮಾಡಿಕೊಂಡರೆ 20% ರಿಯಾಯಿತಿ ಇರುತ್ತದೆ. ಪ್ರವಾಸದ ಮಾರ್ಗ, ಸ್ಥಳ, ಟಿಕೆಟ್ ದರ, ಸಂಚಾರ ಸಮಯ, ಪ್ಯಾಕೇಜ್ ಬುಕ್ಕಿಂಗ್ ಹೇಗೆ ಎಂಬ ಮಾಹಿತಿ ಇಲ್ಲಿದೆ ನೋಡಿ:

ಭೇಟಿ ನೀಡುವ ಪ್ರಮುಖ ನಗರಗಳು:

ಮೈಸೂರು (ಅರಮನೆ ನಗರಿ): ಪ್ರಪಂಚದಾದ್ಯಂತ ಪ್ರವಾಸಿಗರನ್ನು ಸೆಳೆಯುವ ಮೈಸೂರು, ಭವ್ಯ ಅರಮನೆ, ಮ್ಯೂಸಿಯಂಗಳು, ಚರ್ಚುಗಳು ಮತ್ತು ಪ್ರಾಣಿಸಂಗ್ರಹಾಲಯಕ್ಕೆ ಹೆಸರುವಾಸಿಯಾಗಿರುವ ಕಾರಣ, ಇಲ್ಲಿ ಒಂದು ಅದ್ಭುತ ಕ್ಷಣಗಳನ್ನು ಕಳೆಯಬಹುದು. ವಿಶೇಷ ಪ್ರವಾಸಿ ತಾಣಗಳನ್ನು ನೋಡಬಹುದು.

ಊಟಿ (ಗಿರಿದಾಮಗಳ ರಾಣಿ): ಇಲ್ಲಿನ ಚಹಾ ತೋಟಗಳು ವಿಶ್ವಪ್ರಸಿದ್ಧ. ನೀವು ಮಸಾಲಾ, ಮಲ್ಲಿಗೆ, ಏಲಕ್ಕಿ ಮತ್ತು ಚಾಕೊಲೇಟ್ ಫ್ಲೇವರ್‌ನ ವಿವಿಧ ಚಹಾಗಳನ್ನು ಇಲ್ಲಿ ಸವಿಯಬಹುದು. ಇಲ್ಲಿನ ಬೆಟ್ಟಗಳು ಹಾಗೂ ವಿಶೇಷ ಪ್ರವಾಸಿ ತಾಣಗಳನ್ನು ನೋಡಬಹುದು.

ಕೊಡೈಕೆನಾಲ್ (ಗಿರಿಧಾಮಗಳ ರಾಜಕುಮಾರಿ): ತನ್ನ ಶಾಂತಿಯುತ ವಾತಾವರಣ ಮತ್ತು ಸುಂದರವಾದ ಬೆಟ್ಟಗುಡ್ಡಗಳಿಗೆ ಹೆಸರಾಗಿದೆ. ಈ ಪ್ರದೇಶವನ್ನು ದಂಪತಿಗಳು ಹೆಚ್ಚು ಇಷ್ಟಪಡುತ್ತಾರೆ. ಇಲ್ಲಿ ಹೆಚ್ಚು ಕಪಲ್ಸ್​ ಬರುತ್ತಾರೆ.

ಇದನ್ನೂ ಓದಿ: 2026ರಲ್ಲಿ ಪ್ರವಾಸ ಪ್ರಿಯರಿಗೆ ಸಿಗಲಿವೆ ಸಾಲು ಸಾಲು ರಜೆಗಳು; ಸಂಪೂರ್ಣ ವಿವರ ಇಲ್ಲಿದೆ

ನೋಡಬೇಕಾದ ಸ್ಥಳ:

ಶ್ರೀರಂಗಪಟ್ಟಣ: ಟಿಪ್ಪು ಸುಲ್ತಾನನ ದರಿಯಾ ದೌಲತ್, ಶ್ರೀರಂಗನಾಥ ಸ್ವಾಮಿ ದೇವಸ್ಥಾನ.

ಮೈಸೂರು: ಸೇಂಟ್ ಫಿಲೋಮಿನಾ ಚರ್ಚ್, ಮೈಸೂರು ಅರಮನೆ, ಚಾಮುಂಡಿ ಬೆಟ್ಟ, ಮೈಸೂರು ಮೃಗಾಲಯ ಮತ್ತು ಬೃಂದಾವನ ಗಾರ್ಡನ್.

ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ನಂಜುಂಡೇಶ್ವರ ದೇವಸ್ಥಾನ.

ಊಟಿ ಮತ್ತು ಕೊಡೈಕೆನಾಲ್: ಪ್ರಸಿದ್ಧ ಗಿರಿಧಾಮಗಳ ವೀಕ್ಷಣೆ.

ಸಾರಿಗೆ ಮತ್ತು ವಾಸ್ತವ್ಯದ ವಿವರ:

ಸಾರಿಗೆ: ಸುಸಜ್ಜಿತ ಡಿಲಕ್ಸ್ ಕೋಚ್ (Deluxe Coach) ಮೂಲಕ ಪ್ರಯಾಣ.

ಹೋಟೆಲ್ ವಾಸ್ತವ್ಯ:

ಮೈಸೂರಿನಲ್ಲಿ: ಹೋಟೆಲ್ ಮಯೂರ ಹೊಯ್ಸಳ (ಕೆಎಸ್‌ಟಿಡಿಸಿ ಹೋಟೆಲ್).

ಊಟಿಯಲ್ಲಿ: ಹೋಟೆಲ್ ಮಯೂರ ಸುದರ್ಶನ್ ಅಥವಾ ಸಮಾನ ದರ್ಜೆಯ ಹೋಟೆಲ್.

ಕೊಡೈಕೆನಾಲ್‌ನಲ್ಲಿ: ಹೋಟೆಲ್ ಎಸ್ ವಿ ಇಂಟರ್ನ್ಯಾಷನಲ್.

ಪ್ರವಾಸದ ಇತರ ಸೌಲಭ್ಯ:

ಮೈಸೂರು-ಊಟಿ-ಕೊಡೈಕೆನಾಲ್ ಪ್ರವಾಸ ಪ್ಯಾಕೇಜ್ ಗೆ ಒಬ್ಬರಿಗೆ ತಲಾ ₹9,310 ರೂಪಾಯಿ ಇದೆ. ಹಿರಿಯ ನಾಗರಿಕಿಗೆ ದರದಲ್ಲಿ ಶೇಕಡಾ 20ರಷ್ಟು ರಿಯಾಯಿತಿ ಇದೆ.

ಪ್ರತಿಯೊಂದು ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಸಾಕಷ್ಟು ಸಮಯವನ್ನು ನಿಗದಿಪಡಿಸಲಾಗಿದೆ.

ಪ್ರತಿಯೊಂದು ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಸಾಕಷ್ಟು ಸಮಯವನ್ನು ನಿಗದಿಪಡಿಸಲಾಗಿದೆ.

ಪ್ರವಾಸಿ ತಾಣಗಳ ಇತಿಹಾಸ ಮತ್ತು ಮಹತ್ವವನ್ನು ವಿವರಿಸಲು ಪರಿಣಿತ ಗೈಡ್ ಸೌಲಭ್ಯ.

ರಾಜ್ಯ, ಕೇಂದ್ರ ಮತ್ತು ಸಾರ್ವಜನಿಕ ವಲಯದ (PSU) ನೌಕರರಿಗೆ LTC (Leave Travel Concession) ಸೌಲಭ್ಯ ಲಭ್ಯವಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:17 pm, Fri, 9 January 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್