AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maha Shivaratri 2025: ಶಿವನಿಗೆ ಪ್ರಿಯ ಈ ತಂಬಿಟ್ಟು ಉಂಡೆ, ಮಾಡೋದು ಹೇಗೆ? ಇಲ್ಲಿದೆ ರೆಸಿಪಿ

ಹಬ್ಬಗಳು ಬಂದರೆ ಸಾಕು ಮನೆಯಲ್ಲಿ ಸಂಭ್ರಮ ಸಡಗರದ ಜೊತೆಗೆ ಸಿಹಿಯಾದ ಅಡುಗೆ ಮಾಡಿ ದೇವರಿಗೆ ನೈವೇದ್ಯವಿಡಲಾಗುತ್ತದೆ. ಅಂದಹಾಗೆ, ಫೆಬ್ರವರಿ 26 ರಂದು ಶಿವರಾತ್ರಿ ಹಬ್ಬವನ್ನು ನಾಡಿನೆಲ್ಲೆಡೆ ಆಚರಿಸಲಾಗುತ್ತಿದ್ದು, ಈ ದಿನ ರಾತ್ರಿಯಿಡೀ ಶಿವನಾಮ ಸ್ಮರಣೆ ಮಾಡಿ ಉಪವಾಸ ಹಾಗೂ ಜಾಗರಣೆ ಮಾಡುತ್ತಾರೆ. ಈ ದಿನ ಬಹುತೇಕರ ಮನೆಯಲ್ಲಿ ಶಿವನಿಗೆ ಪ್ರಿಯವಾದ ಅಡುಗೆ ಮಾಡಿ ನೈವೇದ್ಯ ಇಡಲಾಗುತ್ತದೆ. ಅದರಲ್ಲಿಯೂ ಶಿವನಿಗೆ ಪ್ರಿಯವಾದ ನೈವೇದ್ಯ ಈ ತಂಬಿಟ್ಟು ಇಲ್ಲವಾದರೆ ಈ ಹಬ್ಬವು ಪೂರ್ಣವಾಗುವುದಿಲ್ಲ. ಮನೆಯಲ್ಲೇ ಸುಲಭವಾಗಿ ಹುರಿದ ಅಕ್ಕಿ ತಂಬಿಟ್ಟು ಮಾಡಿ ಶಿವನಿಗೆ ಅರ್ಪಿಸಬಹುದು, ಸಿಂಪಲ್ ರೆಸಿಪಿ ಮಾಡುವ ವಿಧಾನ ಇಲ್ಲಿದೆ.

Maha Shivaratri 2025: ಶಿವನಿಗೆ ಪ್ರಿಯ ಈ ತಂಬಿಟ್ಟು ಉಂಡೆ, ಮಾಡೋದು ಹೇಗೆ? ಇಲ್ಲಿದೆ ರೆಸಿಪಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 25, 2025 | 12:48 PM

Share

ದೇಶದಾದಂತ್ಯ ಮಹಾ ಶಿವರಾತ್ರಿ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುವ ಶಿವರಾತ್ರಿ ಹಬ್ಬವನ್ನು ಈ ಬಾರಿ ಫೆಬ್ರವರಿ 26 ರಂದು ಆಚರಿಸಲಾಗುತ್ತಿದೆ. ಅನೇಕ ಜನರು ಉಪವಾಸ ಮಾಡಿ ಜಾಗರಣೆ ಮಾಡುತ್ತಾರೆ. ಈ ಹಬ್ಬದ ದಿನ ಶಿವನಿಗೆ ಇಷ್ಟವಾದ ಅಡುಗೆ ತಯಾರಿಸಿ ನೈವೇದ್ಯ ಇಡುವುದು ವಾಡಿಕೆ. ಅದರಲ್ಲಿ ಶಿವನಿಗೆ ಪ್ರಿಯವಾದ ತಂಬಿಟ್ಟು ಇಲ್ಲದೇ ಹೋದರೆ ಹೇಗೆ ಅಲ್ಲವೇ. ಶೇಂಗಾ, ಬಿಳಿ ಎಳ್ಳು, ಕೊಬ್ಬರಿ, ಬೆಲ್ಲ ಬಳಸಿ ತಯಾರಿಸಲಾಗುವ ತಂಬಿಟ್ಟು ಹಬ್ಬದ ವೇಳೆ ಉಪವಾಸ ಮಾಡುವವರಿಗೆ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ಮನೆಯಲ್ಲಿ ಈ ಸಾಮಗ್ರಿಗಳಿದ್ದರೆ ಸಾಕು ಹುರಿದ ಅಕ್ಕಿ ತಂಬಿಟ್ಟು ಮಾಡಿ ಶಿವನಿಗೆ ನೈವೇದ್ಯವಾಗಿ ಅರ್ಪಿಸಬಹುದು.

ಹುರಿದ ಅಕ್ಕಿ ತಂಬಿಟ್ಟು ಮಾಡಲು ಬೇಕಾಗುವ ಸಾಮಗ್ರಿಗಳು

* ಅಕ್ಕಿ – 1 ಕಪ್‌

* ಹುರಿ ಕಡಲೆ – 1/2 ಕಪ್‌

* ಶೇಂಗಾ – 1 ಕಪ್‌

* ಒಣ ಕೊಬ್ಬರಿ ತುರಿ- 1 ಕಪ್‌

* ಬಿಳಿ ಎಳ್ಳು – 1 ಕಪ್‌

* ಬೆಲ್ಲ – 1 ಕಪ್‌

* ನೀರು – 1/2 ಕಪ್‌

ಇದನ್ನೂ ಓದಿ: ಮಹಾಶಿವರಾತ್ರಿಯಂದು ಈ ದೇವಾಲಯಗಳಿಗೆ ಭೇಟಿ ನೀಡಿ

ಹುರಿದ ಅಕ್ಕಿ ತಂಬಿಟ್ಟು ಮಾಡುವ ವಿಧಾನ

* ಮೊದಲಿಗೆ ದಪ್ಪ ತಳದ ಪಾತ್ರೆಯನ್ನು ಗ್ಯಾಸ್ ಮೇಲಿಟ್ಟು ಅಕ್ಕಿ ಕೆಂಪಗಾಗುವರೆಗೂ ಹುರಿದುಕೊಳ್ಳಿ, ಅದನ್ನು ಪಕ್ಕಕ್ಕೆ ಇಟ್ಟುಕೊಳ್ಳಿ.

* ಅದೇ ಪಾತ್ರೆಗೆ ಒಣಕೊಬ್ಬರಿ ಹಾಕಿ ಕಂದು ಬಣ್ಣ ತಿರುಗುವಂತೆ ಹುರಿದುಕೊಂಡು ಪಕ್ಕಕ್ಕೆ ಎತ್ತಿಟ್ಟುಕೊಳ್ಳಿ.

* ಮತ್ತದೇ ಪಾತ್ರೆಗೆ ಎಳ್ಳು ಹಾಕಿ ಕಡಿಮೆ ಉರಿಯಲ್ಲಿ ಚೆನ್ನಾಗಿ ಹುರಿದುಕೊಳ್ಳಿ. ಆ ಬಳಿಕ ಶೇಂಗಾ ಬೀಜ ಹುರಿದು ಸಿಪ್ಪೆ ತೆಗೆದಿಟ್ಟುಕೊಳ್ಳಿ.

* ಈಗಾಗಲೇ ಹುರಿದ ಅಕ್ಕಿ ತಣ್ಣಗಾದ ಬಳಿಕ ಮಿಕ್ಸಿ ಜಾರ್‌ಗೆ ವರ್ಗಾಯಿಸಿಕೊಳ್ಳಿ. ಸ್ವಲ್ಪ ಪ್ರಮಾಣದಲ್ಲಿ ಶೇಂಗಾ, ಹುರಿ ಕಡಲೆ ಹಾಗೂ ಎಳ್ಳು ಸೇರಿಸಿ ನುಣ್ಣಗೆ ಪುಡಿ ಮಾಡಿಕೊಳ್ಳಿ.

* ತದನಂತರದಲ್ಲಿ ಅಕ್ಕಿ ಪುಡಿಗೆ, ಈಗಾಗಲೇ ಪುಡಿ ಮಾಡಿಟ್ಟ ಶೇಂಗಾ, ಹುರಿ ಕಡಲೆ ಹಾಗೂ ಎಳ್ಳು ಮಿಶ್ರಣ ಹಾಗೂ ಹುರಿದಿಟ್ಟ ಶೇಂಗಾ, ಹುರಿ ಕಡಲೆ ಹಾಗೂ ಕೊಬ್ಬರಿ ತುರಿಯನ್ನು ಸೇರಿಸಿಕೊಳ್ಳಿ. ಬೇಕಿದ್ದರೆ ಏಲಕ್ಕಿ ಪುಡಿ ಸೇರಿಸಿಕೊಳ್ಳಬಹುದು.

* ಒಂದು ಪಾತ್ರೆಗೆ ಬೆಲ್ಲ ಹಾಕಿ, 1/2 ಕಪ್‌ ನೀರು ಸೇರಿಸಿ ಬಿಸಿಯಾಗಲು ಬಿಡಿ. ಬೆಲ್ಲ ಕರಗಿ ಒಂದು ಕುದಿ ಬರುತ್ತಿದ್ದಂತೆ ಸ್ಟೌವ್‌ ಆಫ್‌ ಮಾಡಿಕೊಳ್ಳಿ.

* ತದನಂತರದಲ್ಲಿ ಅಕ್ಕಿ ಹಿಟ್ಟಿನ ಮಿಶ್ರಣಕ್ಕೆ ಈ ಬೆಲ್ಲದ ಪಾಕವನ್ನು ಸ್ವಲ್ಪ ಸ್ವಲ್ಪವೇ ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ. ಕೈಗೆ ಸ್ವಲ್ಪ ತುಪ್ಪ ಸವರಿಕೊಂಡು ಉಂಡೆಗಳಾಗಿ ಮಾಡಿಕೊಂಡರೆ ಹುರಿದ ಅಕ್ಕಿ ತಂಬಿಟ್ಟು ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ