AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moon Moving : ಭೂಮಿಯಿಂದ ದೂರಾಗುತ್ತಿರುವ ಚಂದ್ರ, ಇನ್ನು ಮುಂದೆ ದಿನಕ್ಕೆ 24 ಗಂಟೆ ಅಲ್ಲ, 25 ಗಂಟೆ

ಪ್ರಕೃತಿಯಲ್ಲಿಯು ವಿಸ್ಮಯಕಾರಿ ಘಟನೆಗಳು ನಡೆಯುತ್ತದೆ. ಅದರಂತೆಯೇ ಈ ಸೌರಮಂಡಲದಲ್ಲಿನ ಒಂದಲ್ಲ ಒಂದು ಬದಲಾವಣೆಗಳನ್ನು ಊಹೆ ಮಾಡುವುದು ಕಷ್ಟವೇ. ವರ್ಷಗಳು ಉರುಳಿದಂತೆ ಸೌರಮಂಡಲದಲ್ಲಿ ಬದಲಾವಣೆಗಳಾಗುತ್ತದೆ. ಇದೀಗ ಭವಿಷ್ಯದಲ್ಲಿ ದಿನಕ್ಕೆ 24 ಗಂಟೆಯ ಬದಲಾಗಿ 25 ಗಂಟೆಗಳಾಗಬಹುದು ಎಂದು ಅಘಾತಕಾರಿ ವಿಚಾರವನ್ನು ವಿಜ್ಞಾನಿಗಳು ಬಹಿರಂಗ ಪಡಿಸಿದ್ದಾರೆ.

Moon Moving : ಭೂಮಿಯಿಂದ ದೂರಾಗುತ್ತಿರುವ ಚಂದ್ರ, ಇನ್ನು ಮುಂದೆ ದಿನಕ್ಕೆ 24 ಗಂಟೆ ಅಲ್ಲ, 25 ಗಂಟೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Aug 07, 2024 | 12:26 PM

Share

ಚಂದ್ರನು ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹವಾಗಿದ್ದು, ಭೂಮಿಗೂ ಹಾಗೂ ಚಂದ್ರನಿಗೆ ಅದೇನೋ ನಂಟಿದೆ. ಆದರೆ ಇದೀಗ ಗುರುತ್ವಾಕರ್ಷಣೆಯ ಬಲದಿಂದ ಚಂದ್ರನು ಭೂಮಿಯಿಂದ ನಿರಂತರ ದೂರದಲ್ಲಿ ಹೋಗುತ್ತಿದ್ದಾನೆ. ಚಂದ್ರ ಮತ್ತು ಭೂಮಿಯ ನಡುವಿನ ಅಂತರವು ವರ್ಷಗಳು ಕಳೆದಂತೆ ಹೆಚ್ಚುತ್ತಿದೆ. ಇದರ ಪರಿಣಾಮ ದಿನಗಳ ಗಂಟೆಯಲ್ಲಿ ಬದಲಾವಣೆಯಾಗಲಿದೆ. ಎಂದು ವಿಜ್ಞಾನಿಗಳು ತಮ್ಮ ಸಂಶೋಧನೆಯಲ್ಲಿ ತಿಳಿಸಿದ್ದಾರೆ.

ವಿಸ್ಕಾನ್ಸಿನ್-ಮ್ಯಾಡಿಸನ್ ವಿಶ್ವವಿದ್ಯಾನಿಲಯದ ತಂಡವು 90 ಮಿಲಿಯನ್ ವರ್ಷಗಳಷ್ಟು ಹಳೆಯದಾದ ಬಂಡೆಯ ಮೇಲೆ ಅಧ್ಯಯನವನ್ನು ನಡೆಸಿದ್ದಾರೆ. ಈ ಅಧ್ಯಯನದಲ್ಲಿ ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ವಿಶ್ಲೇಷಣೆ ಮಾಡಿದ್ದಾರೆ. ಭವಿಷ್ಯದ ದಿನಗಳಲ್ಲಿ ಭೂಮಿಯಿಂದ ಚಂದ್ರ ದೂರಕ್ಕೆ ಹೋಗುವ ಅಪಾಯವಿದೆ ಎನ್ನುವ ವಿಚಾರವನ್ನು ಸಂಶೋಧಕರು ಬಹಿರಂಗ ಪಡಿಸಿದ್ದಾರೆ.

ಚಂದ್ರನು ಭೂಮಿಯಿಂದ ವರ್ಷಕ್ಕೆ ಸರಿಸುಮಾರು 3.8 ಸೆಂ.ಮೀಟರ್‌ಗಳಷ್ಟು ದರದಲ್ಲಿ ದೂರ ಸಾಗುತ್ತಿದ್ದಾನೆ. ಇದರ ಪರಿಣಾಮವು ಭೂಮಿಯಲ್ಲಿರುವ ಒಂದು ದಿನದ ಸಮಯದಲ್ಲಿ ಬದಲಾವಣೆಯಾಗುತ್ತದೆ. ವರ್ಷದಿಂದ ವರ್ಷಕ್ಕೆ ಭೂಮಿಯಲ್ಲಿ ಒಂದು ದಿನದ ಅವಧಿ ವಿಸ್ತರಣೆ ಆಗುತ್ತಲೇ ಇದೆ. ಅಂತಿಮವಾಗಿ 200 ದಶಲಕ್ಷ ವರ್ಷಗಳ ಬಳಿಕ ಭೂಮಿಯ ಒಂದು ದಿನದ ಅವಧಿ 24 ಗಂಟೆಗಳ ಬದಲಾಗಿ 25 ಗಂಟೆ ಆಗುತ್ತದೆ ಎಂದಿದ್ದಾರೆ ವಿಜ್ಞಾನಿಗಳು

ಇದನ್ನೂ ಓದಿ: ಅತಿ ವೇಗವಾಗಿ ಭೂಮಿಯತ್ತ ಬರುತ್ತಿದೆ ಕ್ಷುದ್ರಗ್ರಹ, ಜಗತ್ತಿನ ನಾಶಕ್ಕೆ ಇದು ಮುನ್ನುಡಿ ಎಂದ ವಿಜ್ಞಾನಿಗಳು

ಸರಿಸುಮಾರು 1.4 ಶತಕೋಟಿ ವರ್ಷಗಳ ಹಿಂದೆ ಭೂಮಿಯ ಮೇಲೆ ಒಂದು ದಿನ ಕೇವಲ 18 ಗಂಟೆಗಳ ಕಾಲ ಇತ್ತು. ಆದರೆ ಕಾಲ ಕಳೆಯುತ್ತಾ ಹೋದಂತೆ ಈ ಸಮಯವು ಹೆಚ್ಚಾಗುತ್ತಲೇ ಹೋಗಿ ಇದೀಗ 24 ಗಂಟೆಗೆ ಬಂದು ನಿಂತಿದೆ. ಹೀಗೆ ಚಂದ್ರನು ದೂರ ಸರಿಯುತ್ತಿದ್ದಂತೆ, ಭೂಮಿಯು ತಿರುಗುವ ಫಿಗರ್ ಸ್ಕೇಟರ್‌ನಂತಿದೆ, ತಮ್ಮ ತೋಳುಗಳನ್ನು ಚಾಚಿದಂತೆ ನಿಧಾನಗೊಳಿಸುತ್ತದೆ. ಹೀಗಾಗಿ ಭೂಮಿಯ ಮೇಲಿನ ಒಂದು ದಿನದ ಅವಧಿಯು ವಿಸ್ತರಣೆಯಾಗುತ್ತದೆ ಎಂದು ಹೇಳಿದ್ದಾರೆ.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?