AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alcohol: 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯಪಾನ ಸೇವನೆಯಿಂದ ಅಪಾಯ ಹೆಚ್ಚು

40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯಪಾನದಿಂದ ಅಪಾಯ ಹೆಚ್ಚು ಎಂಬುದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. ದೊಡ್ಡವರಿಗಿಂತ 40 ವರ್ಷದೊಳಗಿನವರೇ ಮದ್ಯಪಾನದಿಂದ ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಾರೆ.

Alcohol: 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯಪಾನ ಸೇವನೆಯಿಂದ ಅಪಾಯ ಹೆಚ್ಚು
Alcohol
TV9 Web
| Updated By: ನಯನಾ ರಾಜೀವ್|

Updated on: Jul 15, 2022 | 3:39 PM

Share

40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯಪಾನದಿಂದ ಅಪಾಯ ಹೆಚ್ಚು ಎಂಬುದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. ದೊಡ್ಡವರಿಗಿಂತ 40 ವರ್ಷದೊಳಗಿನವರೇ ಮದ್ಯಪಾನದಿಂದ ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಾರೆ.  ದಿ ಲ್ಯಾನ್ಸೆಟ್ ಜರ್ನಲ್‌ನಲ್ಲಿ ಪ್ರಕಟವಾದ ಜಾಗತಿಕ ಅಧ್ಯಯನದ ಪ್ರಕಾರ, ವಯಸ್ಕರಿಗಿಂತ ಯುವಜನತೆ ಆಲ್ಕೊಹಾಲ್ ಸೇವನೆಯಿಂದ ಹೆಚ್ಚಿನ ಆರೋಗ್ಯ ಅಪಾಯಗಳನ್ನು ಎದುರಿಸುತ್ತಾರೆ ಎಂಬುದು ತಿಳಿದುಬಂದಿದೆ.

ಈ ವರದಿಯು ಜಾಗತಿಕ ಆಲ್ಕೋಹಾಲ್ ಸೇವನೆಯ ವಯಸ್ಸು ಮತ್ತು ಸ್ಥಳವನ್ನು ಆಧರಿಸಿರಬೇಕು ಎಂದು ಶಿಫಾರಸುಗಳು ಮಾಡುತ್ತದೆ. 15-39 ವರ್ಷ ವಯಸ್ಸಿನ ಪುರುಷರಿಗೆ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ನೀಡಲಾಗಿದೆ.

ನಿಯಮಿತವಾಗಿ ಮದ್ಯಪಾನ ಮಾಡುವ 40 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಹೃದಯರಕ್ತನಾಳದ ಕಾಯಿಲೆ, ಪಾರ್ಶ್ವವಾಯು ಮತ್ತು ಮಧುಮೇಹದ ಅಪಾಯಗಳು ಕಡಿಮೆ ಇರುತ್ತವೆ.

ವಿಶ್ವಾದ್ಯಂತ 15-39 ವರ್ಷ ವಯಸ್ಸಿನ ಪುರುಷರು ಮದ್ಯಪಾನದಿಂದ ಯಾವುದೇ ಪ್ರಯೋಜನವನ್ನು ಪಡೆದಿಲ್ಲ ಬದಲಾಗಿ ಅಪಾಯವೇ ಹೆಚ್ಚಿದೆ ಎಂದು ಸಂಶೋಧನೆ ಹೇಳಿದೆ.

ಇವುಗಳಲ್ಲಿ ಶೇ.60ರಷ್ಟು ಮಂದಿ ಮದ್ಯಪಾನದ ಅಮಲಿನಲ್ಲಿ ವಾಹನ ಅಪಘಾತ, ಆತ್ಮಹತ್ಯೆ, ಕೊಲೆಯಂತಹ ಕೃತ್ಯಗಳಲ್ಲೂ ಭಾಗಿಯಾಗಿದ್ದಾರೆ. ಸ್ವಲ್ಪ ಪ್ರಮಾಣದಲ್ಲಿ ಮದ್ಯಪಾನ ಮಾಡುವವರು ಆರೋಗ್ಯ ಪ್ರಯೋಜನವನ್ನು ಪಡೆಯಲಿದ್ದಾರೆ. ಮದ್ಯಪಾನದಿಂದ ಹೃದಯ ರಕ್ತನಾಳದ ಕಾಯಿಲೆ, ಕ್ಯಾನ್ಸರ್ ಸೇರಿದಂತೆ 22ಕ್ಕೂ ಹೆಚ್ಚಿನ ಆರೋಗ್ಯ ಪರಿಣಾಮಗಳುಂಟಾಗಲಿವೆ.

ವರದಿಯು ಕಡಿಮೆ ವಯಸ್ಸಿನವರು ಮದ್ಯಪಾನ ಸೇವನೆ ಮಾಡುವುದೇ ಬೇಡ, ಮಧ್ಯವಯಸ್ಕರು ಸ್ವಲ್ಪ ಪ್ರಮಾಣದಲ್ಲಿ ಮದ್ಯಪಾನ ಮಾಡುವುದರಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಲಿದ್ದಾರೆ.

2020ರ ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಡೇಟಾದಲ್ಲಿ ಮದ್ಯಪಾನ ಸೇವನೆ ಮಾಡುವವರು ಒಟ್ಟಾರೆಯಾಗಿ 22 ಆರೋಗ್ಯ ಸಮಸ್ಯೆಗಳನ್ನು ಎದುರಿಸಬಹುದು ಎಂದು ಹೇಳಲಾಗಿತ್ತು ಅದರಲ್ಲಿ ಅಪಘಾತ, ಹೃದಯ, ಕರುಳಿನ ಸಮಸ್ಯೆಯೂ ಸೇರಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ