AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಾದ ಸಂಬಂಧವನ್ನು ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿವೆ ಸುಲಭ ಸಲಹೆಗಳು

Long Distance Relationship: ಯಾವುದೇ ಸಂಬಂಧದಲ್ಲಿ ಸಂವಹನವು ಪ್ರಮುಖವಾಗಿದೆ. ಅದರಲ್ಲೂ ಲಾಂಗ್ ಡಿಸ್ಟೆನ್ಸ್ ರಿಲೇಷನ್ಶಿಪ್ (Long distance relationship) ನಲ್ಲಿ ಸಂಬಂಧವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಸಂವಹನವು ತುಂಬಾ ಮುಖ್ಯವಾಗಿದೆ. ಏಕೆಂದರೆ ಇಂತಹ ಸಂಬಂಧದಲ್ಲಿ ಸಂಗಾತಿಗಳಿಬ್ಬರು ತಿಂಗಳಾನುಗಟ್ಟಲೆ ಒಬ್ಬರನ್ನೊಬ್ಬರು ಭೇಟಿಯಾಗಲು ಸಾಧ್ಯವಾಗುವುದಿಲ್ಲ, ಅವರವರ ಕೆಲಸ ಕಾರ್ಯಗಳಲ್ಲಿ ಹೆಚ್ಚು ನಿರತರಾಗಿರುತ್ತಾರೆ. ಹೀಗೆ ಸಮಯದ ಅಭಾವದಿಂದಾಗಿ ಸಂಬಂಧದಲ್ಲಿ ಬಿರುಕು ಮೂಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಿದ್ದರೆ ಬಲವಾದ ಸಂಬಂಧವನ್ನು ಕಾಪಾಡಿಕೊಳ್ಳುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಬಲವಾದ ಸಂಬಂಧವನ್ನು ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿವೆ ಸುಲಭ ಸಲಹೆಗಳು
Husband and Wife
ಮಾಲಾಶ್ರೀ ಅಂಚನ್​
| Edited By: |

Updated on: Aug 02, 2023 | 7:47 PM

Share

ಉದ್ಯೋಗ ಮತ್ತು ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಕಾರಣದಿಂದಾಗಿ ಹೆಚ್ಚಿನವರು ದೂರದ ಊರಿಗೆ ಅಥವಾ ಹೊರ ದೇಶಗಳಿಗೆ ಹೋಗುತ್ತಾರೆ. ಆ ಸಂದರ್ಭದಲ್ಲಿ ಅವರು ಸಹಜವಾಗಿಯೇ ತಮ್ಮ ಸಂಗಾತಿಯಿಂದ ದೂರವಿರಬೇಕಾಗುತ್ತದೆ. ಈ ಸಮಯದಲ್ಲಿ ಪ್ರತಿನಿತ್ಯ ಭೇಟಿಯಾಗುವ ಮೂಲಕ ಅವರು ಸಂಗಾತಿಗೆ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ, ಗುಣಮಟ್ಟದ ಸಮಯ ಕೊಡಲು ಸಾಧ್ಯವಾಗುವುದಿಲ್ಲ. ಸಂಗಾತಿಗಳಿಬ್ಬರ ಈ ದೂರವು ಅವರ ಪ್ರೀತಿಗೆ ಒಂದು ಪರೀಕ್ಷೆ ಅಂತಾನೇ ಹೇಳಬಹುದು. ಅನೇಕ ಬಾರಿ ಲಾಂಗ್ ಡಿಸ್ಟೆನ್ಸ್ ರಿಲೇಷನ್ಶಿಪ್ (Long distance relationship) ನಲ್ಲಿ ಅನುಮಾನ, ಸಂಗಾತಿಗೆ ಗುಣಮಟ್ಟದ ಸಮಯ ಕೊಡಲು ಸಾಧ್ಯವಾಗದೇ ಇರುವುದು ಇವೆಲ್ಲವೂ ಸಂಬಂಧದಲ್ಲಿ ಬಿರುಕು ಮೂಡಲು ಕಾರಣವಾಗಬಹುದು. ಮತ್ತು ಸಂಬಂಧವನ್ನು ಉಳಿಸಿಕೊಳ್ಳಲು ಕಷ್ಟಕರವಾಗಬಹುದು. ಹೀಗಿರುವಾಗ ಸಂಬಂಧವನ್ನು ಬಲವಾಗಿರಿಸಲು ಏನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ

ಸಂಬಂಧವನ್ನು ಬಲಪಡಿಸುವ ಮಾರ್ಗಗಳು:

ಬಲವಾದ ಸಂವಹನ ಕೌಶಲ್ಯ: ಲಾಂಗ್ ಡಿಸ್ಟೆನ್ಸ್ ರಿಲೇಷನ್ಶಿಪ್ ನಲ್ಲಿ ನಿಮ್ಮಿಬ್ಬರ ನಡುವಿನ ಅಂತರವನ್ನು ಕಡಿಮೆ ಮಾಡಲು ಪರಿಣಾಮಕಾರಿ ಸಂವಹನವು ಅತೀ ಅವಶ್ಯಕವಾಗಿದೆ. ಇಂತಹ ಸಂದರ್ಭದಲ್ಲಿ ನೀವು ಮುಖತಃ ಭೇಟಿಯಾಗಲೂ ಖಂಡಿತವಾಗಿಯೂ ಸಾಧ್ಯವಾಗುವುದಿಲ್ಲ. ಆದರೆ ಫೋನ್ ಕರೆ, ವೀಡಿಯೋ ಕಾಲ್ ಮತ್ತು ಮೆಸೇಜ್ ಗಳ ಮೂಲಕ ಪರಸ್ಪರ ಭಾವನೆಗಳನ್ನು ಹಂಚಿಕೊಳ್ಳುತ್ತಾ, ಗುಣಮಟ್ಟದ ಸಮಯವನ್ನು ಕಳೆಯಿರಿ. ಪರಿಣಾಮಕಾರಿ ಸಂವಹನವು ನೀವು ದೂರ ದೂರ ಇದ್ದಿರಾ ಎಂಬ ಭಾವನೆಯನ್ನು ಮೂಡಿಸುವುದಿಲ್ಲ.

ಸಂಗಾತಿಯನ್ನು ಅನುಮಾನಿಸುವುದನ್ನು ತಪ್ಪಿಸಿ: ಈ ರೀತಿಯ ಸಂಬಂಧದಲ್ಲಿ ಜನರು ಸಾಮಾನ್ಯವಾಗಿ ಯಾವುದೋ ಒಂದು ಕಾರಣಕ್ಕಾಗಿ ತಮ್ಮ ಸಂಗಾತಿಯನ್ನು ಅನುಮಾನಿಸಲು ಪ್ರಾರಂಭಿಸುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಅಭದತ್ರೆಯ ಭಾವನೆ ಸಂಬಂಧಕ್ಕೆ ದೊಡ್ಡ ಮುಳುವಾಗಬಹುದು. ಅದಕ್ಕಾಗಿಯೇ ಸಂಗಾತಿಯ ಮೇಲೆ ಸಂಪೂರ್ಣವಾಗಿ ನಂಬಿಕೆ ಇರಿಸಿ ಮತ್ತು ಎಲ್ಲದರಲ್ಲೂ ಅವರನ್ನು ಅನುಮಾದ ಭಾವನೆಯಿಂದ ನೋಡುವುದನ್ನು ಬಿಟ್ಟುಬಿಡಿ.

ಇದನ್ನೂ ಓದಿ: ನಕಾರಾತ್ಮಕ ಆಲೋಚನೆಗಳಿಂದ ಹೊರಬನ್ನಿ, ನಿಮ್ಮ ಮೇಲೆ ನಂಬಿಕೆ ಇರಲಿ

ಬಂಧವನ್ನು ಬಲಪಡಿಸಲು ಸೃಜನಾತ್ಮಕ ಮಾರ್ಗಗಳು: ದೈಹಿಕವಾಗಿ ನೀವಿಬ್ಬರೂ ದೂರವಿದ್ದರೂ, ಕೆಲವೊಂದು ಸೃಜನಾತ್ಮಕ ಮಾರ್ಗಗಳ ಮೂಲಕ ನಿಮ್ಮ ಬಂಧವನ್ನು ಬಲಪಡಿಸಬಹುದು. ಜೊತೆಯಾಗಿ ಆನ್ ಲೈನ್ ಆಟಗಳನ್ನು ಆಡುವುದು, ಆಶ್ಚರ್ಯಕರ ಉಡುಗೊರೆಗಳನ್ನು ಕಳುಹಿಸುವುದು ಮತ್ತು ಪ್ರೇಮ ಪತ್ರಗಳನ್ನು ಕಳುಹಿಸುವ ಮೂಲಕ ನಿಮ್ಮ ಸಂಬಂಧವನ್ನು ಇನ್ನಷ್ಟು ಬಲಪಡಿಸಬಹುದು.

ಇದನ್ನೂ ಓದಿ: ಬೆಳಗ್ಗೆ ನಿದ್ದೆಯಿಂದ ಎದ್ದ ತಕ್ಷಣ ನೀವು ಮೊಬೈಲ್​​ ಫೋನ್​​ ನೋಡುತ್ತಿರುವಿರಾ? ಆದರೆ ಜಾಗರೂಕರಾಗಿರಿ

ಸುಳ್ಳು ಹೇಳುವುದನ್ನು ತಪ್ಪಿಸಿ: ಸಂಬಂಧದಲ್ಲಿ ಅನೇಕ ಬಾರಿ ಜನರು ಅನಗತ್ಯವಾಗಿ ತಮ್ಮ ಸಂಗಾತಿಗೆ ಸುಳ್ಳು ಹೇಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಸುಳ್ಳು ಕೆಲವೊಮ್ಮೆ ನಿಮ್ಮ ಸಂಗಾತಿ ಗಮನಕ್ಕೂ ಬರಬಹುದು. ಈ ಕಾರಣದಿಂದಾಗಿ ಸಂಗಾತಿಯು ನಿಮ್ಮ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳಲು ಪ್ರಾರಂಭಿಸುತ್ತಾರೆ. ಅದಕ್ಕಾಗಿಯೇ ಸಂಗಾತಿಯೊಂದಿಗೆ ಯಾವುದೇ ಮುಚ್ಚುಮರೆಯಿಲ್ಲದೆ ಯಾವಾಗಲೂ ಸತ್ಯವನ್ನು ಮಾತನಾಡಿ.

ಸಂಗಾತಿಗಾಗಿ ಸಮಯ ಮೀಸಲಿಡಿ: ಕೆಲವರಿಗೆ ತಮ್ಮ ಕೆಲಸದ ಬ್ಯುಸಿ ಶೆಡ್ಯೂಲ್ ನಿಂದಾಗಿ ಸಂಗಾತಿಗೆ ಹೆಚ್ಚು ಸಮಯ ನೀಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದಾಗಿ ನಿಮ್ಮ ಸಂಬಂಧದಲ್ಲಿ ಇನ್ನಷ್ಟು ಅಂತರ ಮೂಡಬಹುದು. ಅಂತಹ ಪರಿಸ್ಥಿತಿಯಲ್ಲಿ ಸಂಗಾತಿಗಾಗಿ ಪ್ರತಿದಿನ ಸ್ವಲ್ಪ ಸಮಯವನ್ನು ಮೀಸಲಿಡಿ. ನೀವು ನಿಮ್ಮ ಸಂಗಾತಿಗಾಗಿ ಮೀಸಲಿಡುವ ಒಂದಿಷ್ಟು ಸಮಯವು ಕೂಡ ನಿಮ್ಮ ಸಂಬಂಧವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ

ಜೀವನ ಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ