AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lal Bahadur Shastri Death Anniversary 2025: ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ 59 ನೇ ಪುಣ್ಯ ಸ್ಮರಣೆ;ಸ್ಫೂರ್ತಿದಾಯಕ ಉಲ್ಲೇಖ ಇಲ್ಲಿದೆ

ಲಾಲ್‌ ಬಹದ್ಧೂರ್ ಶಾಸ್ತ್ರಿ ಈ ದೇಶ ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ, ಅಪ್ರತಿಮ ನಾಯಕ, ಸಜ್ಜನಿಕೆಯ ವ್ಯಕ್ತಿತ್ವದಿಂದ ಚಿರಪರಿಚಿತರಾದ ವ್ಯಕ್ತಿ. ಜನವರಿ 11 ರಂದು ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಪುಣ್ಯ ಸ್ಮರಣೆ ದಿನವಾಗಿದೆ. ದೇಶ ಕಂಡ ಅಪ್ರತಿಮ ನಾಯಕ ಲಾಲ್ ಬಹದ್ದೂರ್ ಶಾಸ್ತ್ರಿ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

Lal Bahadur Shastri Death Anniversary 2025: ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ 59 ನೇ ಪುಣ್ಯ ಸ್ಮರಣೆ;ಸ್ಫೂರ್ತಿದಾಯಕ ಉಲ್ಲೇಖ ಇಲ್ಲಿದೆ
Lal Bahadur Shastri Death Anniversary 2025
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ|

Updated on: Jan 11, 2025 | 8:26 AM

Share

ಶ್ರೇಷ್ಠ ಮುತ್ಸದ್ಧಿ ಲಾಲ್ ಬಹದ್ದೂರ್ ಶಾಸ್ತ್ರಿಯವರು ಎಲ್ಲರಿಗೂ ಕೂಡ ಚಿರಪರಿಚಿತ. ಭಾರತದ ಹೆಮ್ಮೆಯ ಪುತ್ರ ಹಾಗೂ ಸ್ವತಂತ್ರ ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 59 ನೇ ಪುಣ್ಯ ಸ್ಮರಣೆ. ತಮ್ಮ ಅಧಿಕಾರವಧಿಯಲ್ಲಿ ಭ್ರಷ್ಟಾಚಾರರಹಿತ ನಾಯಕತ್ವಕ್ಕೆ ಹೆಸರುವಾಸಿಯಾಗಿದ್ದ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ವಿಶೇಷವಾಗಿ ಯುದ್ಧದ ಸಂದರ್ಭದಲ್ಲಿ ಶಾಸ್ತ್ರಿಜೀ ತೆಗೆದುಕೊಳ್ಳುತ್ತಿದ್ದ ನಿರ್ಧಾರಗಳು, ಭಾರತದ ಸಾರ್ವಭೌಮತ್ವ ಹಾಗೂ ಭದ್ರತೆ ಕಾಪಾಡಿಕೊಳ್ಳುವ ಅವರ ಸಂಕಲ್ಪವನ್ನು ಎತ್ತಿ ತೋರಿಸುತ್ತದೆ.

ಲಾಲ್ ಬಹದ್ದೂರ್ ಶಾಸ್ತ್ರಿಯವರು ಉತ್ತರ ಪ್ರದೇಶದ ವಾರಾಣಸಿ ಜಿಲ್ಲೆಯ ಮೊಘಲ್‌ಸರಾಯ್‌ನಲ್ಲಿ 1904 ಅಕ್ಟೋಬರ್ 2ರಂದು ಜನಿಸಿದರು. ಅವರ ತಂದೆ ಶಾರದಾ ಪ್ರಸಾದ್ ಮತ್ತು ತಾಯಿ ರಾಮದುಲಾರಿ ದೇವಿ. ಶಾಸ್ತ್ರಿಯವರು ಸಮಾನತೆಯಲ್ಲಿ ನಂಬಿಕೆಯುಳ್ಳರಾಗಿದ್ದ ವ್ಯಕ್ತಿ. ಹೀಗಾಗಿ ಜಾತಿ ವ್ಯವಸ್ಥೆಯನ್ನು ವಿಭಜನೆಯನ್ನು ಸೃಷ್ಟಿಸುವ ಸಾಮಾಜಿಕ ಅನಿಷ್ಟವೆಂದು ಪರಿಗಣಿಸಿದ್ದರು. ಅವರು ಚಿಕ್ಕ ವಯಸ್ಸಿನಲ್ಲೇ ತಮ್ಮ ಕುಟುಂಬದ ಹೆಸರನ್ನು ತ್ಯಜಿಸಿ, ಕಾಶಿ ವಿದ್ಯಾಪೀಠಕ್ಕೆ ಸೇರಿ ತತ್ವಶಾಸ್ತ್ರದಲ್ಲಿ ಪದವಿ ಪಡೆದ ನಂತರವೇ ‘ಶಾಸ್ತ್ರಿ’ ಎಂಬ ಬಿರುದು ಪಡೆದರು.

ಶಾಸ್ತ್ರಿಯವರು ಶಾಲೆಯನ್ನು ತೊರೆದು 1920ರಲ್ಲಿ ಗಾಂಧೀಜಿಯವರು ಪ್ರಾರಂಭಿಸಿದ ಅಹಿಂಸಾತ್ಮಕ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಶ್ರಮಿಸಿದವರು. ಭಾರತದ ಎರಡನೇ ಪ್ರಧಾನಿಯಾಗಿ, ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1951 ರಲ್ಲಿ ರೈಲ್ವೇ ಸಚಿವರಾಗಿ ಕರ್ತವ್ಯ ಸಲ್ಲಿಸಿದ್ದರು. ಉಜೈಕಿಸ್ತಾನದ ತಾಷೆಂಟ್‌ನಲ್ಲಿ ಜನವರಿ 11, 1966ರಲ್ಲಿ ಶಾಸ್ತ್ರೀಜಿ ಅಕಾಲಿಕವಾಗಿ ಸಾವನ್ನಪ್ಪಿದರು. ಸರಳತೆ ಬಿಡದ ವ್ಯಕಿತ್ವ, ಪ್ರಾಮಾಣಿಕವಾಗಿ ಬದುಕಿದ ಶಾಸ್ತ್ರೀಜಿಯವರ ಎಲ್ಲರಿಗೂ ಮಾದರಿಯಾಗಿದೆ.

ಇದನ್ನೂ ಓದಿ: ದೇಶದಲ್ಲಿ ಪ್ರತಿ ಗಂಟೆಗೆ 52 ರಸ್ತೆ ಅಪಘಾತಗಳು, ಈ ಅಂಕಿಅಂಶದಲ್ಲಿ ಏನಿದೆ?

ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಫೂರ್ತಿದಾಯಕ ಉಲ್ಲೇಖಗಳು:

  • ಪ್ರಗತಿಗಾಗಿ ನಾವು ನಮ್ಮೊಳಗೆ ಹೋರಾಡುವ ಬದಲು ಬಡತನ, ರೋಗ, ಮತ್ತು ಅಜ್ಞಾನದ ವಿರುದ್ಧ ಹೋರಾಡಬೇಕು.
  • ದೇಶದ ಶಕ್ತಿ ಮತ್ತು ಸ್ಥಿರತೆಯ ಪ್ರಮುಖ ಕಾರ್ಯವೆಂದರೆ ಜನರಲ್ಲಿ ಏಕತೆ ಮತ್ತು ಒಗ್ಗಟ್ಟನ್ನು ಸ್ಥಾಪಿಸುವುದು.
  • ಜೈ ಜವಾನ್, ಜೈ ಕಿಸಾನ್ : ನಮ್ಮ ದೇಶವನ್ನು ರಕ್ಷಿಸುವ ಮತ್ತು ಬಲಿಷ್ಠಗೊಳಿಸುವ ಸೈನಿಕರಿಗೆ ಮತ್ತು ರೈತರಿಗೆ ನಮನ ಸಲ್ಲಿಸೋಣ.
  • ಹಿಂಸೆ ಮತ್ತು ಅಸತ್ಯದ ಮಾರ್ಗವನ್ನು ಅನುಸರಿಸುವ ಮೂಲಕ ನೀವು ಎಂದಿಗೂ ನಿಜವಾದ ಪ್ರಜಾಪ್ರಭುತ್ವ ಮತ್ತು ಸ್ವರಾಜ್ಯವನ್ನು ಸಾಧಿಸಲು ಸಾಧ್ಯವಿಲ್ಲ.
  • ಕಾನೂನನ್ನು ಗೌರವಿಸಬೇಕು ಇದರಿಂದ ನಮ್ಮ ಪ್ರಜಾಪ್ರಭುತ್ವದ ಮೂಲ ರಚನೆಯು ಅಖಂಡವಾಗಿ ಉಳಿಯುತ್ತದೆ ಮತ್ತು ನಮ್ಮ ಪ್ರಜಾಪ್ರಭುತ್ವವೂ ಬಲಗೊಳ್ಳುತ್ತದೆ.
  • ನಾವು ಆಂತರಿಕವಾಗಿ ಬಲಿಷ್ಟರಾಗಿ ಬಡತನ ಮತ್ತು ನಿರುದ್ಯೋಗವನ್ನು ಶಾಶ್ವತವಾಗಿ ನಮ್ಮ ದೇಶದಿಂದ ತೊಲಗಿಸದರೆ ಮಾತ್ರ ನಾವು ಜಗತ್ತಿನ ಗೌರವನ್ನು ಸಂಪಾದಿಸಬಹುದು.
  • ಶಿಸ್ತು ಮತ್ತು ಒಗ್ಗಟ್ಟು ದೇಶದ ಶಕ್ತಿಯ ಮೂಲವಾಗಿದೆ.
  • ಯುದ್ಧದಲ್ಲಿ ಹೋರಾಡಿದಂತೆ ನಾವು ಧೈರ್ಯದಿಂದ ಶಾಂತಿಗಾಗಿ ಹೋರಾಡಬೇಕು.
  • ದೇಶದ ಸ್ವಾತಂತ್ರ್ಯವನ್ನು ರಕ್ಷಿಸುವ ಜವಬ್ದಾರಿ ಬರೀ ಯೋಧರದ್ದಲ್ಲ, ಅದು ಇಡೀ ದೇಶದ ಜವಾಬ್ದಾರಿಯಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Network ನ್ಯೂಸ್ ಡೈರೆಕ್ಟರ್​​ಗೆ ವಾಯ್ಸ್ ಆಪ್ ದ ಪೀಪಲ್ ಅವಾರ್ಡ್‌
TV9 Network ನ್ಯೂಸ್ ಡೈರೆಕ್ಟರ್​​ಗೆ ವಾಯ್ಸ್ ಆಪ್ ದ ಪೀಪಲ್ ಅವಾರ್ಡ್‌
ಕೆಂಪೇಗೌಡ ಏರ್ಪೋಟ್​​ನಲ್ಲೇ ಲಾಂಗ್ ಹಿಡಿದು ಅಟ್ಟಾಡಿಸಿದ ವಿಡಿಯೋ ಸೆರೆ
ಕೆಂಪೇಗೌಡ ಏರ್ಪೋಟ್​​ನಲ್ಲೇ ಲಾಂಗ್ ಹಿಡಿದು ಅಟ್ಟಾಡಿಸಿದ ವಿಡಿಯೋ ಸೆರೆ
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!