AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಈ ವಿಷಯ ತಿಳಿದುಕೊಳ್ಳಿ

ವಾಸ್ತು ಶಾಸ್ತ್ರದ ಪ್ರಕಾರ, ನೀವು ಬೆಳಿಗ್ಗೆ ಎದ್ದಾಗ ಕನ್ನಡಿಯಲ್ಲಿ ನೋಡುವುದು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಈ ವಿಷಯ ತಿಳಿದುಕೊಳ್ಳಿ
Mirror Vastu Tips
ಅಕ್ಷತಾ ವರ್ಕಾಡಿ
|

Updated on: May 09, 2024 | 9:58 AM

Share

ಹೆಚ್ಚಿನವರಿಗೆ ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸವಿರುತ್ತದೆ. ಆದರೆ ಜ್ಯೋತಿಷ್ಯ ತಜ್ಞರ ಪ್ರಕಾರ ಇಂತಹ ಅಭ್ಯಾಸವನ್ನು ಅಶುಭ ಎಂದು ಪರಿಗಣಿಸಲಾಗಿದೆ. ವಾಸ್ತು ನಿಯಮಗಳ ಪ್ರಕಾರ ಬೆಳಗ್ಗೆ ಬೇಗ ಎದ್ದು ಕನ್ನಡಿಯಲ್ಲಿ ಮುಖ ನೋಡಬಾರದು. ಇದು ಜೀವನದಲ್ಲಿ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಈ ಕಾರಣಕ್ಕಾಗಿ ಮಲಗುವ ಕೋಣೆಯಲ್ಲಿ ಕನ್ನಡಿ ಇರಬಾರದು ಎಂಬ ನಿಯಮವಿದೆ. ಮುಂಜಾನೆ ಕನ್ನಡಿ ನೋಡುವುದು ವಾಸ್ತುದಲ್ಲಿ ನಿಷಿದ್ಧ. ನೀವು ಬೆಳಿಗ್ಗೆ ಎದ್ದಾಗ ಕನ್ನಡಿಯಲ್ಲಿ ನೋಡುವುದು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ರಾತ್ರಿ ಹೊತ್ತಿನಲ್ಲಿ ನಕಾರಾತ್ಮಕ ಶಕ್ತಿಯು ಕನ್ನಡಿಯನ್ನು ಸುತ್ತುವರಿಯುತ್ತದೆ ಎಂದು ನಂಬಲಾಗಿದೆ. ಆದ್ದರಿಂದ, ನೀವು ಬೆಳಿಗ್ಗೆ ಎದ್ದ ತಕ್ಷಣ ಮತ್ತು ಕನ್ನಡಿಯಲ್ಲಿ ನೋಡಿದ ತಕ್ಷಣ, ಈ ನಕಾರಾತ್ಮಕ ಶಕ್ತಿಯು ವ್ಯಕ್ತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಪರಿಣಾಮವಾಗಿ ವ್ಯಕ್ತಿಯು ಅನಗತ್ಯ ಆಯಾಸ ಮತ್ತು ಒತ್ತಡವನ್ನು ಅನುಭವಿಸಬೇಕಾಗುತ್ತದೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯಲ್ಲಿ ನೋಡಿಕೊಂಡರೆ ಮನಸ್ಸಿಗೆ ತೊಂದರೆಯಾಗುತ್ತದೆ ಎಂಬ ನಂಬಿಕೆ ಇದೆ. ಬೆಳಗ್ಗೆ ಎದ್ದು ಕನ್ನಡಿಯಲ್ಲಿ ನೋಡಿದಾಗ ಮುಖದ ಮೇಲೆ ಮೊಡವೆ, ಸುಕ್ಕು, ಬೂದು ಕೂದಲು, ಕಲೆಗಳು ಕಾಣಿಸುತ್ತವೆ. ಇದು ವ್ಯಕ್ತಿಯ ಆತ್ಮವಿಶ್ವಾಸದ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸುತ್ತಾರೆ ಜ್ಯೋತಿಷ್ಯ ಶಾಸ್ತ್ರಜ್ಞರು.

ಇದನ್ನೂ ಓದಿ: ಅಕ್ಷಯ ತೃತೀಯದಂದು ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

ವಾಸ್ತು ಶಾಸ್ತ್ರದ ಪ್ರಕಾರ, ಬೆಳಿಗ್ಗೆ ಕನ್ನಡಿಯಲ್ಲಿ ಮುಖವನ್ನು ನೋಡುವುದು ಮತ್ತು ಒಬ್ಬರ ನೆರಳನ್ನು ನೋಡುವುದು ಅಶುಭ. ಬೆಳಿಗ್ಗೆ ನೆರಳನ್ನು ನೋಡುವುದು ವ್ಯಕ್ತಿಯೊಳಗೆ ನಕಾರಾತ್ಮಕ ಶಕ್ತಿಯನ್ನು ತರುತ್ತದೆ. ನೆರಳು ಕಂಡಾಗ ವ್ಯಕ್ತಿಯ ಮಾನಸಿಕ ಉದ್ವೇಗ ಹೆಚ್ಚುತ್ತದೆ ಎಂದು ಹೇಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?