AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lunar Eclipse 2021 Date: ನವೆಂಬರ್ 19ರಂದು ಈ ವರ್ಷದ ಕೊನೆಯ ಚಂದ್ರಗ್ರಹಣ; ಇಲ್ಲಿದೆ ಸಂಪೂರ್ಣ ಮಾಹಿತಿ

Chandra Grahan 2021: ಈ ವರ್ಷದ ಕೊನೆಯ ಚಂದ್ರಗ್ರಹಣ ನವೆಂಬರ್​ 19ರಂದು ಸಂಭವಿಸಲಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ತಿಳಿಯಿರಿ.

Lunar Eclipse 2021 Date: ನವೆಂಬರ್ 19ರಂದು ಈ ವರ್ಷದ ಕೊನೆಯ ಚಂದ್ರಗ್ರಹಣ; ಇಲ್ಲಿದೆ ಸಂಪೂರ್ಣ ಮಾಹಿತಿ
ಚಂದ್ರಗ್ರಹಣ 2021
TV9 Web
| Updated By: shruti hegde|

Updated on: Nov 12, 2021 | 2:58 PM

Share

ಈ ವರ್ಷದಲ್ಲಿ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ಇದೇ ತಿಂಗಳು ನವೆಂಬರ್ 19ರಂದು ಸಂಭವಿಸಲಿದೆ. ಇದು ಭಾಗಶಃ ಚಂದ್ರಗ್ರಹಣವಾಗಿದ್ದು ಸುಮಾರು ಮೂರು ಗಂಟೆಗಳ ಕಾಲ ಇರುತ್ತದೆ. ಇದು ಶತಮಾನದ ದೀರ್ಘವಾದ ಭಾಗಶಃ ಚಂದ್ರಗ್ರಹಣವಾಗಿದೆ. ಈಶಾನ್ಯ ಭಾರತದ ಕೆಲವು ಭಾಗಗಳಿಂದ ಗ್ರಹಣ ಗೋಚರಿಸಲಿದೆ. ಇದು ಪಶ್ಚಿಮ ಆಫ್ರಿಕಾ, ಪಶ್ಚಿಮ ಯುರೋಪ್, ಉತ್ತರ ಅಮೆರಿಕಾ, ದಕ್ಷಿಣ ಅಮೆರಿಕಾ, ಏಷ್ಯಾ, ಆಸ್ಟ್ರೇಲಿಯಾ, ಅಟ್ಲಾಂಟಿಕ್ ಸಾಗರ ಮತ್ತು ಫೆಸಿಫಿಕ್ ಮಹಾಸಾಗದಿಂದಲೂ ಗೋಚರಿಸುತ್ತದೆ.

ದಿನಾಂಕ ನವೆಂಬರ್ 19ನೇ ತಾರೀಕಿನಂದು ಆಂಧ್ರಪ್ರದೇಶ ಮತ್ತು ಅಸ್ಸಾಂನ ಕೆಲವು ಭಾಗಗಳಿಂದ ಚಂದ್ರಗ್ರಹಣದ ಭಾಗಶಃ ಅಂತ್ಯವು ಗೋಚರಿಸುತ್ತದೆ. ಭಾರತದಲ್ಲಿ ಗ್ರಹಣ ಕಾಲ ಮಧ್ಯಾಹ್ನ 12:48ಕ್ಕೆ ಪ್ರಾರಂಭವಾಗಲಿದ್ದು, ಸಂಜೆ 4:17 ಕ್ಕೆ ಕೊನೆಗೊಳ್ಳುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ತಿಳಿಸಿದೆ.

ಎಲ್ಲಿ ವೀಕ್ಷಿಸಬಹುದು? ತಮ್ಮ ಮನೆಗಳಿಂದ ಆಕಾಶದ ಈ ಘಟನೆಯನ್ನು ನೋಡಲು ಸಾಧ್ಯವಾಗದವರು ಅದನ್ನು ನಾಸಾದ ಲೈವ್ ಸ್ಟ್ರೀಮ್​ನಲ್ಲಿ ವೀಕ್ಷಿಸಬಹುದು. ಚಂದ್ರ ಗ್ರಹಣವು ಹುಣ್ಣಿಮೆಯ ದಿನದಂದು ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಸಂಭವಿಸುತ್ತದೆ. ಭೂಮಿಯ ನೆರಳಿನ ಅಡಿಯಲ್ಲಿ ಬಂದಾಗ ಸಂಪೂರ್ಣ ಚಂದ್ರ ಗ್ರಹಣ ಸಂಭವಿಸುತ್ತದೆ.

ಜ್ಯೋತಿಷ್ಯದಲ್ಲಿ ಚಂದ್ರಗ್ರಹಣವನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಹಾಗಾಗಿಯೇ ಚಂದ್ರಗ್ರಹಣ ಸಮಯದಲ್ಲಿ ಅನೇಕ ಕೆಲಸಗಳನ್ನು ಮಾಡದಂತೆ ಸೂಚಿಸುತ್ತಾರೆ. ಈ ದಿನದಂದು ಕೆಲವು ರಾಶಿಗಳ ಮೇಲೆ ಕೆಟ್ಟ ಪರಿಣಾಮಗಳು ಬೀರಬಹುದು. ಹಾಗಾಗಿ ಈ ದಿನದಂದು ತಾಳ್ಮೆ ಮತ್ತು ಶಾಂತಿಯಿಂದಿರುವುದು ಉತ್ತಮ ಜೊತೆಗೆ ದೇವರ ಧ್ಯಾನದಲ್ಲಿ ತೊಡಗಿಕೊಳ್ಳುವಂತೆ ಸೂಚಿಸಲಾಗುತ್ತದೆ.

2021 ನವೆಂಬರ್ 19 ಶುಕ್ರವಾರ ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಚಂದ್ರ ಗ್ರಹಣ ವರ್ಷಕ್ಕೆ ಗರಿಷ್ಠ ಮೂರು ಬಾರಿ ಮಾತ್ರ ಸಂಭವಿಸಬಹುದು. 2021ರ ಮೊದಲ ಚಂದ್ರಗ್ರಹಣ ಮೇ 26ರಂದು ಸಂಭವಿಸಿತ್ತು. ಅದು ಸೂಪರ್ ಮೂನ್ ಮತ್ತು ಕೆಂಪು ರಕ್ತಚಂದ್ರವಾಗಿತ್ತು. ನವೆಂಬರ್ 19 ರಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸುತ್ತಿದೆ.

ಇದನ್ನೂ ಓದಿ:

Lunar Eclipse 2021: ಇಂದು ಚಂದ್ರಗ್ರಹಣ; ರಕ್ತಚಂದ್ರನನ್ನು ನೋಡಲು ಕಾತುರರಾಗಿರಿ

Lunar Eclipse 2021: ಮೇ 26ರ ಸೂಪರ್ ಬ್ಲಡ್ ಮೂನ್- ಪೂರ್ಣ ಚಂದ್ರಗ್ರಹಣದ ಬಗ್ಗೆ ನಿಮಗೆ ಗೊತ್ತಿರಬೇಕಾದ ಮಾಹಿತಿಗಳಿವು

ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌