AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಹಿಗುಣವಿರುವ ನುಗ್ಗೆ ಸೊಪ್ಪು ಹಲವು ಆರೋಗ್ಯ ಸಮಸ್ಯೆಗಳಿಗೆ ಔಷಧಿ, ಇಲ್ಲಿದೆ ಸರಳ ಮನೆ ಮದ್ದು

Moringa Leaves Benefits: ದಿನನಿತ್ಯ ಆಹಾರ ಪದಾರ್ಥಗಳಲ್ಲಿ ವಿವಿಧ ರೀತಿಯ ಸೊಪ್ಪು ತರಕಾರಿಗಳನ್ನು ಬಳಕೆ ಮಾಡುತ್ತೇವೆ. ಆದರೆ ನುಗ್ಗೆ ಸೊಪ್ಪನ್ನು ಸೇವಿಸುವುದು ಸ್ವಲ್ಪ ಕಡಿಮೆ. ಕಹಿ ಗುಣವಿರುವ ಕಾರಣ ಈ ಸೊಪ್ಪನ್ನು ಇಷ್ಟ ಪಡುವುದು ಕಡಿಮೆಯೇ. ಡ್ರಮ್ ಸ್ಟಿಕ್ ಎಲೆಗಳು ಎಂಬ ಹೆಸರಿನಿಂದಲೂ ಕರೆಯುವ ಈ ನುಗ್ಗೆ ಸೊಪ್ಪು ಆರೋಗ್ಯದ ವಿಚಾರದಲ್ಲಿ ಸಂಜೀವಿನಿಯಾಗಿದೆ.

ಕಹಿಗುಣವಿರುವ ನುಗ್ಗೆ ಸೊಪ್ಪು ಹಲವು ಆರೋಗ್ಯ ಸಮಸ್ಯೆಗಳಿಗೆ ಔಷಧಿ, ಇಲ್ಲಿದೆ ಸರಳ ಮನೆ ಮದ್ದು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Feb 02, 2024 | 10:33 AM

Share

ನುಗ್ಗೆ ಮರದ ಪ್ರತಿಯೊಂದು ಭಾಗವು ಔಷಧೀಯ ಗುಣವನ್ನು ಹೊಂದಿದೆ. ಹೀಗಾಗಿ ಆಯುರ್ವೇದದಲ್ಲಿ ಔಷಧಿಗಳ ತಯಾರಿಕೆಯಲ್ಲಿ ನುಗ್ಗೆ ಮರದ ಪ್ರತಿಯೊಂದು ಭಾಗವನ್ನು ಬಳಸಲಾಗುತ್ತದೆ. ಅದರಲ್ಲಿಯೂ ಈ ನುಗ್ಗೆ ಸೊಪ್ಪಿನಲ್ಲಿ ವಿಟಮಿನ್ ಸಿ, ಎ, ಬಿ-ಕಾಂಪ್ಲೆಕ್ಸ್, ಪೊಟ್ಯಾಶಿಯಂ, ಕ್ಯಾಲ್ಸಿಯಂ, ಪ್ರೊಟೀನ್, ಕಾರ್ಬೋಹೈಡ್ರೇಟ್, ಕಬ್ಬಿಣ, ಮೆಗ್ನೀಷಿಯಂ, ಸೋಡಿಯಂ ಹೇರಳವಾಗಿದ್ದು, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುತ್ತವೆ. ಮನೆಯ ಸುತ್ತ ಮುತ್ತ ನುಗ್ಗೆಯ ಮರವಿದ್ದರೆ ನುಗ್ಗೆ ಸೊಪ್ಪಿನಿಂದ ಮನೆ ಮದ್ದನ್ನು ತಯಾರಿಸಿ ಆರೋಗ್ಯ ಸಮಸ್ಯೆಯನ್ನು ದೂರವಾಗಿಸಿಕೊಳ್ಳಬಹುದು.

ಆರೋಗ್ಯ ಸಮಸ್ಯೆಗಳಿಗೆ ನುಗ್ಗೆ ಸೊಪ್ಪಿನ ಮನೆ ಮದ್ದುಗಳು ಇಲ್ಲಿದೆ

* ನುಗ್ಗೆ ಸೊಪ್ಪಿನಿಂದ ಸಾರು ತಯಾರಿಸಿ, ಅದಕ್ಕೆ ಬೆಳ್ಳುಳ್ಳಿ ರಸ ಬೆರೆಸಿ ಕುಡಿದರೆ ಜ್ವರ ಕಡಿಮೆಯಾಗುತ್ತದೆ.

* ನುಗ್ಗೆ ಸೊಪ್ಪಿನ ರಸವನ್ನು ಕುದಿಸಿ ಕುಡಿಯುತ್ತಿದ್ದರೆ ಮಲಬದ್ಧತೆ ಸಮಸ್ಯೆ ಯೂ ದೂರವಾಗುತ್ತದೆ.

* ನುಗ್ಗೆಸೊಪ್ಪು, ಹೆಚ್ಚಿದ ಶುಂಠಿ, ಹರಳು ಗಿಡದ ಎಲೆ, ತುಳಸಿ ಎಲೆಗಳನ್ನು ಎಳ್ಳೆಣ್ಣೆಯಲ್ಲಿ ಹುರಿದು ಬಟ್ಟೆಯಲ್ಲಿ ಕಟ್ಟಿ ಬೆನ್ನುನೋವು ಇರುವ ಜಾಗಕ್ಕೆ ಬಿಸಿ ಶಾಖವಿಟ್ಟರೆ ಬೆನ್ನುನೋವು ಕಡಿಮೆಯಾಗುತ್ತದೆ.

* ನುಗ್ಗೆಸೊಪ್ಪು, ತುಳಸಿ ಎಲೆಗಳನ್ನು ಹುರಿದು ಕೀಲುನೋವಿರುವ ಜಾಗಕ್ಕೆ ಶಾಖವನ್ನು ಕೊಟ್ಟರೆ ನೋವು ನಿವಾರಣೆಯಾಗುತ್ತದೆ.

* ತಲೆ ನೋವಿನಿಂದ ಬಳಲುತ್ತಿರುವವರು ನುಗ್ಗೆ ಸೊಪ್ಪಿನ ಒಂದು ತೊಟ್ಟು ರಸವನ್ನು ಕಿವಿಗೆ ಹಾಕುತ್ತಿದ್ದರೆ ತಲೆನೋವು ಕಡಿಮೆಯಾಗುತ್ತದೆ.

* ನುಗ್ಗೆ ಸೊಪ್ಪನ್ನು ನೀರಿನಲ್ಲಿ ಬೇಯಿಸಿ ರಸ ತೆಗೆದು ಅದಕ್ಕೆ ಅಡಿಗೆ ಉಪ್ಪು ನಿಂಬೆರಸ, ಕಾಳು ಮೆಣಸಿನ ಪುಡಿಯನ್ನು ಬೆರೆಸಿ ಪ್ರತಿದಿನ ಬೆಳಗ್ಗೆ ಸೇವಿಸಿದರೆ ಸಂಭೋಗದ ಶಕ್ತಿಯು ವೃದ್ಧಿಯಾಗುತ್ತದೆ.

ಇದನ್ನೂ ಓದಿ: ಒಡೆದ ಹಿಮ್ಮಡಿಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ, ಇಲ್ಲಿದೆ ಮನೆ ಮದ್ದು

* ನುಗ್ಗೆ ಸೊಪ್ಪನ್ನು ನುಣ್ಣಗೆ ರುಬ್ಬಿ ಮೂಲವ್ಯಾಧಿ ಮೊಳಕೆಗಳಿಗೆ ಹಚ್ಚುವುದರಿಂದ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

* ಬೇಯಿಸಿ ತೆಗೆದ ನುಗ್ಗೆ ಸೊಪ್ಪಿನ ರಸಕ್ಕೆ ಹಾಲು ಸಕ್ಕರೆ ಬೆರೆಸಿ ಮಕ್ಕಳಿಗೆ ಕುಡಿಸುವುದರಿಂದ ರಕ್ತವು ಶುದ್ಧಿಯಾಗುತ್ತದೆ.

* ನುಗ್ಗೆ ಸೊಪ್ಪನ್ನು ಬೇಯಿಸಿ ರಸ ತೆಗೆದು ಅದಕ್ಕೆ ನಿಂಬೆರಸ ಹಿಂಡಿ ಒಂದು ವಾರಗಳ ಕಾಲ ಸೇವಿಸಿದರೆ ತಲೆಸುತ್ತುವ ಸಮಸ್ಯೆಯೂ ದೂರವಾಗುತ್ತದೆ.

* ಎಳೆಯ ನುಗ್ಗೆಸೊಪ್ಪು ಹಾಗೂ ನುಗ್ಗೆಯ ಹೂವಿನಿಂದ ತಯಾರಿಸಿದ ಸೂಪನ್ನು ಕುಡಿಯುತ್ತಿದ್ದರೆ ರಕ್ತಹೀನತೆ ಸಮಸ್ಯೆಯೂ ನಿವಾರಣೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:07 am, Fri, 2 February 24

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ