AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips in Kannada : ಮಳೆಗಾಲದಲ್ಲಿ ಕಾಲಿನ ಬೆರಳುಗಳ ಸಂದಿಯಲ್ಲಿ ಬರುವ ಹುಳಗಳ ಬಗ್ಗೆ ಎಚ್ಚರವಿರಲಿ

ಸುರಿಯುವ ಮಳೆಯ ನಡುವೆ ಹಚ್ಚ ಹಸಿರಿನ ತುಂಬಿದ ಪರಿಸರವನ್ನು ನೋಡುವುದೇ ಕಣ್ಣಿಗೆ ಹಬ್ಬ. ಆದರೆ ಈ ಋತುವೆಂದರೆ ಕೆಲವರಿಗೆ ಅಲರ್ಜಿ. ಹೊರಗಡೆ ಹೋಗುವುದಕ್ಕೂ ಹಿಂದೇಟು ಹಾಕುತ್ತಾರೆ. ನೀರಿನಲ್ಲಿ ಅಡ್ಡಾಡಿದರೆ ಸಾಕು ಕಾಲುಗಳ ನಡುವೆ ತುರಿಕೆ ಕಾಣಿಸಿಕೊಳ್ಳುತ್ತವೆ. ಹೆಚ್ಚಿನವರಿಗೆ ಕಾಲಿನ ಬೆರಳುಗಳ ನಡುವೆ ಫಂಗಲ್ ಇನ್ಫೆಕ್ಷನ್ ನಿಂದಾಗಿ ನಡೆಯಲು ಕಷ್ಟವಾಗುತ್ತದೆ. ಈ ವೇಳೆಯಲ್ಲಿ ಕಾಲಿನ ಕಾಳಜಿಯ ಜೊತೆಗೆ ಮನೆ ಮದ್ದಿನ ಮೂಲಕ ಈ ಸಮಸ್ಯೆಯನ್ನು ಹೋಗಲಾಡಿಸಬಹುದು.

Health Tips in Kannada : ಮಳೆಗಾಲದಲ್ಲಿ ಕಾಲಿನ ಬೆರಳುಗಳ ಸಂದಿಯಲ್ಲಿ ಬರುವ ಹುಳಗಳ ಬಗ್ಗೆ ಎಚ್ಚರವಿರಲಿ
ಸಾಯಿನಂದಾ
| Edited By: |

Updated on: May 29, 2024 | 2:20 PM

Share

ಮಳೆಗಾಲ ಎಷ್ಟು ಹಿತಕರವೋ ಅಷ್ಟೇ ಕಷ್ಟಕರ. ಈ ಮಳೆಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಕೆಮ್ಮು , ಶೀತ, ಸೊಳ್ಳೆಗಳಿಂದ ಹರಡುವ ಕಾಯಿಲೆಯು ಒಂದೆಡೆಯಾದರೆ ಚರ್ಮದ ಸಮಸ್ಯೆಯು ಇನ್ನೊಂದೆಡೆ. ಅದರಲ್ಲಿಯು ಕಾಲಿನ ಬೆರಳುಗಳ ನಡುವೆ ಕಾಣಿಸಿಕೊಳ್ಳುವ ತುರಿಕೆಯಂತಹ ಸಮಸ್ಯೆಯು ಜೀವ ಹಿಂಡುತ್ತವೆ. ಹೀಗಾದಾಗ ಮನೆ ಮದ್ದಿನ ಮೂಲಕ ಪಾದಗಳ ನಡುವಿನ ತುರಿಕೆಯಂತಹ ಸಮಸ್ಯೆಗಳನ್ನು ದೂರವಾಗಿಸಬಹುದು.

* ಅರಶಿನದಲ್ಲಿ ಆಂಟಿ ಬ್ಯಾಕ್ಟಿರಿಯಾ ಗುಣ ಇರುವುದರಿಂದ ಅರಿಶಿನಕ್ಕೆ ತೆಂಗಿನೆಣ್ಣೆ ಬೆರೆಸಿ ತಯಾರಿಸಿದ ಪೇಸ್ಟ್ ಅನ್ನು ಹಿಮ್ಮಡಿಗೆ ಮತ್ತು ಬೆರಳುಗಳ ಮಧ್ಯಕ್ಕೆ ಹಚ್ಚುತ್ತಿದ್ದರೆ ಕಾಲಿನ ನಂಜು ಕಡಿಮೆಯಾಗುತ್ತದೆ.

* ಮೆಹಂದಿ ಗಿಡದ ಎಲೆಗಳನ್ನು ಚೆನ್ನಾಗಿ ತೊಳೆದು ರುಬ್ಬಿ ಪೇಸ್ಟ್ ಮಾಡಿ ಕಾಲು ಬೆರಳುಗಳ ಮಧ್ಯೆ ಮತ್ತು ಪಾದದ ಸುತ್ತ ಹಚ್ಚಿಕೊಳ್ಳಿ. ಒಣಗಿದ ಬಳಿಕ ತಣ್ಣೀರಿನಿಂದ ತೊಳೆಯುತ್ತ ಬಂದರೆ ಗುಣಮುಖ ಕಾಣುತ್ತದೆ.

* ಕಾಲಿನ ನಂಜಿನ ಸಮಸ್ಯೆಗೆ ನಿಂಬೆರಸ, ಈರುಳ್ಳಿ ರಸ, ಬೆಣ್ಣೆಯೂ ಉತ್ತಮ ಔಷಧಿಯಾಗಿದೆ. ಇದರಲ್ಲಿ ಯಾವುದದನ್ನಾದರೂ ರಾತ್ರಿ ಹಚ್ಚಿ ಬೆಳಗ್ಗೆ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದರೆ ತುರಿಕೆಯು ಕಡಿಮೆಯಾಗುತ್ತದೆ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಕಿವಿ ನೋವು ಕಾಣಿಸಿಕೊಂಡರೆ ಗಾಬರಿಯಾಗಬೇಡಿ, ಈ ಮನೆಮದ್ದು ಟ್ರೈ ಮಾಡಿ

* ಅಡುಗೆ ಮನೆಯಲ್ಲಿರುವ ವಿನೆಗರ್ ಬಳಸುವುದರಿಂದ ಚರ್ಮದ ಬಹುತೇಕ ಕಾಯಿಲೆಗಳು ಗುಣಮುಖವಾಗುತ್ತವೆ. ಅದರಲ್ಲೂ ಕಾಲಿನಲ್ಲಾದ ಫಂಗಲ್ ಇನ್ಫೆಕ್ಷನ್ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ಬೆಚ್ಚಗಿನ ನೀರಿನಲ್ಲಿ ವಿನೆಗರ್ ಮಿಶ್ರಣ ಮಾಡಿ ಕಾಲನ್ನು ನೆನೆಸಿಡುವುದರಿಂದ ಈ ಸಮಸ್ಯೆಯು ದೂರವಾಗುತ್ತದೆ.

* ಒಂದು ಚಮಚದಷ್ಟು ಆಲಿವ್ ಎಣ್ಣೆಯನ್ನು ಹತ್ತಿಯುಂಡೆಯ ಸಹಾಯದಿಂದ ಸೋಂಕಿಗೆ ಕಾಲಿನ ಬೆರಳಿನ ಸಂದಿಗಳಿಗೆ ಹಚ್ಚುತ್ತ ಬಂದರೆ ಸೋಂಕು ನಿಧಾನವಾಗಿ ದೂರವಾಗುತ್ತದೆ.

ಈ ಮನೆಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆಗಳನ್ನು ಪಡೆದುಕೊಳ್ಳುವುದು ಉತ್ತಮ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು