AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ, ರಾತ್ರಿ; ಸ್ನಾನ ಮಾಡಲು ಸೂಕ್ತ ಸಮಯ ಯಾವುದು ಗೊತ್ತಾ?

ಸ್ನಾನವು ನಮ್ಮ ದೇಹವನ್ನು ಶುದ್ಧೀಕರಿಸಲು ಮಾತ್ರವಲ್ಲದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೂ ಅತ್ಯಂತ ಪ್ರಯೋಜನಕಾರಿಯಾಗಿದೆ. ಹಾಗಾಗಿ ಪ್ರತಿಯೊಬ್ನರೂ ಪ್ರತಿನಿತ್ಯ ಸ್ನಾನ ಮಾಡ್ತಾರೆ. ಕೆಲವು ಬೆಳಗ್ಗೆ ಸ್ನಾನ ಮಾಡಿದ್ರೆ, ಇನ್ನೂ ಕೆಲವರು ಸಂಜೆ ಅಥವಾ ರಾತ್ರಿ ಸ್ನಾನ ಮಾಡ್ತಾರೆ. ಆದ್ರೆ ಸ್ನಾನ ಮಾಡಲು ಸರಿಯಾದ ಸಮಯ ಯಾವುದೆಂದು ನಿಮ್ಗೆ ಗೊತ್ತಾ? ಈ ಕುರಿತ ಇಂಟರೆಸ್ಟಿಂಗ್‌ ಮಾಹಿತಿ ಇಲ್ಲಿದೆ ನೋಡಿ.

ಬೆಳಗ್ಗೆ, ರಾತ್ರಿ; ಸ್ನಾನ ಮಾಡಲು ಸೂಕ್ತ ಸಮಯ ಯಾವುದು ಗೊತ್ತಾ?
ಸಾಂದರ್ಭಿಕ ಚಿತ್ರ Image Credit source: vecteezy
ಮಾಲಾಶ್ರೀ ಅಂಚನ್​
|

Updated on: Dec 18, 2025 | 5:36 PM

Share

ದಿನನಿತ್ಯ ಸ್ನಾನ (bath) ಮಾಡುವುದು ತುಂಬಾನೇ ಮುಖ್ಯವಾಗಿದೆ.  ಏಕೆಂದರೆ ಸ್ನಾನವು ದೇಹವನ್ನು ಹೊರಗಿನಿಂದ ಶುದ್ಧೀಕರಿಸುವುದಷ್ಟೇ ಅಲ್ಲ, ಮನಸ್ಸಿಗೆ ಶಾಂತಿ ನೀಡುತ್ತದೆ ಮತ್ತು ಆರೋಗ್ಯವನ್ನೂ ಕಾಪಾಡುತ್ತದೆ. ಹಾಗಾಗಿ ಬಹುತೇಕ ಹೆಚ್ಚಿನವರು ಪ್ರತಿನಿತ್ಯ ತಪ್ಪದೆ ಸ್ನಾನ ಮಾಡ್ತಾರೆ. ಕೆಲವರು ಬೆಳಗ್ಗೆ ಸ್ನಾನ ಮಾಡಿದ್ರೆ, ಇನ್ನೂ ಒಂದಷ್ಟು ಜನರಿಗೆ ಸಂಜೆ, ರಾತ್ರಿ ಸ್ನಾನ ಮಾಡುವ ಅಭ್ಯಾಸ ಇರುತ್ತದೆ. ರಾತ್ರಿ ಅಥವಾ ಬೆಳಗ್ಗೆ ಇವೆರಡರಲ್ಲಿ ಸ್ನಾನಕ್ಕೆ ಯಾವ ಟೈಮ್‌ ಬೆಸ್ಟ್‌? ಯಾವ ಸಮಯದಲ್ಲಿ ಸ್ನಾನ ಮಾಡಿದರೆ ಪ್ರಯೋಜಗಳು ಹೆಚ್ಚು ಎಂಬ ಇಂಟರೆಸ್ಟಿಂಗ್‌ ಸಂಗತಿಯನ್ನು ತಿಳಿಯಿರಿ.

ಸ್ನಾನ ಮಾಡಲು ಯಾವ ಸಮಯ ಉತ್ತಮ?

ಸ್ನಾನ ಮಾಡಲು ಸರಿಯಾದ ಸಮಯವು ನಿಮ್ಮ ವೈಯಕ್ತಿಕ ದಿನಚರಿ, ಕೆಲಸದ ದಿನಚರಿ ಮತ್ತು ಜೀವನಶೈಲಿಯನ್ನು ಅವಲಂಬಿಸಿರುತ್ತದೆ. ನಿಮ್ಮ ದಿನವನ್ನು ಶಕ್ತಿಯಿಂದ ಪ್ರಾರಂಭಿಸಲು ಬಯಸಿದರೆ, ಬೆಳಿಗ್ಗೆ ಸ್ನಾನ ಮಾಡುವುದು ಸೂಕ್ತ.ನೀವು  ಆಯಾಸವನ್ನು ತೊಡೆದುಹಾಕಲು ಒತ್ತಡ ನಿವಾರಿಸಲು ಮತ್ತು ಉತ್ತಮ ನಿದ್ರೆ ಪಡೆಯಲು ಬಯಸಿದರೆ, ರಾತ್ರಿಯ ಸಮಯವು ಸ್ನಾನ ಮಾಡಲು ಉತ್ತಮವಾಗಿದೆ. ಕೆಲವೊಮ್ಮೆ ಎರಡೂ ಸಮಯಗಳಲ್ಲಿ ಸ್ನಾನ ಮಾಡುವುದರಿಂದ ದೇಹ ಮತ್ತು ಮನಸ್ಸು ಸಮತೋಲನದಲ್ಲಿರುತ್ತವೆ.

ಬೆಳಿಗ್ಗೆ ಸ್ನಾನ ಮಾಡುವುದರಿಂದಾಗುವ ಪ್ರಯೋಜನಗಳೇನು?

ತಾಜಾತನ ಮತ್ತು ಚೈತನ್ಯ :ಬೆಳಿಗ್ಗೆ ಸ್ನಾನ ಮಾಡುವುದರಿಂದ ದೇಹ ಮತ್ತು ಮನಸ್ಸು ಎರಡೂ ಉಲ್ಲಾಸಗೊಳ್ಳುತ್ತವೆ. ಇದು ದಿನವನ್ನು ಪ್ರಾರಂಭಿಸಲು ನಿಮಗೆ ಶಕ್ತಿಯನ್ನು ನೀಡುತ್ತದೆ ಮತ್ತು ಸೋಮಾರಿತನವನ್ನು ದೂರ ಮಾಡುತ್ತದೆ. ತಣ್ಣೀರಿನ ಸ್ನಾನವು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ,  ದೇಹವನ್ನು ಹೆಚ್ಚು ಕ್ರಿಯಾಶೀಲವಾಗಿಸುತ್ತದೆ.

ಮನಸ್ಸನ್ನು ಶಾಂತಗೊಳಿಸುತ್ತದೆ: ಬೆಳಿಗ್ಗೆ ಸ್ನಾನ ಮಾಡುವುದರಿಂದ ಮೆದುಳು ಸಕ್ರಿಯಗೊಳ್ಳುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಮನಸ್ಸನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ.

ಚರ್ಮಕ್ಕೆ ಪ್ರಯೋಜನಕಾರಿ:   ಚರ್ಮವನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿಡುತ್ತವೆ. ಇದು ಚರ್ಮದಲ್ಲಿ ಸಂಗ್ರಹವಾದ ಕೊಳಕು ಮತ್ತು ಎಣ್ಣೆಯನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಪ್ರತಿನಿತ್ಯ ಪುಸ್ತಕ ಓದುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಸಂಜೆ ಸ್ನಾನ ಮಾಡುವುದರಿಂದಾಗುವ ಪ್ರಯೋಜನಗಳೇನು?

ಒತ್ತಡವನ್ನು ನಿವಾರಣೆ: ಸಂಜೆ ಸ್ನಾನ ಮಾಡುವುದರಿಂದ ದಿನದ ಆಯಾಸ ಮತ್ತು ಒತ್ತಡ ನಿವಾರಣೆಯಾಗುತ್ತದೆ. ಬೆಚ್ಚಗಿನ ಸ್ನಾನವು ಸ್ನಾಯುಗಳ ನೋವನ್ನು ಶಮನಗೊಳಿಸುತ್ತದೆ ಮತ್ತು ದೇಹಕ್ಕೆ ವಿಶ್ರಾಂತಿ ನೀಡುತ್ತದೆ.

ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ: ಸಂಜೆ ಸ್ನಾನ ಮಾಡುವುದರಿಂದ ನಿದ್ರೆಯ ಗುಣಮಟ್ಟವನ್ನು ಸುಧಾರಿಸಬಹುದು. ಬೆಚ್ಚಗಿನ ಸ್ನಾನದ ನಂತರ, ನಿಮ್ಮ ದೇಹದ ಉಷ್ಣತೆಯು ಕ್ರಮೇಣ ಕಡಿಮೆಯಾಗುತ್ತದೆ, ಇದು ನಿದ್ರಿಸಲು ನಿಮಗೆ ಸಹಾಯ ಮಾಡುತ್ತದೆ.

ದೇಹ ಶುದ್ಧೀಕರಣ: ದೇಹದಲ್ಲಿ ಅಂಟಿಕೊಂಡ ಧೂಳು, ಬೆವರು ಮತ್ತು ಇತರ ಕಲ್ಮಶಗಳನ್ನು ಪರಿಣಾಮಕಾರಿಯಾಗಿ ತೆಹೆದು ಹಾಕಲು ಸಂಜೆ ಸ್ನಾನ ಮಾಡುವುದು ಉತ್ತಮ.

ಚರ್ಮಕ್ಕೆ ಪ್ರಯೋಜನಕಾರಿ:  ಸಂಜೆ ಸ್ನಾನ ಮಾಡುವುದರಿಂದ ಚರ್ಮದ ಮೇಲೆ ಸಂಗ್ರಹವಾಗಿರುವ ಮೇಕಪ್, ಧೂಳು ಮತ್ತು ಮಾಲಿನ್ಯದ ಕಣಗಳು ನಿವಾರಣೆಯಾಗುತ್ತವೆ, ಇದು ಚರ್ಮವನ್ನು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ