AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon Foods: ಮಳೆಗಾಲದಲ್ಲಿ ನೀವು ತಿನ್ನುವ ಆಹಾರಗಳು ಹೇಗಿರಬೇಕು? ಇಲ್ಲಿವೆ ಸಲಹೆಗಳು

Monsoon Foods: ಬೇಸಿಗೆ ಕಳೆದು ಇನ್ನೇನು ಮುಂಗಾರು( Monsoon)ಶುರುವಾಗಲಿದೆ, ನೀವು ಸೇವಿಸುವ ಆಹಾರದ ಮೇಲೆ ನಿಮ್ಮ ಆರೋಗ್ಯ ನಿಂತಿದೆ. ಹೌದು ಹವಾಮಾನ ಬದಲಾಗುತ್ತಿದ್ದಂತೆ ಆಹಾರ ಪದ್ಧತಿಗಳನ್ನು ಬದಲಾಯಿಸಿಕೊಳ್ಳಬೇಕು.

Monsoon Foods: ಮಳೆಗಾಲದಲ್ಲಿ ನೀವು ತಿನ್ನುವ ಆಹಾರಗಳು ಹೇಗಿರಬೇಕು? ಇಲ್ಲಿವೆ ಸಲಹೆಗಳು
Monsoon Foods
TV9 Web
| Edited By: |

Updated on: Jun 11, 2022 | 9:54 AM

Share

ಬೇಸಿಗೆ ಕಳೆದು ಇನ್ನೇನು ಮುಂಗಾರು( Monsoon)ಶುರುವಾಗಲಿದೆ, ನೀವು ಸೇವಿಸುವ ಆಹಾರದ ಮೇಲೆ ನಿಮ್ಮ ಆರೋಗ್ಯ ನಿಂತಿದೆ. ಹೌದು ಹವಾಮಾನ ಬದಲಾಗುತ್ತಿದ್ದಂತೆ ಆಹಾರ ಪದ್ಧತಿಗಳನ್ನು ಬದಲಾಯಿಸಿಕೊಳ್ಳಬೇಕು. ಒಂದು ವೇಳೆ ಬೇಸಿಗೆಯಲ್ಲಿ ಸೇವಿಸಿದ ಆಹಾರವನ್ನೇ ಮಳೆಗಾಲದಲ್ಲಿ ಸೇವಿಸಿದರೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಹಾಗಾದರೆ ಮುಂಗಾರು ಅಥವಾ ಮಳೆಗಾಲದಲ್ಲಿ ನೀವು ಎಂತಹ ಆಹಾರ ಸೇವಿಸಬೇಕು ಎನ್ನುವುದರ ಕುರಿತು ಕೆಲವು ಸಲಹೆಗಳನ್ನು ಇಲ್ಲಿ ನೀಡಲಾಗಿದೆ.

ಮಳೆಗಾಲದಲ್ಲಿ ದೇಹದ ಉಷ್ಣಾಂಶವು ಕಡಿಮೆ ಇರಲಿದ್ದು, ದೇಹ ಬೆವರದ ಕಾರಣ ಆಹಾರಗಳು ಅಷ್ಟು ಸುಲಭವಾಗಿ ಜೀರ್ಣವಾಗುವುದಿಲ್ಲ, ಹಾಗಾಗಿ ಮಳೆಗಾಲದಲ್ಲಿ ಲಘುವಾದ ಆಹಾರವನ್ನೇ ಆದಷ್ಟು ಸೇವನೆ ಮಾಡಿದರೆ ಒಳಿತು.

ಸ್ಟ್ರೀಟ್​ಫುಡ್ ಅವಾಯ್ಡ್​ ಮಾಡಿ: ಮಳೆಗಾಲದ ಸಂದರ್ಭದಲ್ಲಿ ಸ್ಟ್ರೀಟ್​ ಫುಡ್, ಹೊರಗಡೆ ಜ್ಯೂಸ್​ ಕುಡಿಯುವುದರಿಂದ ಕಲುಷಿತ ನೀರಿನಿಂದಾಗಿ ಹೊಟ್ಟೆಯಲ್ಲಿ ಇನ್​ಫೆಕ್ಷನ್ ಉಂಟಾಗಲಿದ್ದು, ಹೊಟ್ಟೆನೋವು, ಡೀಸೆಂಟ್ರಿ, ವಾಂತಿ ಸೇರಿದಂತೆ ಅನೇಕ ರೀತಿಯ ಉದರ ಸಮಸ್ಯೆಗಳು ಉಂಟಾಗಬಹುದು.

ಮಜ್ಜಿಗೆ ಬಳಕೆ ಮಾಡಿ: ಯೋಗರ್ಟ್​, ಮಜ್ಜಿಗೆ, ಸೋಯಾಬೀನ್, ಬೆಣ್ಣೆ ಸೇರಿದಂತೆ ಪ್ರೊಬಯಾಟಿಕ್​ಗಳನ್ನು ಬಳಕೆ ಮಾಡಿ ಇವುಗಳು ನಿಮ್ಮ ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತವೆ.

ಹೆಚ್ಚು ನೀರು ಕುಡಿಯಿರಿ: ಮಳೆಗಾಲದಲ್ಲಿ ಬಾಯಾರಿಕೆ ಕಡಿಮೆ, ಹಾಗೆಂದ ಮಾತ್ರಕ್ಕೆ ನೀರು ಕುಡಿಯದೇ ಇರಬೇಡಿ, ದೇಹವನ್ನು ಹೈಡ್ರೇಟ್​ ಆಗಿರಿಸಿಕೊಳ್ಳುವುದು ಬಹುಮುಖ್ಯವಾದದ್ದು, ನೀರು ನಿಮ್ಮ ದೇಹದಲ್ಲಿರುವ ಬೇಡದ ಅಂಶವನ್ನು ಹೊರಹಾಕುತ್ತದೆ.

ಹಸಿ ತರಕಾರಿಗಳನ್ನು ತಿನ್ನಬೇಡಿ: ಮಳೆಗಾಲದಲ್ಲಿ ಹಸಿ ತರಕಾರಿಗಳನ್ನು ತಿನ್ನಬೇಡಿ ಅವುಗಳಲ್ಲಿ ಬ್ಯಾಕ್ಟೀರಿಯಾ, ವೈರಸ್​ಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಹೀಗಾಗಿ ತರಕಾರಿಗಳನ್ನು ಬೇಯಿಸಿಯೇ ತಿನ್ನಿ.

ಕುದಿಸಿದ ನೀರನ್ನು ಬಳಸಿ: ಒಂದೊಮ್ಮೆ ನೀವು ನಲ್ಲಿ ನೀರನ್ನು ಕುಡಿಯಲು ಬಳಸುತ್ತಿದ್ದರೆ ನೀವು ಕುದಿಸಿದ ನೀರನ್ನು ಬಳಸಿ, ಹಾಗೆಯೇ ಒಂದೊಮ್ಮೆ ನೀವು ಹೊರಗಡೆ ಹೋಗುವಂತಿದ್ದರೆ ಮನೆಯಿಂದಲೇ ನೀರಿನ ಬಾಟಲಿಗಳನ್ನು ತೆಗೆದುಕೊಂಡು ಹೋಗಿ.

ಸೀಫುಡ್​ಗಳಿಂದ ದೂರವಿರಿ: ನೀವು ಮಳೆಗಾಲದ ಸಂದರ್ಭದಲ್ಲಿ ಸೀಫುಡ್​ಗಳನ್ನು ತಿನ್ನುವಾಗ ಎಚ್ಚರದಿಂದಿರಿ, ಸಮುದ್ರದ ನೀರು ಕಲುಷಿತವಾಗಿದ್ದರೆ, ಅಲ್ಲಿಯ ಮೀನುಗಳನ್ನು ತಿಂದರೆ ಡೀಸೆಂಟ್ರಿ ರೀತಿಯ ಸಮಸ್ಯೆಗಳು ಕಾಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್