AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watermelon: ಕಲ್ಲಂಗಡಿ ತಿಂದರೆ ಪುರುಷರ ಫರ್ಟಿಲಿಟಿ ಹೆಚ್ಚಾಗುತ್ತಾ?

ಕಲ್ಲಂಗಡಿ ಹಣ್ಣು ಹೇರಳವಾದ ನೀರಿನಂಶದಿಂದ ತುಂಬಿರುವುದರಿಂದ ಬೇಸಿಗೆಗೆ ಹೇಳಿಮಾಡಿಸಿದ ಹಣ್ಣು ಇದಾಗಿದೆ. ಬೇಸಿಗೆಯಲ್ಲಿ ಕಲ್ಲಂಗಡಿಯ ಫಸಲು ಕೂಡ ಹೆಚ್ಚಾಗುತ್ತದೆ. ಕಲ್ಲಂಗಡಿ ಮಲಬದ್ಧತೆ ನಿವಾರಿಸಲು, ನಿರ್ಜಲೀಕರಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಪುರುಷರ ಫರ್ಟಿಲಿಟಿ ಹೆಚ್ಚಳಕ್ಕೂ ಇದು ಸಹಾಯ ಮಾಡುತ್ತದೆ ಎಂಬ ಸಂಗತಿ ನಿಮಗೆ ಗೊತ್ತಾ?

Watermelon: ಕಲ್ಲಂಗಡಿ ತಿಂದರೆ ಪುರುಷರ ಫರ್ಟಿಲಿಟಿ ಹೆಚ್ಚಾಗುತ್ತಾ?
ಕಲ್ಲಂಗಡಿImage Credit source: iStock
ಸುಷ್ಮಾ ಚಕ್ರೆ
|

Updated on: Apr 13, 2024 | 6:32 PM

Share

ಕಲ್ಲಂಗಡಿ ಒಂದು ಆರೋಗ್ಯಕರ ಹಣ್ಣಾಗುವುದರ ಜೊತೆಗೆ ಪುರುಷದ ಫಲವತ್ತತೆಗೆ ಸಹ ಉತ್ತಮವಾದ ಹಣ್ಣಾಗಿದೆ. ಕಲ್ಲಂಗಡಿಯಲ್ಲಿ ಪೋಷಣೆ, ಜಲಸಂಚಯನ, ಕ್ಷಾರ, ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಸ್ಟ್ರಾಬೆರಿ ಮತ್ತು ಬೀಟಾ-ಕ್ಯಾರೋಟಿನ್‌ಗಿಂತ ಹೆಚ್ಚು ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ ಎಂದು ಆಯುರ್ವೇದ ವೈದ್ಯ ವೈದ್ಯ ಮನೀಶಾ ಮಿಶ್ರಾ ಹೇಳಿದ್ದಾರೆ.

ಈ ಹಣ್ಣಿನಲ್ಲಿರುವ ಲೈಕೋಪೀನ್ ಅಪಧಮನಿಯ ಗೋಡೆಗಳ ದಪ್ಪವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಸಿಟ್ರುಲಿನ್ ಎಂಬ ಅಮೈನೋ ಆಮ್ಲವು ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುವ ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸುತ್ತದೆ. ಆದ್ದರಿಂದ, ಪುರುಷರ ಫಲವತ್ತತೆ ಸಮಸ್ಯೆಗಳಿಗೆ ಇದು ಉಪಯುಕ್ತವಾಗಿದೆ ಎಂದು ಡಾ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಕಲ್ಲಂಗಡಿ ಹಣ್ಣಿನಿಂದ ನಿಮ್ಮ ಸೌಂದರ್ಯ ಹೆಚ್ಚಿಸುವುದು ಹೇಗೆ?

ಬೇಸಿಗೆಯಲ್ಲಿ, ಜೀರ್ಣಕ್ರಿಯೆಯು ಮೃದುವಾಗುತ್ತದೆ. ಅದಕ್ಕಾಗಿಯೇ ನಾವು ಕಲ್ಲಂಗಡಿ ಹಣ್ಣನ್ನು ತಿನ್ನುತ್ತೇವೆ. ಇದು ನಮ್ಮ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯಾದ ಆಯುರ್ವೇದವು ಕಲ್ಲಂಗಡಿಯನ್ನು ಕೇವಲ ಬಾಯಾರಿಕೆ ನೀಗಿಸುವುದಷ್ಟೇ ಅಲ್ಲದೆ ಪುರುಷ ಫಲವತ್ತತೆಯನ್ನು ಹೆಚ್ಚಿಸುವ ಪ್ರಬಲ ಹಣ್ಣಾಗಿ ಬಳಸುತ್ತದೆ. ಕಲ್ಲಂಗಡಿ ಆಂಟಿಆಕ್ಸಿಡೆಂಟ್‌ಗಳು, ವಿಟಮಿನ್‌ಗಳು ಮತ್ತು ಖನಿಜಗಳಲ್ಲಿ ಸಮೃದ್ಧವಾಗಿದೆ.

ಕಲ್ಲಂಗಡಿಯಲ್ಲಿ ಹೇರಳವಾಗಿರುವ ಪ್ರಬಲವಾದ ಉತ್ಕರ್ಷಣ ನಿರೋಧಕವಾದ ಲೈಕೋಪೀನ್ ವೀರ್ಯದ ಗುಣಮಟ್ಟ ಮತ್ತು ಎಣಿಕೆಯನ್ನು ಸುಧಾರಿಸುವಲ್ಲಿ ಅದರ ಸಂಭಾವ್ಯ ಪಾತ್ರಕ್ಕಾಗಿ ಅಧ್ಯಯನ ಮಾಡಲಾಗಿದೆ. ಉತ್ಕರ್ಷಣ ನಿರೋಧಕಗಳು ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಸಹಾಯ ಮಾಡುತ್ತದೆ. ಇದು ವೀರ್ಯ ಡಿಎನ್‌ಎಗೆ ಹಾನಿ ಮಾಡುತ್ತದೆ ಮತ್ತು ಫಲವತ್ತತೆಯನ್ನು ಕಡಿಮೆ ಮಾಡುತ್ತದೆ. ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಮೂಲಕ, ಲೈಕೋಪೀನ್ ವೀರ್ಯದ ಆರೋಗ್ಯವನ್ನು ಬೆಂಬಲಿಸುತ್ತದೆ ಮತ್ತು ಫಲವತ್ತತೆಯ ಫಲಿತಾಂಶಗಳನ್ನು ಸುಧಾರಿಸುತ್ತದೆ.

ಇದನ್ನೂ ಓದಿ: Pregnant Health: ಗರ್ಭಿಣಿಯರು ಕಲ್ಲಂಗಡಿ ಹಣ್ಣು ತಿನ್ನುವುದನ್ನು ಮಿಸ್ ಮಾಡಬೇಡಿ

ಸುಧಾರಿತ ರಕ್ತದ ಹರಿವು ನಿಮಿರುವಿಕೆಯ ಕ್ರಿಯೆಯ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಇದು ಲೈಂಗಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮೂಲಕ ಪುರುಷ ಫಲವತ್ತತೆಯ ಮೇಲೆ ಪರೋಕ್ಷವಾಗಿ ಪರಿಣಾಮ ಬೀರುತ್ತದೆ ಎಂದು ನ್ಯೂ ಫ್ರೆಂಡ್ಸ್ ಕಾಲೋನಿ (NFC) ಆರ್ಟೆಮಿಸ್ ಲೈಟ್‌ನ ವೈದ್ಯಕೀಯ ಪೌಷ್ಟಿಕತಜ್ಞರಾದ ಸಂಗೀತಾ ತಿವಾರಿ ಹೇಳಿದ್ದಾರೆ.

ನಿರ್ಜಲೀಕರಣವು ವೀರ್ಯದ ಸಾಂದ್ರತೆ ಮತ್ತು ಚಲನಶೀಲತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಕಲ್ಲಂಗಡಿಯಲ್ಲಿ ಹೆಚ್ಚಿನ ನೀರಿನ ಅಂಶವು ಜಲಸಂಚಯನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ಇದು ವೀರ್ಯ ಉತ್ಪಾದನೆ ಮತ್ತು ಒಟ್ಟಾರೆ ಸಂತಾನೋತ್ಪತ್ತಿ ಕಾರ್ಯಕ್ಕೆ ನಿರ್ಣಾಯಕವಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?