AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಈ ವಿಷಯ ತಿಳಿದುಕೊಳ್ಳಿ

ವಾಸ್ತು ಶಾಸ್ತ್ರದ ಪ್ರಕಾರ, ನೀವು ಬೆಳಿಗ್ಗೆ ಎದ್ದಾಗ ಕನ್ನಡಿಯಲ್ಲಿ ನೋಡುವುದು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಈ ವಿಷಯ ತಿಳಿದುಕೊಳ್ಳಿ
Mirror Vastu Tips
ಅಕ್ಷತಾ ವರ್ಕಾಡಿ
|

Updated on: May 09, 2024 | 9:58 AM

Share

ಹೆಚ್ಚಿನವರಿಗೆ ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸವಿರುತ್ತದೆ. ಆದರೆ ಜ್ಯೋತಿಷ್ಯ ತಜ್ಞರ ಪ್ರಕಾರ ಇಂತಹ ಅಭ್ಯಾಸವನ್ನು ಅಶುಭ ಎಂದು ಪರಿಗಣಿಸಲಾಗಿದೆ. ವಾಸ್ತು ನಿಯಮಗಳ ಪ್ರಕಾರ ಬೆಳಗ್ಗೆ ಬೇಗ ಎದ್ದು ಕನ್ನಡಿಯಲ್ಲಿ ಮುಖ ನೋಡಬಾರದು. ಇದು ಜೀವನದಲ್ಲಿ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಈ ಕಾರಣಕ್ಕಾಗಿ ಮಲಗುವ ಕೋಣೆಯಲ್ಲಿ ಕನ್ನಡಿ ಇರಬಾರದು ಎಂಬ ನಿಯಮವಿದೆ. ಮುಂಜಾನೆ ಕನ್ನಡಿ ನೋಡುವುದು ವಾಸ್ತುದಲ್ಲಿ ನಿಷಿದ್ಧ. ನೀವು ಬೆಳಿಗ್ಗೆ ಎದ್ದಾಗ ಕನ್ನಡಿಯಲ್ಲಿ ನೋಡುವುದು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ರಾತ್ರಿ ಹೊತ್ತಿನಲ್ಲಿ ನಕಾರಾತ್ಮಕ ಶಕ್ತಿಯು ಕನ್ನಡಿಯನ್ನು ಸುತ್ತುವರಿಯುತ್ತದೆ ಎಂದು ನಂಬಲಾಗಿದೆ. ಆದ್ದರಿಂದ, ನೀವು ಬೆಳಿಗ್ಗೆ ಎದ್ದ ತಕ್ಷಣ ಮತ್ತು ಕನ್ನಡಿಯಲ್ಲಿ ನೋಡಿದ ತಕ್ಷಣ, ಈ ನಕಾರಾತ್ಮಕ ಶಕ್ತಿಯು ವ್ಯಕ್ತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಪರಿಣಾಮವಾಗಿ ವ್ಯಕ್ತಿಯು ಅನಗತ್ಯ ಆಯಾಸ ಮತ್ತು ಒತ್ತಡವನ್ನು ಅನುಭವಿಸಬೇಕಾಗುತ್ತದೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯಲ್ಲಿ ನೋಡಿಕೊಂಡರೆ ಮನಸ್ಸಿಗೆ ತೊಂದರೆಯಾಗುತ್ತದೆ ಎಂಬ ನಂಬಿಕೆ ಇದೆ. ಬೆಳಗ್ಗೆ ಎದ್ದು ಕನ್ನಡಿಯಲ್ಲಿ ನೋಡಿದಾಗ ಮುಖದ ಮೇಲೆ ಮೊಡವೆ, ಸುಕ್ಕು, ಬೂದು ಕೂದಲು, ಕಲೆಗಳು ಕಾಣಿಸುತ್ತವೆ. ಇದು ವ್ಯಕ್ತಿಯ ಆತ್ಮವಿಶ್ವಾಸದ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸುತ್ತಾರೆ ಜ್ಯೋತಿಷ್ಯ ಶಾಸ್ತ್ರಜ್ಞರು.

ಇದನ್ನೂ ಓದಿ: ಅಕ್ಷಯ ತೃತೀಯದಂದು ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

ವಾಸ್ತು ಶಾಸ್ತ್ರದ ಪ್ರಕಾರ, ಬೆಳಿಗ್ಗೆ ಕನ್ನಡಿಯಲ್ಲಿ ಮುಖವನ್ನು ನೋಡುವುದು ಮತ್ತು ಒಬ್ಬರ ನೆರಳನ್ನು ನೋಡುವುದು ಅಶುಭ. ಬೆಳಿಗ್ಗೆ ನೆರಳನ್ನು ನೋಡುವುದು ವ್ಯಕ್ತಿಯೊಳಗೆ ನಕಾರಾತ್ಮಕ ಶಕ್ತಿಯನ್ನು ತರುತ್ತದೆ. ನೆರಳು ಕಂಡಾಗ ವ್ಯಕ್ತಿಯ ಮಾನಸಿಕ ಉದ್ವೇಗ ಹೆಚ್ಚುತ್ತದೆ ಎಂದು ಹೇಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್