AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hemoglobin: ಹಿಮೋಗ್ಲೋಬಿನ್ ಕೊರತೆಯಿಂದ ದೇಹವು ದುರ್ಬಲಗೊಳ್ಳುತ್ತಿದೆಯಾ? ನಿತ್ಯ ಈ ಡ್ರೈಫ್ರೂಟ್ಸ್​ ತಿನ್ನಿ

ನಮ್ಮ ರಕ್ತದಲ್ಲಿ ಹಿಮೋಗ್ಲೋಬಿನ್ ಕೊರತೆಯಿದ್ದರೆ, ದೇಹ ದುರ್ಬಲವಾಗುತ್ತಾ ಹೋಗುತ್ತದೆ ಹಾಗೆಯೇ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಕಷ್ಟವಾಗುತ್ತದೆ.

Hemoglobin: ಹಿಮೋಗ್ಲೋಬಿನ್ ಕೊರತೆಯಿಂದ ದೇಹವು ದುರ್ಬಲಗೊಳ್ಳುತ್ತಿದೆಯಾ? ನಿತ್ಯ ಈ ಡ್ರೈಫ್ರೂಟ್ಸ್​ ತಿನ್ನಿ
Dry fruits
TV9 Web
| Edited By: |

Updated on: Sep 30, 2022 | 3:29 PM

Share

ನಮ್ಮ ರಕ್ತದಲ್ಲಿ ಹಿಮೋಗ್ಲೋಬಿನ್ ಕೊರತೆಯಿದ್ದರೆ, ದೇಹ ದುರ್ಬಲವಾಗುತ್ತಾ ಹೋಗುತ್ತದೆ ಹಾಗೆಯೇ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಕಷ್ಟವಾಗುತ್ತದೆ. ಹಿಮೋಗ್ಲೋಬಿನ್ ರಕ್ತ ಕಣಗಳಲ್ಲಿನ ಕಬ್ಬಿಣ ಆಧಾರಿತ ಪ್ರೋಟೀನ್ ಆಗಿದೆ. ಇದು ದೇಹದ ಎಲ್ಲಾ ಅಂಗಗಳಿಗೆ ಆಮ್ಲಜನಕವನ್ನು ತಲುಪಿಸಲು ಕೆಲಸ ಮಾಡುತ್ತದೆ.

ಇದಕ್ಕಾಗಿ ನೀವು ಕೆಲವು ಕಬ್ಬಿಣಾಂಶವಿರುವ ಆಹಾರವನ್ನು ಸೇವಿಸಬೇಕು, ಆಗ ಮಾತ್ರ ಹಿಮೋಗ್ಲೋಬಿನ್ ಕೊರತೆಯನ್ನು ನೀಗಿಸಲು ಸಾಧ್ಯವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಯಾವ ಡ್ರೈಫ್ರೂಟ್ಗಳು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. ಹಿಮೋಗ್ಲೋಬಿನ್ ಹೆಚ್ಚಿಸುವ ಡ್ರೈಫ್ರೂಟ್ಸ್

ವಾಲ್‌ನಟ್ ವಾಲ್​ನಟ್​ನಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಒಂದು ಹಿಡಿ ಸಿಪ್ಪೆ ಸುಲಿದ ವಾಲ್ ನಟ್ ನಿಂದ ದೇಹಕ್ಕೆ ಸುಮಾರು 0.82 ಮಿಗ್ರಾಂ ಕಬ್ಬಿಣಾಂಶ ಸಿಗುತ್ತದೆ. ಹಿಮೋಗ್ಲೋಬಿನ್ ಕೊರತೆಯಿದ್ದರೆ ಪ್ರತಿನಿತ್ಯ ವಾಲ್ ನಟ್ಸ್ ಸೇವಿಸಬೇಕು.

ಪಿಸ್ತಾ ರುಚಿ ಅನೇಕ ಜನರನ್ನು ತನ್ನತ್ತ ಆಕರ್ಷಿಸುತ್ತದೆ. ಒಂದು ಮುಷ್ಟಿ ಪಿಸ್ತಾದಲ್ಲಿ 1.11 ಮಿಗ್ರಾಂ ಕಬ್ಬಿಣಾಂಶವಿದೆ. ನೀವು ಅದನ್ನು ಸಾಮಾನ್ಯ ಆಹಾರದಲ್ಲಿ ಸೇರಿಸಿದರೆ, ನಂತರ ಕಬ್ಬಿಣಾಂಶ ದೇಹದಲ್ಲಿ ಹೆಚ್ಚಾಗುತ್ತದೆ, ಇದು ಹಿಮೋಗ್ಲೋಬಿನ್ ಕೊರತೆಯನ್ನು ತೆಗೆದುಹಾಕುತ್ತದೆ.

ಗೋಡಂಬಿ ಗೋಡಂಬಿಯನ್ನು ಅನೇಕ ಸಿಹಿತಿಂಡಿಗಳು ಮತ್ತು ಪಾಕವಿಧಾನಗಳನ್ನು ಅಲಂಕರಿಸಲು ಬಳಸಲಾಗುತ್ತದೆ, ಆದರೆ ಬೆರಳೆಣಿಕೆಯಷ್ಟು ಗೋಡಂಬಿಯಲ್ಲಿ ಸುಮಾರು 1.89 ಮಿಗ್ರಾಂ ಕಬ್ಬಿಣವಿದೆ ಎಂದು ನಿಮಗೆ ತಿಳಿದಿರುವುದಿಲ್ಲ. ಕಬ್ಬಿಣ ಮತ್ತು ಹಿಮೋಗ್ಲೋಬಿನ್ ಕೊರತೆಯನ್ನು ನೀಗಿಸಲು ಇದು ಪರಿಣಾಮಕಾರಿ ಪರಿಹಾರವಾಗಿದೆ.

ಬಾದಾಮಿ ಮೆದುಳನ್ನು ಚುರುಕುಗೊಳಿಸಲು ನಾವು ಪ್ರತಿದಿನ ಬಾದಾಮಿ ತಿನ್ನಬೇಕು ಎಂದು ಹೇಳಲಾಗುತ್ತದೆ, ಆದರೆ ಹಿಮೋಗ್ಲೋಬಿನ್ ಕೊರತೆಯಿಂದ ನಿಮ್ಮ ದೇಹವು ದುರ್ಬಲವಾಗಿದ್ದರೆ, ಪ್ರತಿದಿನ ಬೆಳಿಗ್ಗೆ ನೆನೆಸಿದ ಬಾದಾಮಿ ನಿಮ್ಮ ಆರೋಗ್ಯಕ್ಕೆ ಉತ್ತಮ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ