AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಮ್ಯಾಂಗೋ ಲಸ್ಸಿ ಸವಿಯಲು ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್,  ಲಸ್ಸಿ ರೆಸಿಪಿ ಇಲ್ಲಿದೆ

ಜರ್ಮನಿಯಲ್ಲಿ ನ್ಯೂಸ್9 ಜಾಗತಿಕ ಶೃಂಗಸಭೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಗ್ಲೋಬಲ್ ಶೃಂಗಸಭೆಯಲ್ಲಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸುವ ವೇಳೆ ಮ್ಯಾಂಗೋ ಲಸ್ಸಿ ಸವಿಯಲು ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ್ದಾರೆ. ಎಲ್ಲರ ಫೇವರಿಟ್ ರಸಭರಿತವಾದ ಮ್ಯಾಂಗೋ ಲಸ್ಸಿಯನ್ನು ಮನೆಯಲ್ಲೇ ಸುಲಭವಾಗಿ ಮಾಡಬಹುದು. ಆರೋಗ್ಯಕರ ಮ್ಯಾಂಗೋ ಲಸ್ಸಿ ಈ ರೆಸಿಪಿ ಇಲ್ಲಿದೆ.

 ಮ್ಯಾಂಗೋ ಲಸ್ಸಿ ಸವಿಯಲು ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್,  ಲಸ್ಸಿ ರೆಸಿಪಿ ಇಲ್ಲಿದೆ
ಅಶ್ವಿನಿ ವೈಷ್ಣವ್
ಅಕ್ಷಯ್​ ಪಲ್ಲಮಜಲು​​
|

Updated on:Nov 22, 2024 | 1:59 PM

Share

ಮಾವಿನ ಹಣ್ಣನ್ನು ಹಾಗೆಯೇ ತಿಂದರೂ ರುಚಿಯೇ, ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಸವಿಯುತ್ತಾರೆ. ಈ ಮಾವಿನ ಹಣ್ಣಿನಿಂದ ತಯಾರಿಸುವ ಮ್ಯಾಂಗೊ ಲಸ್ಸಿಯ ಹೆಸರು ಕೇಳಿದ್ರೆ ಬಾಯಲ್ಲಿ ನೀರೂರುತ್ತೆ. ವಿಶ್ವದ ಟಾಪ್‌ 16 ಡೇರಿ ಪಾನೀಯಗಳ ಪಟ್ಟಿಯಲ್ಲಿ ಮ್ಯಾಂಗೊ ಲಸ್ಸಿ ಮೊದಲ ಸ್ಥಾನ ಪಡೆದುಕೊಂಡಿದೆ. ಪೌಷ್ಟಿಕಾಂಶಯುಕ್ತ ಈ ಪಾನೀಯವು ಆರೋಗ್ಯಕ್ಕೆ ಬಹಳ ಒಳ್ಳೆಯದು. ರಸಭರಿತವಾದ ಮಾಗಿದ ಮಾವಿನ ಹಣ್ಣಿನಿಂದ ಲಸ್ಸಿಯನ್ನು ಮಾಡಿ ಸವಿಯಬಹುದು. ಹಾಗಾದ್ರೆ ಸುಲಭವಾಗಿ ಮಾಡಬಹುದಾದ ಈ ಮ್ಯಾಂಗೋ ಲಸ್ಸಿ ರೆಸಿಪಿ ಇಲ್ಲಿದೆ.

ಮಾವಿನಹಣ್ಣಿನ ಲಸ್ಸಿ ಮಾಡಲು ಬೇಕಾಗುವ ಸಾಮಗ್ರಿಗಳು

* ಮಾಗಿದ ಮಾವಿನಹಣ್ಣು – 1

* ಮೊಸರು – 1 ಕಪ್

* ಚಿಯಾ ಬೀಜ – 2 ದೊಡ್ಡ ಚಮಚ

* ಜೇನುತುಪ್ಪ – 1ಚಮಚ

* ನೀರು – 1/2 ಕಪ್

* ಏಲಕ್ಕಿ ಪುಡಿ

* ಐಸ್ ತುಂಡುಗಳು

ಇದನ್ನೂ ಓದಿ: ಯೋಗಿ ಟೀ, ಬಟರ್ ಚಿಕನ್… ಭಾರತ-ಜರ್ಮನಿ ಗೆಳೆತನಕ್ಕೆ ಉದಾಹರಣೆ ಕೊಟ್ಟ ರಾಯಭಾರಿ ಗುಪ್ತೆ

ಮಾವಿನಹಣ್ಣಿನ ಲಸ್ಸಿ ಮಾಡುವ ವಿಧಾನ

* ಮಾಗಿದ ಮಾವಿನಹಣ್ಣಿನ ಸಿಪ್ಪೆ ತೆಗೆದು ಸಣ್ಣ ಸಣ್ಣ ತುಂಡು ತುಂಡುಗಳಾಗಿ ಕತ್ತರಿಸಿಕೊಳ್ಳಿ.

* ಕತ್ತರಿಸಿಟ್ಟ ಮಾವಿನ ಹಣ್ಣಿನ ತುಂಡುಗಳನ್ನು ಮಿಕ್ಸಿ ಜಾರಿಗೆ ಹಾಕಿ, ಇದಕ್ಕೆ ಮೊಸರು, ಜೇನುತುಪ್ಪ ಹಾಗೂ ನೀರನ್ನು ಸೇರಿಸಿ ಗ್ರೈಂಡ್‌ ಮಾಡಿಕೊಳ್ಳಿ.

* ಈ ರುಬ್ಬಿದ ಮಿಶ್ರಣಕ್ಕೆ ಏಲಕ್ಕಿ ಪುಡಿಯನ್ನು ಹಾಕಿ ಬೆರೆಸಿಕೊಳ್ಳಿ. ಪಾನೀಯ ತಂಪಾಗಿಸಲು ಐಸ್ ತುಂಡುಗಳನ್ನು ಸೇರಿಸಿಕೊಳ್ಳಿ.

* ಆ ಬಳಿಕ ಈ ಮಿಶ್ರಣವನ್ನು ಲೋಟಕ್ಕೆ ಹಾಕಿ, ನೆನೆಸಿಟ್ಟ ಚಿಯಾ ಬೀಜಗಳಿಂದ ಅಲಂಕರಿಸಿದರೆ ರುಚಿಕರವಾದ ಮ್ಯಾಂಗೋ ಲಸ್ಸಿ ಸವಿಯಲು ಸಿದ್ಧ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Fri, 22 November 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ