AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲೋವೆರಾದಿಂದ ಮನೆ ಮದ್ದು ತಯಾರಿಸಿ, ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿ

ಅಲೋವೆರಾ ಅಥವಾ ಲೋಳೆಸರ ಈ ಹೆಸರು ಎಲ್ಲರಿಗೂ ಕೂಡ ಚಿರಪರಿಚಿತ. ಹೆಚ್ಚಿನವರ ಮನೆಯ ಅಂಗಳದಲ್ಲಿ ಇರುವ ಈ ಅಲೋವೆರಾ ಸಸ್ಯವು ಆಯುರ್ವೇದದಲ್ಲಿ ಪ್ರಮುಖವಾಗಿ ಬಳಸಲಾಗುವ ಸಸ್ಯವಾಗಿದೆ. ಅತ್ಯಾಧಿಕ ಔಷಧೀಯ ಗುಣವನ್ನು ಹೊಂದಿರುವ ಈ ಅಲೋವೆರಾವು ಮುಖ ಹಾಗೂ ಕೂದಲಿನ ಆರೈಕೆಗೆ ಮಾತ್ರವಲ್ಲದೇ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಈ ಲೋಳೆಸರದಿಂದ ಮನೆಯಲ್ಲೇ ಮನೆಮದ್ದನ್ನು ತಯಾರಿಸಿ ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು.

ಅಲೋವೆರಾದಿಂದ ಮನೆ ಮದ್ದು ತಯಾರಿಸಿ, ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿ
ಸಾಯಿನಂದಾ
| Edited By: |

Updated on: Feb 02, 2024 | 2:10 PM

Share

ಎಲ್ಲರ ಮನೆಯಲ್ಲಿರುವ ಸಸ್ಯಗಳಲ್ಲಿ ಅಲೋವೆರಾ ಕೂಡ ಒಂದು. ಮನೆ ಮದ್ದಿಗೆ ಬಳಸುವ ಈ ಅಲೋವೆರಾದಲ್ಲಿ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಅಲೋವೆರಾದಲ್ಲಿ ವಿಟಮಿನ್ ಎ, ಸಿ, ಇ ಮತ್ತು ಬಿ ಕಾಂಪ್ಲೆಕ್ಸ್ ಮತ್ತು ಖನಿಜಗಳಾದ ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸತು ಮತ್ತು ಅಮೈನೋ ಆಮ್ಲಗಳು ಹೇರಳವಾಗಿದೆ. ಮುಖ ಹಾಗೂ ಕೂದಲಿನ ಸೌಂದರ್ಯಕ್ಕೆ ಮಾತ್ರವಲ್ಲದೇ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ.

ಸುಲಭವಾಗಿ ತಯಾರಿಸಬಹುದಾದ ಲೋಳೆಸರದ ಮನೆ ಮದ್ದುಗಳು

* ಲೋಳೆಸರದ ತಿರುಳನ್ನು ನುಣ್ಣಗೆ ರುಬ್ಬಿಕೊಂಡು ಅದನ್ನು ಜೀರಿಗೆ ಮತ್ತು ಬೆಲ್ಲದ ಪುಡಿಯೊಂದಿಗೆ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹೊಟ್ಟೆನೋವಿಗೆ ಉತ್ತಮ ಔಷಧಿಯಾಗಿದೆ.

* ಲೋಳೆಸರದ ತಿರುಳನ್ನು ನುಣ್ಣಗೆ ಅರೆದು ಅದನ್ನು ಕಣ್ಣರೆಪ್ಪೆಯ ಮೇಲೆ ಇಟ್ಟುಕೊಂಡು ಮಲಗಿದರೆ ಕಣ್ಣುನೋವು ಗುಣ ಮುಖವಾಗುತ್ತದೆ.

* ಲೋಳೆಸರ ಹಚ್ಚುವುದರಿಂದ ನೋವು ಮತ್ತು ಊತವು ಕಡಿಮೆಯಾಗುತ್ತದೆ.

* ಲೋಳೆಸರದ ತಿರುಳನ್ನು ಅರೆದು, ಸ್ವಲ್ಪ ಪ್ರಮಾಣದಲ್ಲಿ ಕಲ್ಲು ಸಕ್ಕರೆ ಪುಡಿ, ಜೀರಿಗೆ ಪುಡಿ ಬೆರೆಸಿ, ಪ್ರತಿದಿನ ಬೆಳಗ್ಗೆ ಸೇವಿಸಿದರೆ ಉರಿಮೂತ್ರ ಸಮಸ್ಯೆಯೂ ನಿವಾರಣೆಯಾಗುತ್ತದೆ.

* ಅಲೋವೆರಾ ರಸಕ್ಕೆ ಅರಿಶಿನ ಬೆರೆಸಿ ಬಾಯಿ ಹುಣ್ಣಿಗೆ ಹಚ್ಚುವುದರಿಂದ ಈ ಸಮಸ್ಯೆಯೂ ಕಡಿಮೆಯಾಗುತ್ತದೆ.

* ಲೋಳೆಸರದ ತಿರುಳನ್ನು ಅರೆದು ದಿನಕ್ಕೆ ಮೂರು ಬಾರಿ ಒಂದು ಚಮಚೆಯಷ್ಟು ಸೇವಿಸುವುದರಿಂದ ಮೂಲವ್ಯಾಧಿಯೂಯೂ ಶಮನವಾಗುತ್ತದೆ.

* ಲೋಳೆಸರದ ತಿರುಳನ್ನು ರುಬ್ಬಿ ತಲೆ ಕೂದಲಿಗೆ ಹಚ್ಚಿಕೊಂಡು ಒಂದು ಗಂಟೆಯ ನಂತರ ಸ್ನಾನ ಮಾಡಿದರೆ ತಲೆಕೂದಲಿನ ಹೊಳಪು ಹೆಚ್ಚಾಗುವುದರೊಂದಿಗೆ ತಲೆ ಹೊಟ್ಟು ನಿವಾರಣೆಯಾಗುತ್ತದೆ.

ಇದನ್ನೂ ಓದಿ: ಕಹಿಗುಣವಿರುವ ನುಗ್ಗೆ ಸೊಪ್ಪು ಹಲವು ಆರೋಗ್ಯ ಸಮಸ್ಯೆಗಳಿಗೆ ಔಷಧಿ, ಇಲ್ಲಿದೆ ಸರಳ ಮನೆ ಮದ್ದು

* ಲೋಳೆ ಸರದ ತಿರುಳನ್ನು ಬೆಲ್ಲದೊಂದಿಗೆ ಬೆರೆಸಿ ಪ್ರತಿದಿನ ಬೆಳಗ್ಗೆ ಖಾಲಿಹೊಟ್ಟೆಯಲ್ಲಿ ಹದಿನೈದು ದಿನಗಳ ಕಾಲ ಸೇವನೆ ಮಾಡಿದರೆ ಋತುಸ್ರಾವಕ್ಕೆಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತದೆ.

* ಲೋಳೆಸರ ರಸಕ್ಕೆ ಜೇನು ತುಪ್ಪ ಸೇರಿಸಿ ಸತತ ಮೂರು ತಿಂಗಳಗಳ ಕಾಲ ಸೇವಿಸುವುದರಿಂದ ಮುಟ್ಟಿನ ತೊಂದರೆಗಳು ನಿವಾರಣೆಯಾಗುತ್ತದೆ.

* ಮಲಬದ್ಧತೆಯಿಂದ ಬಳಲುತ್ತಿರುವವರು ಲೋಳೆಸರ ಅಥವಾ ಅಲೋವೆರಾ ರಸಕ್ಕೆ ಬಿಸಿ ನೀರು ಸೇರಿಸಿ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ಪರಿಣಾಮಕಾರಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ