AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಮ್ಯಾಂಗೋ ಲಸ್ಸಿ ಸವಿಯಲು ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್,  ಲಸ್ಸಿ ರೆಸಿಪಿ ಇಲ್ಲಿದೆ

ಜರ್ಮನಿಯಲ್ಲಿ ನ್ಯೂಸ್9 ಜಾಗತಿಕ ಶೃಂಗಸಭೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಗ್ಲೋಬಲ್ ಶೃಂಗಸಭೆಯಲ್ಲಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸುವ ವೇಳೆ ಮ್ಯಾಂಗೋ ಲಸ್ಸಿ ಸವಿಯಲು ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ್ದಾರೆ. ಎಲ್ಲರ ಫೇವರಿಟ್ ರಸಭರಿತವಾದ ಮ್ಯಾಂಗೋ ಲಸ್ಸಿಯನ್ನು ಮನೆಯಲ್ಲೇ ಸುಲಭವಾಗಿ ಮಾಡಬಹುದು. ಆರೋಗ್ಯಕರ ಮ್ಯಾಂಗೋ ಲಸ್ಸಿ ಈ ರೆಸಿಪಿ ಇಲ್ಲಿದೆ.

 ಮ್ಯಾಂಗೋ ಲಸ್ಸಿ ಸವಿಯಲು ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್,  ಲಸ್ಸಿ ರೆಸಿಪಿ ಇಲ್ಲಿದೆ
ಅಶ್ವಿನಿ ವೈಷ್ಣವ್
ಅಕ್ಷಯ್​ ಪಲ್ಲಮಜಲು​​
|

Updated on:Nov 22, 2024 | 1:59 PM

Share

ಮಾವಿನ ಹಣ್ಣನ್ನು ಹಾಗೆಯೇ ತಿಂದರೂ ರುಚಿಯೇ, ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಸವಿಯುತ್ತಾರೆ. ಈ ಮಾವಿನ ಹಣ್ಣಿನಿಂದ ತಯಾರಿಸುವ ಮ್ಯಾಂಗೊ ಲಸ್ಸಿಯ ಹೆಸರು ಕೇಳಿದ್ರೆ ಬಾಯಲ್ಲಿ ನೀರೂರುತ್ತೆ. ವಿಶ್ವದ ಟಾಪ್‌ 16 ಡೇರಿ ಪಾನೀಯಗಳ ಪಟ್ಟಿಯಲ್ಲಿ ಮ್ಯಾಂಗೊ ಲಸ್ಸಿ ಮೊದಲ ಸ್ಥಾನ ಪಡೆದುಕೊಂಡಿದೆ. ಪೌಷ್ಟಿಕಾಂಶಯುಕ್ತ ಈ ಪಾನೀಯವು ಆರೋಗ್ಯಕ್ಕೆ ಬಹಳ ಒಳ್ಳೆಯದು. ರಸಭರಿತವಾದ ಮಾಗಿದ ಮಾವಿನ ಹಣ್ಣಿನಿಂದ ಲಸ್ಸಿಯನ್ನು ಮಾಡಿ ಸವಿಯಬಹುದು. ಹಾಗಾದ್ರೆ ಸುಲಭವಾಗಿ ಮಾಡಬಹುದಾದ ಈ ಮ್ಯಾಂಗೋ ಲಸ್ಸಿ ರೆಸಿಪಿ ಇಲ್ಲಿದೆ.

ಮಾವಿನಹಣ್ಣಿನ ಲಸ್ಸಿ ಮಾಡಲು ಬೇಕಾಗುವ ಸಾಮಗ್ರಿಗಳು

* ಮಾಗಿದ ಮಾವಿನಹಣ್ಣು – 1

* ಮೊಸರು – 1 ಕಪ್

* ಚಿಯಾ ಬೀಜ – 2 ದೊಡ್ಡ ಚಮಚ

* ಜೇನುತುಪ್ಪ – 1ಚಮಚ

* ನೀರು – 1/2 ಕಪ್

* ಏಲಕ್ಕಿ ಪುಡಿ

* ಐಸ್ ತುಂಡುಗಳು

ಇದನ್ನೂ ಓದಿ: ಯೋಗಿ ಟೀ, ಬಟರ್ ಚಿಕನ್… ಭಾರತ-ಜರ್ಮನಿ ಗೆಳೆತನಕ್ಕೆ ಉದಾಹರಣೆ ಕೊಟ್ಟ ರಾಯಭಾರಿ ಗುಪ್ತೆ

ಮಾವಿನಹಣ್ಣಿನ ಲಸ್ಸಿ ಮಾಡುವ ವಿಧಾನ

* ಮಾಗಿದ ಮಾವಿನಹಣ್ಣಿನ ಸಿಪ್ಪೆ ತೆಗೆದು ಸಣ್ಣ ಸಣ್ಣ ತುಂಡು ತುಂಡುಗಳಾಗಿ ಕತ್ತರಿಸಿಕೊಳ್ಳಿ.

* ಕತ್ತರಿಸಿಟ್ಟ ಮಾವಿನ ಹಣ್ಣಿನ ತುಂಡುಗಳನ್ನು ಮಿಕ್ಸಿ ಜಾರಿಗೆ ಹಾಕಿ, ಇದಕ್ಕೆ ಮೊಸರು, ಜೇನುತುಪ್ಪ ಹಾಗೂ ನೀರನ್ನು ಸೇರಿಸಿ ಗ್ರೈಂಡ್‌ ಮಾಡಿಕೊಳ್ಳಿ.

* ಈ ರುಬ್ಬಿದ ಮಿಶ್ರಣಕ್ಕೆ ಏಲಕ್ಕಿ ಪುಡಿಯನ್ನು ಹಾಕಿ ಬೆರೆಸಿಕೊಳ್ಳಿ. ಪಾನೀಯ ತಂಪಾಗಿಸಲು ಐಸ್ ತುಂಡುಗಳನ್ನು ಸೇರಿಸಿಕೊಳ್ಳಿ.

* ಆ ಬಳಿಕ ಈ ಮಿಶ್ರಣವನ್ನು ಲೋಟಕ್ಕೆ ಹಾಕಿ, ನೆನೆಸಿಟ್ಟ ಚಿಯಾ ಬೀಜಗಳಿಂದ ಅಲಂಕರಿಸಿದರೆ ರುಚಿಕರವಾದ ಮ್ಯಾಂಗೋ ಲಸ್ಸಿ ಸವಿಯಲು ಸಿದ್ಧ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Fri, 22 November 24

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು