AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ಕೂದಲು ಉದುರುವಿಕೆಯನ್ನು ತಡೆಯಲು ಈ ಸಲಹೆಗಳನ್ನು ಪಾಲಿಸಿ

ನಿಮ್ಮ ಕೂದಲ ಬೆಳವಣೆಗೆಗೆ ನೆತ್ತಿಯಿಂದಲೇ ಪೋಷಣೆ ಅತ್ಯಂತ ಅಗತ್ಯವಾಗಿದೆ. ಇದಾಗಿಯೂ ನೀವು ಬೇಸಿಗೆಯಲ್ಲಿ ನಿಮ್ಮ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀವು ತಿಳಿದುಕೊಳ್ಳಲೇ ಬೇಕಾದ ಕೆಲವೊಂದು ಅಂಶಗಳು ಇಲ್ಲಿವೆ.

ಬೇಸಿಗೆಯಲ್ಲಿ ಕೂದಲು ಉದುರುವಿಕೆಯನ್ನು ತಡೆಯಲು ಈ ಸಲಹೆಗಳನ್ನು ಪಾಲಿಸಿ
ಬೇಸಿಗೆಯಲ್ಲಿ ಕೂದಲ ಆರೈಕೆImage Credit source: Kerastase
Follow us
ಅಕ್ಷತಾ ವರ್ಕಾಡಿ
|

Updated on: Apr 30, 2023 | 7:25 AM

ಬೇಸಿಗೆಯಲ್ಲಿ ಹೆಚ್ಚಾಗಿ ಕೂದಲು ಉದುರುವಿಕೆ ಸಮಸ್ಯೆ ಕಂಡುಬರುತ್ತದೆ. ಆದ್ದರಿಂದ ನೀವು ಕೂದಲಿಗಿಂತ ನೆತ್ತಿಯ ಭಾಗವನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳುವುದು ಅತ್ಯಂತ ಅವಶ್ಯಕ. ಯಾಕೆಂದರೆ ನೆತ್ತಿಯೂ ನಿಮ್ಮ ಕೂದಲಿನ ಬೆಳವಣೆಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆದ್ದರಿಂದ ನಿಮ್ಮ ಕೂದಲ ಬೆಳವಣೆಗೆಗೆ ನೆತ್ತಿಯಿಂದಲೇ ಪೋಷಣೆ ಅತ್ಯಂತ ಅಗತ್ಯವಾಗಿದೆ. ಇದಾಗಿಯೂ ನೀವು ಬೇಸಿಗೆಯಲ್ಲಿ ನಿಮ್ಮ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀವು ತಿಳಿದುಕೊಳ್ಳಲೇ ಬೇಕಾದ ಕೆಲವೊಂದು ಅಂಶಗಳು ಇಲ್ಲಿವೆ.

ಆರೋಗ್ಯಕರ ನೆತ್ತಿಗಾಗಿ ಅನುಸರಿಸಬೇಕಾದ 5 ಉಪಯುಕ್ತ ಸಲಹೆಗಳು:

1. ಸರಿಯಾದ ಶಾಂಪೂ ಆರಿಸಿ:

ಬೇಸಿಗೆಯಲ್ಲಿ ಹೆಚ್ಚಾಗಿ ಬೆವರುವುದರಿಂದ ನಿಮ್ಮ ನೆತ್ತಿಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಅತ್ಯಂತ ಅಗತ್ಯ. ಆದರೆ ಅತಿಯಾಗಿ ತೊಳೆಯಬೇಡಿ. ಇದು ನೆತ್ತಿಯನ್ನು ಹಾನಿಗೊಳಿಸಬಹುದು. ನಿಯಮಿತವಾಗಿ ತೊಳೆಯುವುದು – ವಾರಕ್ಕೆ ಎರಡು ಅಥವಾ ಮೂರು ಬಾರಿ ತೊಳೆಯುವುದರಿಂದ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳ ಸೋಂಕಿನ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಸರಿಯಾದ ಶಾಂಪೂವನ್ನು ಆರಿಸುವುದು ಮುಖ್ಯ. ಆದ್ದರಿಂದ ನಿಮ್ಮ ನೆತ್ತಿಯ ತೇವಾಂಶವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಲು ಸರಿಯಾದ ಶ್ಯಾಂಪು ಆಯ್ಕೆ ಮಾಡಿ ಕೊಳ್ಳಿ.

2. ಸರಿಯಾದ ಆಹಾರ ಕ್ರಮ ರೂಢಿಸಿಕೊಳ್ಳಿ:

ಸಮತೋಲಿತ ಆಹಾರವು ನಿಮ್ಮ ನೆತ್ತಿಯ ಆರೋಗ್ಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನೀವು ಒಣ ನೆತ್ತಿಯನ್ನು ಹೊಂದಿದ್ದರೆ, ನಿಮ್ಮ ಊಟಕ್ಕೆ ಒಮೆಗಾ-3, ಸಾಲ್ಮನ್, ಚಿಯಾ ಬೀಜಗಳು ಅಥವಾ ಮೀನಿನ ಎಣ್ಣೆಯನ್ನು ಸೇರಿಸಿ. ನಿಮ್ಮ ಪ್ರೋಟೀನ್ ಸೇವನೆಯನ್ನು ಪರಿಶೀಲಿಸಿ, ಏಕೆಂದರೆ ಇದು ಆರೋಗ್ಯಕರ ಕೂದಲು ಮತ್ತು ನೆತ್ತಿಗೆ ನಿರ್ಣಾಯಕವಾಗಿದೆ. ಉತ್ಕರ್ಷಣ ನಿರೋಧಕಗಳು ಮತ್ತು ಪ್ರೋಬಯಾಟಿಕ್‌ಗಳು ನಿಮ್ಮ ಸಮತೋಲಿತ ಆಹಾರದ ಭಾಗವಾಗಿರಬೇಕು. ನಿಮ್ಮ ನೆತ್ತಿಯನ್ನು ಹೈಡ್ರೀಕರಿಸಲು ಹೆಚ್ಚಿನ ನೀರಿನ ಅಂಶವಿರುವ ಹಣ್ಣುಗಳು ಮತ್ತು ತರಕಾರಿಗಳೊಂದಿಗಿನ ಆಹಾರಕ್ರಮವನ್ನು ರೂಢಿಸಿಕೊಳ್ಳಿ.

ಇದನ್ನೂ ಓದಿ: ಪರಿಸರ ಸ್ನೇಹಿ ಕಾರ್ಯದಲ್ಲಿ ತೊಡಗಿಸಿಕೊಂಡ ನಟಿ ಅನುಪಮಾ ಗೌಡ

3. ಸಾಕಷ್ಟು ನೀರು ಕುಡಿಯಿರಿ:

ಆರೋಗ್ಯಕರ ನೆತ್ತಿಯನ್ನು ಪಡೆಯಲು ತೇವಾಂಶದ ಮಟ್ಟವನ್ನು ಕಾಪಾಡಿಕೊಳ್ಳುವುದು ಅಗತ್ಯ. ಬೇಸಿಗೆಯಲ್ಲಿ ಸಾಕಷ್ಟು ನೀರು ಕುಡಿಯುವುದರಿಂದ ನಿಮ್ಮ ಕೂದಲಿನ ಆರೋಗ್ಯದ ಒಟ್ಟಾರೆ ಆರೋಗ್ಯವನ್ನು ಕಾಪಾಡಲು ಸಹಾಯಕವಾಗಿದೆ.

4. ಕೂದಲಿಗೆ ಮಸಾಜ್​​ ಮಾಡಿ:

ನಿಮ್ಮ ಒತ್ತಡದ ಜೀವನದ ನಡುವೆ ಒಂದಷ್ಟು ಹೊತ್ತು ತೆಂಗಿನ ಎಣ್ಣೆಯಿಂದ ಸರಿಯಾಗಿ ಮಸಾಜ್​​ ಮಾಡಿ. ಇದು ನಿಮ್ಮ ನೆತ್ತಿಯ ಆರೋಗ್ಯವನ್ನು ಕಾಪಾಡಿ ಕೂದಲು ಉದುರುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ. ಜೊತೆಗೆ ಸಾಕಷ್ಟು ಒತ್ತಡದಿಂದ ವಿಶ್ರಾಂತಿಯನ್ನು ನೀಡುತ್ತದೆ. ಆರಾಮದಾಯಕವಾಗಿರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ