AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips : ಪ್ರೀತಿಸಿದ ಜೋಡಿಗಳು ಮದುವೆಯಾಗಲು ಸಿದ್ದರಾಗಿದ್ದೀರಾ, ಹಾಗಾದ್ರೆ ಈ ವಿಷಯಗಳನ್ನೊಮ್ಮೆ ಗಮನಿಸಿ

ಪ್ರೀತಿ ಯಲ್ಲಿದ್ದಾಗ ಎಲ್ಲವೂ ಚೆನ್ನಾಗಿಯೇ ಇರುತ್ತದೆ. ಆದರೆ ಮದುವೆಯ ಜೀವನಕ್ಕೆ ಕಾಲಿಟ್ಟ ಬಳಿಕವೇ ಸಂಬಂಧಗಳಲ್ಲಿ ಬಿನ್ನಾಭಿಪ್ರಾಯಗಳು ಹೆಚ್ಚಾಗುವುದು. ಹೀಗಾಗಿ ಪ್ರೀತಿಯಲ್ಲಿದ್ದಾಗಲೇ ಇಬ್ಬರೂ ಕೂಡ ತಮ್ಮ ಮುಂದಿನ ಜೀವನದ ಬಗ್ಗೆ ಯೋಚಿಸಬೇಕು. ಒಂದು ವೇಳೆ ಈ ಕೆಲವು ವಿಚಾರಗಳಲ್ಲಿ ಗೊಂದಲಗಳು ಹಾಗೂ ಮನಸ್ತಾಪಗಳಿದ್ದರೆ ಅದನ್ನು ಬಗೆಹರಿಸಿಕೊಂಡು ವೈವಾಹಿಕ ಜೀವನಕ್ಕೆ ಕಾಲಿಡುವುದು ಸೂಕ್ತ.

Relationship Tips : ಪ್ರೀತಿಸಿದ ಜೋಡಿಗಳು ಮದುವೆಯಾಗಲು ಸಿದ್ದರಾಗಿದ್ದೀರಾ, ಹಾಗಾದ್ರೆ ಈ ವಿಷಯಗಳನ್ನೊಮ್ಮೆ ಗಮನಿಸಿ
Relationship Tips
ಸಾಯಿನಂದಾ
| Edited By: |

Updated on: Jun 21, 2024 | 6:52 PM

Share

ಪ್ರೀತಿಯ ಜೀವನವೇ ಬೇರೆ, ಮದುವೆಯ ನಂತರದ ಜೀವನವೇ ಬೇರೆಯೇ. ಹೀಗಾಗಿ ಇದೇ ಕಾರಣಕ್ಕೆ ಅದೆಷ್ಟೋ ಲವ್ ಮ್ಯಾರೇಜ್ ಗಳು ಮುರಿದು ಬೀಳುತ್ತಿದೆ. ಪ್ರೀತಿಯಲ್ಲಿದ್ದಾಗ ಹುಡುಗ ಹುಡುಗಿಯರಿಬ್ಬರೂ ತಮ್ಮಿಬ್ಬರ ಸಂಬಂಧವನ್ನು ಉತ್ತಮವಾಗಿ ನಿಭಾಯಿಸಿಕೊಂಡು ಹೋಗುತ್ತಿರಬಹುದು. ಆದರೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ಪ್ರೇಮಿಗಳು ದಂಪತಿಗಳಾಗಿ ಹೊಸ ಜವಾಬ್ದಾರಿಗಳಿಗೆ ತೆರೆದುಕೊಳ್ಳುತ್ತಾರೆ. ಹೀಗಾಗಿ ಮದುವೆಯ ಬಳಿಕ ಇಬ್ಬರೂ ಕೂಡ ಖುಷಿಯಾಗಿರಬೇಕಾದರೆ, ಪ್ರೀತಿಯಲ್ಲಿರುವಾಗಲೇ ಈ ಕೆಲವು ವಿಚಾರಗಳ ಬಗ್ಗೆ ಹೆಚ್ಚು ಗಮನ ನೀಡಬೇಕಾಗುತ್ತದೆ. ಕೆಲವೊಮ್ಮೆ ಇಬ್ಬರೂ ಕೂಡ ತಮ್ಮ ನಡವಳಿಕೆಯಲ್ಲಿ ಬದಲಾವಣೆಯನ್ನು ಮಾಡಿಕೊಳ್ಳಬೇಕಾಗುತ್ತದೆ.

  1. ಪ್ರೀತಿಯಲ್ಲಿ ಬಿದ್ದ ನಂತರ ಸುಂದರವಾಗಿ ಕಾಣುವ ಸಂಬಂಧದಲ್ಲಿ ಮದುವೆ ಮಾತುಕತೆಗೆ ಬಂದ ಕೂಡಲೇ ಜಗಳಗಳು, ಭಿನ್ನಾಭಿಪ್ರಾಯಗಳು ಹೆಚ್ಚಾಗಬಹುದು. ಇದಕ್ಕೆ ಮುಖ್ಯ ಕಾರಣವೇ ಸಂಬಂಧದಲ್ಲಿ ನಂಬಿಕೆಯ ಕೊರತೆ ಮತ್ತು ಪರಸ್ಪರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳದೆ ಇರುವುದು. ಇಬ್ಬರಿಗೂ ಪರಸ್ಪರರಲ್ಲಿ ನಂಬಿಕೆಯಿದ್ದರೆ ಮಾತ್ರ ಮದುವೆಯೆನ್ನುವ ಮತ್ತೊಂದು ಅಧ್ಯಾಯಕ್ಕೆ ಮುನ್ನುಡಿ ಬರೆಯಿರಿ.
  2. ಪ್ರೇಯಸಿಯೂ ನಿರಂತರವಾಗಿ ನಿಮಗೆ ಕರೆ ಮಾಡಿ ಪ್ರಶ್ನೆಗಳನ್ನು ಕೇಳುತ್ತಿದ್ದರೆ, ಅವಳಿಗೆ ನಿಮ್ಮ ಮೇಲೆ ನಂಬಿಕೆಯಿಲ್ಲ ಎನ್ನುವುದನ್ನು ನೆನಪಿಡಿ. ಮದುವೆಯ ನಂತರದಲ್ಲಿ ಅಸುರಕ್ಷಿತ ಭಾವನೆಯೊಂದು ಕಾಡಬಹುದು. ಈ ಗುಣವು ನಿಮ್ಮ ಪ್ರೇಮಿಯಲ್ಲಿದ್ದರೆ ಆಕೆಯನ್ನು ಮದುವೆಯಾಗುವ ಮೊದಲು ಸಾವಿರ ಸಲ ಯೋಚಿಸಿ.
  3. ಮದುವೆಯ ವಿಷಯದ ಬಗ್ಗೆ ಮಾತನಾಡುವ ವೇಳೆ ನಿಮ್ಮ ಪ್ರೇಮಿಯೂ ಸರಿಯಾಗಿ ಪ್ರತಿಕ್ರಿಯಿಸದೆ ಇರುವುದು. ಈ ನಡವಳಿಕೆಯಿಂದ ನಿಮ್ಮ ಪ್ರೇಯಸಿ ಅಥವಾ ಪ್ರೇಮಿಗೆ ನಿಮ್ಮನ್ನು ಮದುವೆಯಾಗುವುದಕ್ಕೆ ಆಸಕ್ತಿ ತೋರುತ್ತಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಳ್ಳಿ. ಹೀಗಾಗಿ ನೀವು ಈ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ಸರಿಯಾಗಿ ಯೋಚಿಸಿ ನಿರ್ಧಾರ ಕೈಗೊಳ್ಳಿ.
  4. ಒಬ್ಬ ವ್ಯಕ್ತಿಯನ್ನು ಹೇಗಿದ್ದಾರೆಯೋ ಹಾಗೆ ಸ್ವೀಕರಿಸದ ಸಂಗಾತಿಯ ಜೊತೆಗೆ ಬದುಕು ಹಂಚಿಕೊಳ್ಳುವುದು ಸೂಕ್ತವಲ್ಲ. ಒಂದು ವೇಳೆ ನಿಮ್ಮ ಗೆಳೆಯ ಅಥವಾ ಗೆಳತಿ ನಿಮ್ಮ ತಪ್ಪುಗಳನ್ನು ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರೆ, ನಿಮ್ಮನ್ನು ಗೇಲಿ ಮಾಡುತ್ತಿದ್ದರೆ, ಅವರು ನಿಮ್ಮನ್ನು ನಿಮ್ಮಂತೆಯೇ ಒಪ್ಪಿಕೊಂಡಿಲ್ಲ ಎಂದರ್ಥ. ಈ ನಡವಳಿಕೆಯಿಂದ ನೀವಿಬ್ಬರೂ ಎಂದಿಗೂ ಸಂತೋಷವಾಗಿರುವುದಿಲ್ಲ. ಹೀಗಾಗಿ ಈ ಪ್ರೇಮ ಸಂಬಂಧವನ್ನು ಮದುವೆಯ ಹಂತಕ್ಕೆ ತೆಗೆದುಕೊಂಡು ಹೋಗುವುದು ಒಳ್ಳೆಯದಲ್ಲ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ