AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lava Idli Trend: ಲಾವಾ ಇಡ್ಲಿ ಟ್ರೆಂಡಿಂಗ್, ಆದರೆ ಇದು ಆಹಾರ ಪ್ರಿಯರ ಮೆಚ್ಚುಗೆ ಪಡೆದಿಲ್ಲ ಯಾಕೆ?

ನೀವು ಬೆಳಗ್ಗಿನ ಉಪಹಾರದ ಬಗ್ಗೆ ಯೋಚಿಸಿದಾಗ, ದಕ್ಷಿಣ ಭಾರತದ ಭಕ್ಷ್ಯಗಳು ತಕ್ಷಣವೇ ನೆನಪಿಗೆ ಬರುತ್ತವೆ. ಇಡ್ಲಿ, ದೋಸೆ ಮತ್ತು ಅಪ್ಪಮ್‌ಗಳು ದೇಶದಾದ್ಯಂತ ಆಹಾರ ಪ್ರಿಯರ ಜನಪ್ರಿಯ ಆಯ್ಕೆಯಾಗಿದೆ.

Lava Idli Trend: ಲಾವಾ ಇಡ್ಲಿ ಟ್ರೆಂಡಿಂಗ್, ಆದರೆ ಇದು ಆಹಾರ ಪ್ರಿಯರ ಮೆಚ್ಚುಗೆ ಪಡೆದಿಲ್ಲ ಯಾಕೆ?
Lava Idli Image Credit source: social Media
ಅಕ್ಷಯ್​ ಪಲ್ಲಮಜಲು​​
|

Updated on:Jan 31, 2023 | 7:16 PM

Share

ನೀವು ಬೆಳಗ್ಗಿನ ಉಪಹಾರದ ಬಗ್ಗೆ ಯೋಚಿಸಿದಾಗ, ದಕ್ಷಿಣ ಭಾರತದ ಭಕ್ಷ್ಯಗಳು ತಕ್ಷಣವೇ ನೆನಪಿಗೆ ಬರುತ್ತವೆ. ಇಡ್ಲಿ, ದೋಸೆ ಮತ್ತು ಅಪ್ಪಮ್‌ಗಳು ದೇಶದಾದ್ಯಂತ ಆಹಾರ ಪ್ರಿಯರ ಜನಪ್ರಿಯ ಆಯ್ಕೆಯಾಗಿದೆ. ಕಾಲಾನಂತರದಲ್ಲಿ ಈ ಕ್ಲಾಸಿಕ್ ಭಕ್ಷ್ಯಗಳು ಹಲವಾರು ರೂಪಾಂತರಗಳಿಗೆ ಒಳಗಾಗಿವೆ. ಈ ಕೆಲವು ರೂಪಾಂತರಗಳು ಜನಪ್ರಿಯವಾದರೆ, ಇನ್ನು ಕೆಲವು ಆಹಾರ ಪ್ರಿಯರನ್ನು ಮೆಚ್ಚಿಸಲು ವಿಫಲವಾಗಿದೆ. ಇದಕ್ಕೆ ಒಂದು ನಿದರ್ಶನವೆಂದರೆ ಲಾವಾ ಇಡ್ಲಿ. ಇದು ಪ್ರಸ್ತುತ ಇಂಟರ್‌ನೆಟ್‌ನಲ್ಲಿ ವೈರಲ್ ಆಗುತ್ತಿರುವ ಭಕ್ಷ್ಯವಾಗಿದೆ.

ಇದು ಇಡ್ಲಿ ಮತ್ತು ಗೋಲ್ಗಪ್ಪಗಳ ಸಂಯೋಜನೆಯಾಗಿದೆ. ಈ ಪಾಕವಿಧಾನವನ್ನು ತೋರಿಸುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಇದನ್ನು ಗ್ರೀಸ್ ಮಾಡಿದ ಅಚ್ಚುಗಳು ಅಥವಾ ಬಟ್ಟಲುಗಳಿಗೆ ಇಡ್ಲಿ ಹಿಟ್ಟನ್ನು ಸೇರಿಸಿ ನಂತರ ಸಾಂಬರ್‌ನಿಂದ ತುಂಬಿಸಿದ ಗೊಲ್ಗಪ್ಪವನ್ನು ಅದರ ಮಧ್ಯ ಹಾಕಿ ಅದರ ಮೇಲೆ ಮತ್ತೊಮ್ಮೆ ಹಿಟ್ಟನ್ನು ಸುರಿಯಲಾಗುತ್ತದೆ. ಹೀಗೆ ಮಾಡಿಟ್ಟ ಲಾವಾ ಇಡ್ಲಿಯನ್ನು 8 ರಿಂದ 10 ನಿಮಿಷಗಳ ಕಾಲ ಹಬೆಯಲ್ಲಿ ಬೇಯಿಸಲಾಗುತ್ತದೆ.

ಇದನ್ನು ಓದಿ: Food Cravings: ತೂಕ ಕಳೆದುಕೊಳ್ಳಲು ಪ್ರಯತ್ನಿಸುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ

ಈ ಒಂದು ಭಕ್ಷ್ಯವು ಆಹಾರಪ್ರಿಯರನ್ನು ಮೆಚ್ಚಿಸುವಲ್ಲಿ ವಿಫಲವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಜನರು ಈ ಲಾವಾ ಇಡ್ಲಿ ರೆಸಿಪಿಗೆ ಟೀಕೆಯನ್ನು ಮಾಡಿದ್ದಾರೆ. ಒಬ್ಬ ಸಾಮಾಜಿಕ ಬಳಕೆದಾರ ‘ಈ ಇಡ್ಲಿಯನ್ನು ಯಾರು ಮಾಡಿದ್ದಾರೋ ಅವರು ಶಿಕ್ಷೆಗೆ ಅರ್ಹರು. ಇಲ್ಲಿ ಇಡ್ಲಿಗೆ ಅಥವಾ ಗೋಲ್ಗಪ್ಪಕ್ಕೆ ನ್ಯಾಯ ಸಿಕ್ಕಿಲ್ಲ ಎಂದು ಟೀಕೆ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ಈ ಲಾವಾ ಇಡ್ಲಿ ವಿಡಿಯೋವನ್ನು ಶೇರ್ ಮಾಡುತ್ತಾ ‘ನನ್ನೊಳಗೆ ಏನೋ ಸತ್ತು ಹೋಯಿತು’ ಎಂದು ಹೇಳಿದ್ದಾರೆ. ಹೀಗೆ ಈ ಲಾವಾ ಇಡ್ಲಿ ಅನೆಕ ಜನರ ಟೀಕೆಗೆ ಗುರಿಯಾಗಿದೆ. ಆಹಾರ ಪ್ರಿಯರನ್ನು ಮೆಚ್ಚಿಸುವಲ್ಲಿ ಈ ಭಕ್ಷ್ಯ ವಿಫಲವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Tue, 31 January 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ