AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips in Kannada : ಮಳೆಗಾಲದಲ್ಲಿ ಕಾಲಿನ ಬೆರಳುಗಳ ಸಂದಿಯಲ್ಲಿ ಬರುವ ಹುಳಗಳ ಬಗ್ಗೆ ಎಚ್ಚರವಿರಲಿ

ಸುರಿಯುವ ಮಳೆಯ ನಡುವೆ ಹಚ್ಚ ಹಸಿರಿನ ತುಂಬಿದ ಪರಿಸರವನ್ನು ನೋಡುವುದೇ ಕಣ್ಣಿಗೆ ಹಬ್ಬ. ಆದರೆ ಈ ಋತುವೆಂದರೆ ಕೆಲವರಿಗೆ ಅಲರ್ಜಿ. ಹೊರಗಡೆ ಹೋಗುವುದಕ್ಕೂ ಹಿಂದೇಟು ಹಾಕುತ್ತಾರೆ. ನೀರಿನಲ್ಲಿ ಅಡ್ಡಾಡಿದರೆ ಸಾಕು ಕಾಲುಗಳ ನಡುವೆ ತುರಿಕೆ ಕಾಣಿಸಿಕೊಳ್ಳುತ್ತವೆ. ಹೆಚ್ಚಿನವರಿಗೆ ಕಾಲಿನ ಬೆರಳುಗಳ ನಡುವೆ ಫಂಗಲ್ ಇನ್ಫೆಕ್ಷನ್ ನಿಂದಾಗಿ ನಡೆಯಲು ಕಷ್ಟವಾಗುತ್ತದೆ. ಈ ವೇಳೆಯಲ್ಲಿ ಕಾಲಿನ ಕಾಳಜಿಯ ಜೊತೆಗೆ ಮನೆ ಮದ್ದಿನ ಮೂಲಕ ಈ ಸಮಸ್ಯೆಯನ್ನು ಹೋಗಲಾಡಿಸಬಹುದು.

Health Tips in Kannada : ಮಳೆಗಾಲದಲ್ಲಿ ಕಾಲಿನ ಬೆರಳುಗಳ ಸಂದಿಯಲ್ಲಿ ಬರುವ ಹುಳಗಳ ಬಗ್ಗೆ ಎಚ್ಚರವಿರಲಿ
ಸಾಯಿನಂದಾ
| Edited By: |

Updated on: May 29, 2024 | 2:20 PM

Share

ಮಳೆಗಾಲ ಎಷ್ಟು ಹಿತಕರವೋ ಅಷ್ಟೇ ಕಷ್ಟಕರ. ಈ ಮಳೆಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಕೆಮ್ಮು , ಶೀತ, ಸೊಳ್ಳೆಗಳಿಂದ ಹರಡುವ ಕಾಯಿಲೆಯು ಒಂದೆಡೆಯಾದರೆ ಚರ್ಮದ ಸಮಸ್ಯೆಯು ಇನ್ನೊಂದೆಡೆ. ಅದರಲ್ಲಿಯು ಕಾಲಿನ ಬೆರಳುಗಳ ನಡುವೆ ಕಾಣಿಸಿಕೊಳ್ಳುವ ತುರಿಕೆಯಂತಹ ಸಮಸ್ಯೆಯು ಜೀವ ಹಿಂಡುತ್ತವೆ. ಹೀಗಾದಾಗ ಮನೆ ಮದ್ದಿನ ಮೂಲಕ ಪಾದಗಳ ನಡುವಿನ ತುರಿಕೆಯಂತಹ ಸಮಸ್ಯೆಗಳನ್ನು ದೂರವಾಗಿಸಬಹುದು.

* ಅರಶಿನದಲ್ಲಿ ಆಂಟಿ ಬ್ಯಾಕ್ಟಿರಿಯಾ ಗುಣ ಇರುವುದರಿಂದ ಅರಿಶಿನಕ್ಕೆ ತೆಂಗಿನೆಣ್ಣೆ ಬೆರೆಸಿ ತಯಾರಿಸಿದ ಪೇಸ್ಟ್ ಅನ್ನು ಹಿಮ್ಮಡಿಗೆ ಮತ್ತು ಬೆರಳುಗಳ ಮಧ್ಯಕ್ಕೆ ಹಚ್ಚುತ್ತಿದ್ದರೆ ಕಾಲಿನ ನಂಜು ಕಡಿಮೆಯಾಗುತ್ತದೆ.

* ಮೆಹಂದಿ ಗಿಡದ ಎಲೆಗಳನ್ನು ಚೆನ್ನಾಗಿ ತೊಳೆದು ರುಬ್ಬಿ ಪೇಸ್ಟ್ ಮಾಡಿ ಕಾಲು ಬೆರಳುಗಳ ಮಧ್ಯೆ ಮತ್ತು ಪಾದದ ಸುತ್ತ ಹಚ್ಚಿಕೊಳ್ಳಿ. ಒಣಗಿದ ಬಳಿಕ ತಣ್ಣೀರಿನಿಂದ ತೊಳೆಯುತ್ತ ಬಂದರೆ ಗುಣಮುಖ ಕಾಣುತ್ತದೆ.

* ಕಾಲಿನ ನಂಜಿನ ಸಮಸ್ಯೆಗೆ ನಿಂಬೆರಸ, ಈರುಳ್ಳಿ ರಸ, ಬೆಣ್ಣೆಯೂ ಉತ್ತಮ ಔಷಧಿಯಾಗಿದೆ. ಇದರಲ್ಲಿ ಯಾವುದದನ್ನಾದರೂ ರಾತ್ರಿ ಹಚ್ಚಿ ಬೆಳಗ್ಗೆ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದರೆ ತುರಿಕೆಯು ಕಡಿಮೆಯಾಗುತ್ತದೆ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಕಿವಿ ನೋವು ಕಾಣಿಸಿಕೊಂಡರೆ ಗಾಬರಿಯಾಗಬೇಡಿ, ಈ ಮನೆಮದ್ದು ಟ್ರೈ ಮಾಡಿ

* ಅಡುಗೆ ಮನೆಯಲ್ಲಿರುವ ವಿನೆಗರ್ ಬಳಸುವುದರಿಂದ ಚರ್ಮದ ಬಹುತೇಕ ಕಾಯಿಲೆಗಳು ಗುಣಮುಖವಾಗುತ್ತವೆ. ಅದರಲ್ಲೂ ಕಾಲಿನಲ್ಲಾದ ಫಂಗಲ್ ಇನ್ಫೆಕ್ಷನ್ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ಬೆಚ್ಚಗಿನ ನೀರಿನಲ್ಲಿ ವಿನೆಗರ್ ಮಿಶ್ರಣ ಮಾಡಿ ಕಾಲನ್ನು ನೆನೆಸಿಡುವುದರಿಂದ ಈ ಸಮಸ್ಯೆಯು ದೂರವಾಗುತ್ತದೆ.

* ಒಂದು ಚಮಚದಷ್ಟು ಆಲಿವ್ ಎಣ್ಣೆಯನ್ನು ಹತ್ತಿಯುಂಡೆಯ ಸಹಾಯದಿಂದ ಸೋಂಕಿಗೆ ಕಾಲಿನ ಬೆರಳಿನ ಸಂದಿಗಳಿಗೆ ಹಚ್ಚುತ್ತ ಬಂದರೆ ಸೋಂಕು ನಿಧಾನವಾಗಿ ದೂರವಾಗುತ್ತದೆ.

ಈ ಮನೆಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆಗಳನ್ನು ಪಡೆದುಕೊಳ್ಳುವುದು ಉತ್ತಮ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ