AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon Foods: ಮಳೆಗಾಲದಲ್ಲಿ ನೀವು ತಿನ್ನುವ ಆಹಾರಗಳು ಹೇಗಿರಬೇಕು? ಇಲ್ಲಿವೆ ಸಲಹೆಗಳು

Monsoon Foods: ಬೇಸಿಗೆ ಕಳೆದು ಇನ್ನೇನು ಮುಂಗಾರು( Monsoon)ಶುರುವಾಗಲಿದೆ, ನೀವು ಸೇವಿಸುವ ಆಹಾರದ ಮೇಲೆ ನಿಮ್ಮ ಆರೋಗ್ಯ ನಿಂತಿದೆ. ಹೌದು ಹವಾಮಾನ ಬದಲಾಗುತ್ತಿದ್ದಂತೆ ಆಹಾರ ಪದ್ಧತಿಗಳನ್ನು ಬದಲಾಯಿಸಿಕೊಳ್ಳಬೇಕು.

Monsoon Foods: ಮಳೆಗಾಲದಲ್ಲಿ ನೀವು ತಿನ್ನುವ ಆಹಾರಗಳು ಹೇಗಿರಬೇಕು? ಇಲ್ಲಿವೆ ಸಲಹೆಗಳು
Monsoon Foods
TV9 Web
| Edited By: |

Updated on: Jun 11, 2022 | 9:54 AM

Share

ಬೇಸಿಗೆ ಕಳೆದು ಇನ್ನೇನು ಮುಂಗಾರು( Monsoon)ಶುರುವಾಗಲಿದೆ, ನೀವು ಸೇವಿಸುವ ಆಹಾರದ ಮೇಲೆ ನಿಮ್ಮ ಆರೋಗ್ಯ ನಿಂತಿದೆ. ಹೌದು ಹವಾಮಾನ ಬದಲಾಗುತ್ತಿದ್ದಂತೆ ಆಹಾರ ಪದ್ಧತಿಗಳನ್ನು ಬದಲಾಯಿಸಿಕೊಳ್ಳಬೇಕು. ಒಂದು ವೇಳೆ ಬೇಸಿಗೆಯಲ್ಲಿ ಸೇವಿಸಿದ ಆಹಾರವನ್ನೇ ಮಳೆಗಾಲದಲ್ಲಿ ಸೇವಿಸಿದರೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಹಾಗಾದರೆ ಮುಂಗಾರು ಅಥವಾ ಮಳೆಗಾಲದಲ್ಲಿ ನೀವು ಎಂತಹ ಆಹಾರ ಸೇವಿಸಬೇಕು ಎನ್ನುವುದರ ಕುರಿತು ಕೆಲವು ಸಲಹೆಗಳನ್ನು ಇಲ್ಲಿ ನೀಡಲಾಗಿದೆ.

ಮಳೆಗಾಲದಲ್ಲಿ ದೇಹದ ಉಷ್ಣಾಂಶವು ಕಡಿಮೆ ಇರಲಿದ್ದು, ದೇಹ ಬೆವರದ ಕಾರಣ ಆಹಾರಗಳು ಅಷ್ಟು ಸುಲಭವಾಗಿ ಜೀರ್ಣವಾಗುವುದಿಲ್ಲ, ಹಾಗಾಗಿ ಮಳೆಗಾಲದಲ್ಲಿ ಲಘುವಾದ ಆಹಾರವನ್ನೇ ಆದಷ್ಟು ಸೇವನೆ ಮಾಡಿದರೆ ಒಳಿತು.

ಸ್ಟ್ರೀಟ್​ಫುಡ್ ಅವಾಯ್ಡ್​ ಮಾಡಿ: ಮಳೆಗಾಲದ ಸಂದರ್ಭದಲ್ಲಿ ಸ್ಟ್ರೀಟ್​ ಫುಡ್, ಹೊರಗಡೆ ಜ್ಯೂಸ್​ ಕುಡಿಯುವುದರಿಂದ ಕಲುಷಿತ ನೀರಿನಿಂದಾಗಿ ಹೊಟ್ಟೆಯಲ್ಲಿ ಇನ್​ಫೆಕ್ಷನ್ ಉಂಟಾಗಲಿದ್ದು, ಹೊಟ್ಟೆನೋವು, ಡೀಸೆಂಟ್ರಿ, ವಾಂತಿ ಸೇರಿದಂತೆ ಅನೇಕ ರೀತಿಯ ಉದರ ಸಮಸ್ಯೆಗಳು ಉಂಟಾಗಬಹುದು.

ಮಜ್ಜಿಗೆ ಬಳಕೆ ಮಾಡಿ: ಯೋಗರ್ಟ್​, ಮಜ್ಜಿಗೆ, ಸೋಯಾಬೀನ್, ಬೆಣ್ಣೆ ಸೇರಿದಂತೆ ಪ್ರೊಬಯಾಟಿಕ್​ಗಳನ್ನು ಬಳಕೆ ಮಾಡಿ ಇವುಗಳು ನಿಮ್ಮ ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತವೆ.

ಹೆಚ್ಚು ನೀರು ಕುಡಿಯಿರಿ: ಮಳೆಗಾಲದಲ್ಲಿ ಬಾಯಾರಿಕೆ ಕಡಿಮೆ, ಹಾಗೆಂದ ಮಾತ್ರಕ್ಕೆ ನೀರು ಕುಡಿಯದೇ ಇರಬೇಡಿ, ದೇಹವನ್ನು ಹೈಡ್ರೇಟ್​ ಆಗಿರಿಸಿಕೊಳ್ಳುವುದು ಬಹುಮುಖ್ಯವಾದದ್ದು, ನೀರು ನಿಮ್ಮ ದೇಹದಲ್ಲಿರುವ ಬೇಡದ ಅಂಶವನ್ನು ಹೊರಹಾಕುತ್ತದೆ.

ಹಸಿ ತರಕಾರಿಗಳನ್ನು ತಿನ್ನಬೇಡಿ: ಮಳೆಗಾಲದಲ್ಲಿ ಹಸಿ ತರಕಾರಿಗಳನ್ನು ತಿನ್ನಬೇಡಿ ಅವುಗಳಲ್ಲಿ ಬ್ಯಾಕ್ಟೀರಿಯಾ, ವೈರಸ್​ಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಹೀಗಾಗಿ ತರಕಾರಿಗಳನ್ನು ಬೇಯಿಸಿಯೇ ತಿನ್ನಿ.

ಕುದಿಸಿದ ನೀರನ್ನು ಬಳಸಿ: ಒಂದೊಮ್ಮೆ ನೀವು ನಲ್ಲಿ ನೀರನ್ನು ಕುಡಿಯಲು ಬಳಸುತ್ತಿದ್ದರೆ ನೀವು ಕುದಿಸಿದ ನೀರನ್ನು ಬಳಸಿ, ಹಾಗೆಯೇ ಒಂದೊಮ್ಮೆ ನೀವು ಹೊರಗಡೆ ಹೋಗುವಂತಿದ್ದರೆ ಮನೆಯಿಂದಲೇ ನೀರಿನ ಬಾಟಲಿಗಳನ್ನು ತೆಗೆದುಕೊಂಡು ಹೋಗಿ.

ಸೀಫುಡ್​ಗಳಿಂದ ದೂರವಿರಿ: ನೀವು ಮಳೆಗಾಲದ ಸಂದರ್ಭದಲ್ಲಿ ಸೀಫುಡ್​ಗಳನ್ನು ತಿನ್ನುವಾಗ ಎಚ್ಚರದಿಂದಿರಿ, ಸಮುದ್ರದ ನೀರು ಕಲುಷಿತವಾಗಿದ್ದರೆ, ಅಲ್ಲಿಯ ಮೀನುಗಳನ್ನು ತಿಂದರೆ ಡೀಸೆಂಟ್ರಿ ರೀತಿಯ ಸಮಸ್ಯೆಗಳು ಕಾಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ