AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Martyrs Day 2026: ಮಾರ್ಚ್‌ 23 ರಂದು ಆಚರಿಸಲಾಗುವ ಹುತಾತ್ಮರ ದಿನದ ಮಹತ್ವವೇನು ಗೊತ್ತಾ?

ಭಾರತದಲ್ಲಿ ಪ್ರತಿವರ್ಷ ಎರಡು ಬಾರಿ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಜನವರಿ 30 ರಂದು ಮಹಾತ್ಮ ಗಾಂಧೀಯವರ ಪುಣ್ಯತಿಥಿಯಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಅದೇ ರೀತಿ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಪುತ್ರರು, ಸ್ವಾತಂತ್ರ್ಯ ಹೋರಾಟಗಾರರು ಮತ್ತು ಕ್ರಾಂತಿಕಾರಿಗಳ ತ್ಯಾಗ, ಬಲಿದಾನವನ್ನು ಸ್ಮರಿಸುವ ಸಲುವಾಗಿ ಮಾರ್ಚ್‌ 23 ರಂದೂ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

Martyrs Day 2026: ಮಾರ್ಚ್‌ 23 ರಂದು ಆಚರಿಸಲಾಗುವ ಹುತಾತ್ಮರ ದಿನದ ಮಹತ್ವವೇನು ಗೊತ್ತಾ?
ಹುತಾತ್ಮರ ದಿನImage Credit source: Pinterest
ಮಾಲಾಶ್ರೀ ಅಂಚನ್​
|

Updated on: Mar 23, 2026 | 10:34 AM

Share

ಮಾರ್ಚ್‌ 23 ರಂದು ಆಚರಿಸಲಾಗುವ ಹುತಾತ್ಮರ ದಿನವು (Martyrs’ Day) ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದೆ. ಮಾರ್ಚ್ 23, 1931 ರಂದು, ಬ್ರಿಟಿಷ್ ಸರ್ಕಾರವು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ಲಾಹೋರ್ ಜೈಲಿನಲ್ಲಿ ಗಲ್ಲಿಗೇರಿಸಿತು. ಸಣ್ಣ ವಯಸ್ಸಿನಲ್ಲಿಯೇ  ಈ ಮೂವರು ಕ್ರಾಂತಿಕಾರಿಗಳು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ತಮ್ಮ ಧೈರ್ಯ ಮತ್ತು ದೇಶಭಕ್ತಿಯ ಮೂಲಕ, ಈ ಮೂವರು ಕ್ರಾಂತಿಕಾರಿಗಳು ದೇಶಾದ್ಯಂತ ಸ್ವಾತಂತ್ರ್ಯ ಹೋರಾಟದ ಹೊಸ ಚೈತನ್ಯವನ್ನು ಜಾಗೃತಗೊಳಿಸಿದರು. ಇವರ ಈ ತ್ಯಾಗ ಮತ್ತು ಬಲಿದಾನವನ್ನು ಹಾಗೂ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಪುತ್ರರು, ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸಲು ಮಾರ್ಚ್‌ 23 ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವೇನು ಎಂಬುದನ್ನು ತಿಳಿಯೋಣ ಬನ್ನಿ.

ಹುತಾತ್ಮರ ದಿನದ ಇತಿಹಾಸವೇನು?

ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಭಾರತೀಯ ಸ್ವಾತಂತ್ರ್ಯ ಹೋರಾಟದ ಪ್ರಮುಖ ಕ್ರಾಂತಿಕಾರಿಗಳಾಗಿದ್ದಾರೆ.  ಅವರು ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟವನ್ನು ನಡೆಸಿದ್ದಲ್ಲದೆ, ತಮ್ಮ ಆಲೋಚನೆಗಳ ಮೂಲಕ ದೇಶದ ಯುವಕರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕುವಂತೆ ಪ್ರೇರೇಪಿಸಿದರು. ಭಗತ್ ಸಿಂಗ್ ಸ್ವಾತಂತ್ರ್ಯವನ್ನು ತನ್ನ ಜೀವನದ ಗುರಿಯಾಗಿಸಿಕೊಂಡರು ಮತ್ತು ಚಿಕ್ಕ ವಯಸ್ಸಿನಲ್ಲಿಯೇ ಬ್ರಿಟಿಷರ ವಿರುದ್ಧ ಹಲವಾರು ಕ್ರಮಗಳನ್ನು ಕೈಗೊಂಡರು, ಅದು ಬ್ರಿಟಿಷ್ ಆಳ್ವಿಕೆಯ ಅಡಿಪಾಯವನ್ನು ಅಲುಗಾಡಿಸಿತು. ನಂತರ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ 1929 ರಲ್ಲಿ ಸೆಂಟ್ರಲ್‌ ಜೆಜಿಸ್ಲೇಟಿವ್‌ ಅಸೆಂಬ್ಲಿಯ ಮೇಲೆ ಬಾಂಬ್‌ ದಾಳಿ ಮಾಡಿದ ನಂತರ ಇವರನ್ನು ಜೈಲಿಗೆ ಕಳುಹಿಸಲಾಯಿತು. ಬಳಿಕ ಈ ಮೂವರು ಭಾರತ ಮಾತೆಯ ವೀರ ಪುತ್ರರಿಗೆ ಮರಣ ದಂಡಣೆಯನ್ನು ವಿಧಿಸಲಾಯಿತು ಮತ್ತು ಮಾರ್ಚ್‌ 23, 1931 ರಂದು ಈ ಮೂವರು ವೀರ ಹೋರಾಟಗಾರರನ್ನು ಗಲ್ಲಿಗೇರಿಸಲಾಯಿತು. ಗಲ್ಲಿಗೇರಿಸಿದಾಗ ಭಗತ್ ಸಿಂಗ್ ಮತ್ತು ಸುಖದೇವ್ ಕೇವಲ 23 ವರ್ಷ ವಯಸ್ಸಿನವರಾಗಿದ್ದರು,ರಾಜಗುರು ಅವರು ಕೇವಲ 22 ವರ್ಷದವರಾಗಿದ್ದರು. ಸಣ್ಣ ವಯಸ್ಸಿನಲ್ಲಿಯೇ ಇವರು ದೇಶಕ್ಕಾಗಿ ಮಾಡಿದ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಲು ಪ್ರತಿವರ್ಷ ಮಾರ್ಚ್‌ 23 ರಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ನೀರನ್ನು ಮಿತವಾಗಿ ಬಳಸುವ ಮೂಲಕ ಜೀವಜಲವನ್ನು ಸಂರಕ್ಷಿಸೋಣ

ಹುತಾತ್ಮರ ದಿನದ ಮಹತ್ವವೇನು?

  • ಹುತಾತ್ಮರ ದಿನದ ಮಹತ್ವ ಕೇವಲ ಭಾರತ ಮಾತೆಯ ವೀರ ಪುತ್ರರನ್ನು ನೆನಪಿಸಿಕೊಳ್ಳುವುದಲ್ಲ, ಬದಲಾಗಿ ಅವರ ಆದರ್ಶಗಳು ಮತ್ತು ಕನಸುಗಳನ್ನು ನನಸಾಗಿಸಲು ನಮ್ಮನ್ನು ಪ್ರೇರೇಪಿಸುವುದೂ ಆಗಿದೆ.
  • ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರು ತಮ್ಮ ದೇಶಕ್ಕಾಗಿ ಮಾಡಿದ ತ್ಯಾಗಗಳು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯ ಮೂಲವಾಗಿದೆ. ಈ ದಿನವು ಸ್ವಾತಂತ್ರ್ಯವು ಎಷ್ಟು ದುಬಾರಿ ಬೆಲೆಗೆ ಸಿಕ್ಕಿತು ಎಂಬುದನ್ನು ನೆನಪಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ