AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mawe Tribe: ಗಂಡಸರು ಈ ವಿಶೇಷ ಪರೀಕ್ಷೆಯಲ್ಲಿ ಪಾಸಾದರೆ ಮಾತ್ರ ಮದುವೆ !; ಫೇಲಾದರೆ ಮದುವೇ ಇಲ್ಲ?

ಬುಡಕಟ್ಟು ಜನಾಂಗವೊಂದು ತನ್ನ ಸಮುದಾಯದ ಹದಿಹರೆಯದ ಯುವಕರಿಗೆ ವಿಚಿತ್ರ ಸವಾಲುವೊಂದನ್ನು ನೀಡುತ್ತದೆ. ಆ ಸವಾಲಿನಲ್ಲಿ ಗೆದ್ದರೆ ಮಾತ್ರ ಆತ ಮದುವೆಯಾಗೋಕೆ ಅರ್ಹ ಎಂದು ನಿರ್ಧರಿಸಲಾಗುತ್ತದೆ. ಅಷ್ಟಕ್ಕೂ ಆ ಸವಾಲು ಏನು ಗೊತ್ತಾ? ಈ ಸ್ಟೋರಿನಾ ಪೂರ್ತಿಯಾಗಿ ಓದಿ.

Mawe Tribe: ಗಂಡಸರು ಈ ವಿಶೇಷ ಪರೀಕ್ಷೆಯಲ್ಲಿ ಪಾಸಾದರೆ ಮಾತ್ರ ಮದುವೆ !; ಫೇಲಾದರೆ ಮದುವೇ ಇಲ್ಲ?
Mawe Tribe Tradition Image Credit source: Twitter
ಅಕ್ಷತಾ ವರ್ಕಾಡಿ
|

Updated on: Jun 23, 2023 | 3:38 PM

Share

ಬ್ರೆಜಿಲ್‌ನ ಅಮೆಜಾನ್ ಅರಣ್ಯದಲ್ಲಿ ವಾಸಿಸುವ ಮಾವೆ ಬುಡಕಟ್ಟು(Mawe Tribe) ಸಮುದಾಯದ ವಿಚಿತ್ರ ಸಂಪ್ರದಾಯವೊಂದು ನಿಮ್ಮನ್ನು ಬೆಚ್ಚಿಬೀಳಿಸಿದಂತೂ ಖಂಡಿತಾ. ಈ ಜನಾಂಗದಲ್ಲಿ ಹದಿಹರೆಯದ ಯುವಕರಿಗೊಂದು ವಿಚಿತ್ರವಾದ ಸವಾಲುಗಳನ್ನು ಇಡಲಾಗುತ್ತದೆ. ಆ ಸವಾಲಿನಿಂದ ಗೆದ್ದರೆ ಮಾತ್ರ ಆತ ಮದುವೆಯಾಗೋಕೆ ಅರ್ಹ ಎಂದು ನಿರ್ಧರಿಸಲಾಗುತ್ತದೆ. ಜೊತೆಗೆ ಆತ ಶಕ್ತಿಶಾಲಿ ಪುರುಷ ಎಂಬ ಬಿರುದು ಕೂಡ ನೀಡಲಾಗುತ್ತದೆ. ಆ ವಿಚಿತ್ರ ಸವಾಲಿನ ಬಗ್ಗೆ ಮಾಹಿತಿ ಇಲ್ಲಿದೆ.

ಏನಿದು ವಿಚಿತ್ರ ಸವಾಲು?

ಒಂದು ಚಿಕ್ಕದಾದ ಕೈಗವಚವನ್ನು ಕೈಗೆ ಹಾಕಿ 10 ನಿಮಿಷ ನಿಂತರೆ ಸಾಕು. ಏನಪ್ಪಾ ಇಷ್ಟೊಂದು ಸುಲಭವಾಗಿರುವ ಸವಾಲು ಅಂತಾ ಅಂದ್ಕೋಬೇಡಿ. ಆದ್ರೆ ಇಲ್ಲೇ ಇರೋದು ಟ್ವಿಸ್ಟ್​​. ಹೌದು ಈ ಚಿಕ್ಕದಾದ ಕೈಗವಚದೊಳಗೆ ಅತ್ಯಂತ ಅಪಾಯಕಾರಿಯಾದ ಇರುವೆ (Bullet Ant) ಹಾಕಲಾಗಿರುತ್ತದೆ. ಈ ಇರುವೆ ಕಚ್ಚಿದ ನೋವು 30 ಜೇನುನೊಣ ಕಚ್ಚಿದ ನೋವಿಗೆ ಸಮನಾಗಿರುತ್ತದೆಯಂತೆ. ಈ ಕೈವಚ ಹಾಕಿಕೊಂಡು 30 ನಿಮಿಷಗಳ ಕುಣಿದರೆ ಮಾತ್ರ ಆತನಿಗೆ ಮದುವೆ ಮತ್ತು ಆ ಸಮುದಾಯದಲ್ಲಿ ಮರ್ಯಾದೆ ನೀಡಲಾಗುತ್ತದೆ. ಈ ವಿಚಿತ್ರ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಹೊರತು ಅಲ್ಲಿನ ಪುರುಷರಿಗೆ ಮದುವೆಯಾಗುವುದಿಲ್ಲ. ಈ ಇರುವೆ ಗುಂಡು ತಗುಲಿದಷ್ಟೇ ನೋವಾಗುತ್ತದೆ ಎನ್ನುತ್ತಾರೆ. ಜೊತೆಗೆ ಇರುವೆ ಕಚ್ಚಿದ ನಂತರ ಹಲವಾರು ದಿನಗಳವರೆಗೆ, ನೋವಿಗೆ ಕೈಯಲ್ಲಿ ಊತವೂ ಕಂಡುಬರುತ್ತದೆ.

ಇದನ್ನೂ ಓದಿ: ತುರ್ತು ಅಗತ್ಯತೆ ಹೊರತಾಗಿ ರೈಲಿನಲ್ಲಿ ಚೈನ್ ಎಳೆದರೆ ಅಪರಾಧಿಗೆ ಶಿಕ್ಷೆ ಏನು ಗೊತ್ತಾ? ಹೊಸಾ ರೂಲ್ಸ್​ ಏನ್​ ಹೇಳತ್ತೆ?

ಈ ಅಪಾಯಕಾರಿ ಪರೀಕ್ಷೆಗಾಗಿ 12 ವರ್ಷ ಮೇಲ್ಪಟ್ಟ ಹದಿಹರೆಯದ ಯವಕರು ಕಾಡಿನಿಂದ ಅಪಾಯಕಾರಿ ಇರುವೆಗಳನ್ನು ತಾವಾಗಿಯೇ ತರಬೇಕು ಮತ್ತು ಮರದ ಕೈಗವಸುಗಳನ್ನು ತಯಾರಿಸಬೇಕು. ನಂತರ ಈ ಕೈಗವಸುಗಳನ್ನು 20 ಬಾರಿ ಧರಿಸುತ್ತಾರೆ. ಇದನ್ನು ಒಮ್ಮೆಗೆ 10 ನಿಮಿಷಗಳ ಕಾಲ ಧರಿಸಲಾಗುತ್ತದೆ. ಈ ಅಪಾಯಕಾರಿ ಇರುವೆ ಕಡಿತದ ನೋವು ಜೇನುನೊಣಕ್ಕಿಂತ 30 ಪಟ್ಟು ಹೆಚ್ಚು ಎಂದು ಹೇಳಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ