AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon: ಮಳೆಗಾಲದಲ್ಲಿ ಈ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿವೆಯೇ? ಇಲ್ಲಿದೆ ಪರಿಹಾರ

ಮಳೆಗಾಲದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ತುಂಬಾ ಒಳ್ಳೆಯದು. ವಿಶೇಷವಾಗಿ ಈ ದಿನಗಳಲ್ಲಿ, ನೀವು ಕೆಲವು ಆಹಾರಗಳನ್ನು ಸೇವಿಸಬೇಕು.

Monsoon: ಮಳೆಗಾಲದಲ್ಲಿ ಈ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿವೆಯೇ? ಇಲ್ಲಿದೆ ಪರಿಹಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 05, 2022 | 7:30 AM

Share

ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆಗಳು (Stomach Pain) ಸಾಮಾನ್ಯ. ಅದರಲ್ಲೂ ಆಹಾರದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ಹೊಟ್ಟೆಯಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮಳೆಗಾಲದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ತುಂಬಾ ಒಳ್ಳೆಯದು. ವಿಶೇಷವಾಗಿ ಈ ದಿನಗಳಲ್ಲಿ, ನೀವು ಕೆಲವು ಆಹಾರಗಳನ್ನು ಸೇವಿಸಬೇಕು. ಇದು ಜೀರ್ಣಕಾರಿ ಶಕ್ತಿಯನ್ನು ಬಲಪಡಿಸುತ್ತದೆ. ವಿಶೇಷವಾಗಿ ಈ ಋತುವಿನಲ್ಲಿ ಹೊಟ್ಟೆ ನೋವಿನ ಸಮಸ್ಯೆಗಳನ್ನು ಕಡಿಮೆ ಮಾಡಲು ನಿಮ್ಮ ಕೆಲವು ಆರೋಗ್ಯಕರ ಆಹಾರಗಳನ್ನು ಸೇವಿಸುವುದು ಒಳ್ಳೆದು.

ಇದನ್ನೂ ಓದಿ: Relationship: ಸಂಗಾತಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರಾ? ಕೋಪ ದೂರ ಮಾಡಿ ಸಂಬಂಧ ಉಳಿಸಿಕೊಳ್ಳುವುದು ಹೇಗೆ?

ಮೆಂತ್ಯ ಕಾಳು:

ಮಳೆಗಾಲದ ಸಮಯದಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮೆಂತ್ಯ ಕಾಳು ತೆಗೆದುಕೊಳ್ಳಿ. ಮೆಂತ್ಯವು ಫೈಬರ್​ನ್ನು ಹೊಂದಿರುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಮೂಲಂಗಿ:

ಜೀರ್ಣಕಾರಿ ಸಮಸ್ಯೆ ನಿವಾರಣೆಗೆ ಮೂಲಂಗಿ ತಿನ್ನಬಹುದು. ಮೂಲಂಗಿ ನಿಮ್ಮ ಜೀರ್ಣ ಶಕ್ತಿಯನ್ನು ಬಲಪಡಿಸುವುದರೊಂದಿಗೆ ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಇದನ್ನೂ ಓದಿ; Low Sugar Diet: ಲೋ ಶುಗರ್ ಡಯೆಟ್ ಎಂದರೇನು? ತೂಕ ಇಳಿಕೆಗೆ ನಿಜವಾಗಿಯೂ ಸಹಕಾರಿಯೇ?

ನಿಂಬೆ ನೀರು:

ಮಳೆಗಾಲದಲ್ಲಿ ನಿಂಬೆ ನೀರು ಆರೋಗ್ಯಕ್ಕೆ ಅತ್ಯಗತ್ಯ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಜೀರ್ಣಕ್ರಿಯೆಯನ್ನು ಬಲಪಡಿಸುತ್ತದೆ. ಇದು ಮಳೆಗಾಲದಲ್ಲಿ ಬರುವ ಅಜೀರ್ಣ, ಗ್ಯಾಸ್ ಮತ್ತು ಅಸಿಡಿಟಿಯಂತಹ ಸಮಸ್ಯೆಗಳನ್ನು ದೂರ ಮಾಡುತ್ತದೆ.

ಮೊಸರು, ಬಾಳೆಹಣ್ಣು:

ಮಳೆಗಾಲದಲ್ಲಿ ಜೀರ್ಣಶಕ್ತಿ ತುಂಬಾ ದುರ್ಬಲವಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮೊಸರು ಮತ್ತು ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ