AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon Foods: ಮಳೆಗಾಲದಲ್ಲಿ ನೀವು ತಿನ್ನುವ ಆಹಾರಗಳು ಹೇಗಿರಬೇಕು? ಇಲ್ಲಿವೆ ಸಲಹೆಗಳು

Monsoon Foods: ಬೇಸಿಗೆ ಕಳೆದು ಇನ್ನೇನು ಮುಂಗಾರು( Monsoon)ಶುರುವಾಗಲಿದೆ, ನೀವು ಸೇವಿಸುವ ಆಹಾರದ ಮೇಲೆ ನಿಮ್ಮ ಆರೋಗ್ಯ ನಿಂತಿದೆ. ಹೌದು ಹವಾಮಾನ ಬದಲಾಗುತ್ತಿದ್ದಂತೆ ಆಹಾರ ಪದ್ಧತಿಗಳನ್ನು ಬದಲಾಯಿಸಿಕೊಳ್ಳಬೇಕು.

Monsoon Foods: ಮಳೆಗಾಲದಲ್ಲಿ ನೀವು ತಿನ್ನುವ ಆಹಾರಗಳು ಹೇಗಿರಬೇಕು? ಇಲ್ಲಿವೆ ಸಲಹೆಗಳು
Monsoon Foods
TV9 Web
| Edited By: |

Updated on: Jun 11, 2022 | 9:54 AM

Share

ಬೇಸಿಗೆ ಕಳೆದು ಇನ್ನೇನು ಮುಂಗಾರು( Monsoon)ಶುರುವಾಗಲಿದೆ, ನೀವು ಸೇವಿಸುವ ಆಹಾರದ ಮೇಲೆ ನಿಮ್ಮ ಆರೋಗ್ಯ ನಿಂತಿದೆ. ಹೌದು ಹವಾಮಾನ ಬದಲಾಗುತ್ತಿದ್ದಂತೆ ಆಹಾರ ಪದ್ಧತಿಗಳನ್ನು ಬದಲಾಯಿಸಿಕೊಳ್ಳಬೇಕು. ಒಂದು ವೇಳೆ ಬೇಸಿಗೆಯಲ್ಲಿ ಸೇವಿಸಿದ ಆಹಾರವನ್ನೇ ಮಳೆಗಾಲದಲ್ಲಿ ಸೇವಿಸಿದರೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಹಾಗಾದರೆ ಮುಂಗಾರು ಅಥವಾ ಮಳೆಗಾಲದಲ್ಲಿ ನೀವು ಎಂತಹ ಆಹಾರ ಸೇವಿಸಬೇಕು ಎನ್ನುವುದರ ಕುರಿತು ಕೆಲವು ಸಲಹೆಗಳನ್ನು ಇಲ್ಲಿ ನೀಡಲಾಗಿದೆ.

ಮಳೆಗಾಲದಲ್ಲಿ ದೇಹದ ಉಷ್ಣಾಂಶವು ಕಡಿಮೆ ಇರಲಿದ್ದು, ದೇಹ ಬೆವರದ ಕಾರಣ ಆಹಾರಗಳು ಅಷ್ಟು ಸುಲಭವಾಗಿ ಜೀರ್ಣವಾಗುವುದಿಲ್ಲ, ಹಾಗಾಗಿ ಮಳೆಗಾಲದಲ್ಲಿ ಲಘುವಾದ ಆಹಾರವನ್ನೇ ಆದಷ್ಟು ಸೇವನೆ ಮಾಡಿದರೆ ಒಳಿತು.

ಸ್ಟ್ರೀಟ್​ಫುಡ್ ಅವಾಯ್ಡ್​ ಮಾಡಿ: ಮಳೆಗಾಲದ ಸಂದರ್ಭದಲ್ಲಿ ಸ್ಟ್ರೀಟ್​ ಫುಡ್, ಹೊರಗಡೆ ಜ್ಯೂಸ್​ ಕುಡಿಯುವುದರಿಂದ ಕಲುಷಿತ ನೀರಿನಿಂದಾಗಿ ಹೊಟ್ಟೆಯಲ್ಲಿ ಇನ್​ಫೆಕ್ಷನ್ ಉಂಟಾಗಲಿದ್ದು, ಹೊಟ್ಟೆನೋವು, ಡೀಸೆಂಟ್ರಿ, ವಾಂತಿ ಸೇರಿದಂತೆ ಅನೇಕ ರೀತಿಯ ಉದರ ಸಮಸ್ಯೆಗಳು ಉಂಟಾಗಬಹುದು.

ಮಜ್ಜಿಗೆ ಬಳಕೆ ಮಾಡಿ: ಯೋಗರ್ಟ್​, ಮಜ್ಜಿಗೆ, ಸೋಯಾಬೀನ್, ಬೆಣ್ಣೆ ಸೇರಿದಂತೆ ಪ್ರೊಬಯಾಟಿಕ್​ಗಳನ್ನು ಬಳಕೆ ಮಾಡಿ ಇವುಗಳು ನಿಮ್ಮ ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತವೆ.

ಹೆಚ್ಚು ನೀರು ಕುಡಿಯಿರಿ: ಮಳೆಗಾಲದಲ್ಲಿ ಬಾಯಾರಿಕೆ ಕಡಿಮೆ, ಹಾಗೆಂದ ಮಾತ್ರಕ್ಕೆ ನೀರು ಕುಡಿಯದೇ ಇರಬೇಡಿ, ದೇಹವನ್ನು ಹೈಡ್ರೇಟ್​ ಆಗಿರಿಸಿಕೊಳ್ಳುವುದು ಬಹುಮುಖ್ಯವಾದದ್ದು, ನೀರು ನಿಮ್ಮ ದೇಹದಲ್ಲಿರುವ ಬೇಡದ ಅಂಶವನ್ನು ಹೊರಹಾಕುತ್ತದೆ.

ಹಸಿ ತರಕಾರಿಗಳನ್ನು ತಿನ್ನಬೇಡಿ: ಮಳೆಗಾಲದಲ್ಲಿ ಹಸಿ ತರಕಾರಿಗಳನ್ನು ತಿನ್ನಬೇಡಿ ಅವುಗಳಲ್ಲಿ ಬ್ಯಾಕ್ಟೀರಿಯಾ, ವೈರಸ್​ಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಹೀಗಾಗಿ ತರಕಾರಿಗಳನ್ನು ಬೇಯಿಸಿಯೇ ತಿನ್ನಿ.

ಕುದಿಸಿದ ನೀರನ್ನು ಬಳಸಿ: ಒಂದೊಮ್ಮೆ ನೀವು ನಲ್ಲಿ ನೀರನ್ನು ಕುಡಿಯಲು ಬಳಸುತ್ತಿದ್ದರೆ ನೀವು ಕುದಿಸಿದ ನೀರನ್ನು ಬಳಸಿ, ಹಾಗೆಯೇ ಒಂದೊಮ್ಮೆ ನೀವು ಹೊರಗಡೆ ಹೋಗುವಂತಿದ್ದರೆ ಮನೆಯಿಂದಲೇ ನೀರಿನ ಬಾಟಲಿಗಳನ್ನು ತೆಗೆದುಕೊಂಡು ಹೋಗಿ.

ಸೀಫುಡ್​ಗಳಿಂದ ದೂರವಿರಿ: ನೀವು ಮಳೆಗಾಲದ ಸಂದರ್ಭದಲ್ಲಿ ಸೀಫುಡ್​ಗಳನ್ನು ತಿನ್ನುವಾಗ ಎಚ್ಚರದಿಂದಿರಿ, ಸಮುದ್ರದ ನೀರು ಕಲುಷಿತವಾಗಿದ್ದರೆ, ಅಲ್ಲಿಯ ಮೀನುಗಳನ್ನು ತಿಂದರೆ ಡೀಸೆಂಟ್ರಿ ರೀತಿಯ ಸಮಸ್ಯೆಗಳು ಕಾಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!