AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sleep Deprivation: ನಿದ್ದೆ ಹೃದಯದ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ತಿಳಿದಿದೆಯೇ?

ಸ್ಲೀಪ್ ಫೌಂಡೇಶನ್​​ನ ಅಧ್ಯಯನವೊಂದರ ಪ್ರಕಾರ, ಸಮಯಕ್ಕೆ ಸರಿಯಾಗಿ ನಿದ್ರಿಸುವುದರಿಂದ ಶೇಕಡಾ 20ರಷ್ಟು ರಕ್ತದೊತ್ತಡ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ತಿಳಿದು ಬಂದಿದೆ.

Sleep Deprivation: ನಿದ್ದೆ ಹೃದಯದ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ತಿಳಿದಿದೆಯೇ?
ನಿದ್ರಾಹೀನತೆImage Credit source: Scientific American
ಅಕ್ಷತಾ ವರ್ಕಾಡಿ
|

Updated on:Mar 12, 2023 | 2:59 PM

Share

ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ದಿನದಲ್ಲಿ 6 ರಿಂದ 8 ಗಂಟೆಗಳ ಕಾಲ ಸರಿಯಾದ ನಿದ್ರೆ ಅತ್ಯಗತ್ಯ. ಇದು ಹೃದಯದ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ನಿಮ್ಮ ಆರೋಗ್ಯವನ್ನು ಸುಧಾರಿಸುತ್ತದೆ. ನಿದ್ರೆಯ ಕೊರತೆಯು ಹೃದಯ ಸೇರಿದಂತೆ ದೇಹದ ಮೇಲೆ ಹಲವಾರು ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು. ನೀವು ನಿದ್ದೆ ಮಾಡಿದ ಸಮಯದಲ್ಲಿ ಹೃದಯ ಬಡಿತ ನಿಧಾನವಾಗುತ್ತದೆ ಮತ್ತು ರಕ್ತದೊತ್ತಡ ಕಡಿಮೆಯಾಗುತ್ತದೆ. ಇದ್ದರಿಂದಾಗಿ ಆರೋಗ್ಯದ ಮೇಲೆ ಸಾಕಷ್ಟು ಪ್ರಯೋಜನಗಳನ್ನು ಕಾಣಬಹುದು. ಸ್ಲೀಪ್ ಫೌಂಡೇಶನ್​​ನ ಅಧ್ಯಯನವೊಂದರ ಪ್ರಕಾರ, ಸಮಯಕ್ಕೆ ಸರಿಯಾಗಿ ನಿದ್ರಿಸುವುದರಿಂದ ಶೇಕಡಾ 20ರಷ್ಟು ರಕ್ತದೊತ್ತಡ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ತಿಳಿದು ಬಂದಿದೆ.

ನಿದ್ರೆಯ ಕೊರತೆಯು ಹೃದಯದ ಮೇಲೆ ಹಲವು ವಿಧಗಳಲ್ಲಿ ಪರಿಣಾಮ ಬೀರಬಹುದು. ಪ್ರಮುಖವಾಗಿ ರಕ್ತದೊತ್ತಡ, ಇದು ಹೃದಯ ಕಾಯಿಲೆ ಮತ್ತು ಹೃದಯಾಘಾತಕ್ಕೆ ಕಾರಣವಾಗುತ್ತದೆ. ಜೊತೆಗೆ ಸ್ಥೂಲಕಾಯತೆ ಮತ್ತು ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ ಎಂದು ಫರಿದಾಬಾದ್​​ನ ಕಾರ್ಡಿಯಾಲಜಿ ವಿಭಾಗ ನಿರ್ದೇಶಕರಾದ ಡಾ ಗಜಿಂದರ್ ಗೋಯಲ್ ಹಿಂದೂಸ್ಥಾನ್​​​ ಟೈಮ್ಸ್​​​ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮುಖದ ಮೇಲೆ ಒಂದೇ ಭಾಗದಲ್ಲಿ, ಪದೇ ಪದೇ ಮೊಡವೆಗಳು ಹುಟ್ಟುತ್ತಿದೆಯಾ? ಕಾರಣ ತಿಳಿದುಕೊಳ್ಳಿ

ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯ ಡಾ.ಪವನ್ ಕುಮಾರ್​​ರವರ ಪ್ರಕಾರ ನಿದ್ರೆಯ ಕೊರತೆಯು ಹೃದಯದ ಮೇಲೆ ಈ ಕೆಳಗಿನ 5 ವಿಧಗಳಲ್ಲಿ ಪರಿಣಾಮ ಬೀರುತ್ತದೆ ಎಂದು ಹೇಳುತ್ತಾರೆ.

  • ಹೃದಯಾಘಾತದ ಸಾಧ್ಯತೆಯನ್ನು ಹೆಚ್ಚಿಸುತ್ತದೆ.
  • ಹೃದಯ ವೈಫಲ್ಯದ ಸಾಧ್ಯತೆಯನ್ನು ಹೆಚ್ಚಿಸುತ್ತದೆ.
  • ಅಧಿಕ ರಕ್ತದೊತ್ತಡ, ಅಧಿಕ ಸಕ್ಕರೆ ಮತ್ತು ಅಧಿಕ ಕೊಲೆಸ್ಟ್ರಾಲ್‌ನಂತಹ ಹೃದಯ ಕಾಯಿಲೆಗಳಿಗೆ ಇತರ ಅಪಾಯಕಾರಿ ಸಮಸ್ಯೆಗೆ ಕಾರಣವಾಗುತ್ತದೆ.
  • ಮೊದಲೇ ಹೃದಯದ ಕಾಯಿಲೆಯಿಂದ ಬಳಲುತ್ತಿರುವವರ ಆರೋಗ್ಯವನ್ನು ಮತ್ತಷ್ಟು ಹದಗೆಡಿಸುತ್ತದೆ.
  • ಜಡ ಜೀವನಶೈಲಿ ಮತ್ತು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:59 pm, Sun, 12 March 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್