AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi 2023: ಹೋಳಿ ಹಬ್ಬ ಸಮೀಪಿಸುತ್ತಿದೆ, ಬಣ್ಣಗಳನ್ನು ಎರಚಿ ಆಡುವ ಮೊದಲು, ನಿಮ್ಮ ಆರೋಗ್ಯದ ಬಗ್ಗೆ ಎಚ್ಚರವಹಿಸಿ

ಚರ್ಮಶಾಸ್ತ್ರಜ್ಞರಾದ ಅನಿತಾ ಸಿಂಗ್ ಮನೆಯಲಿಯೇ ಬಣ್ಣಗಳನ್ನು ತಯಾರಿಸಿ ಆರೋಗ್ಯಕರವಾಗಿ ಸಂಭ್ರಮಿಸಿ ಎಂದು ಹೇಳುತ್ತಾರೆ. ಹಳದಿ ಬಣ್ಣವನ್ನು ಪಡೆಯಲು ಅರಿಶಿನ ಪುಡಿಯನ್ನು ಹಿಟ್ಟಿನೊಂದಿಗೆ ಬೆರೆಸಿ ಬಣ್ಣಗಳನ್ನು ತಯಾರಿಸಬಹುದು ಎಂದು ಹೇಳುತ್ತಾರೆ.

Holi 2023: ಹೋಳಿ ಹಬ್ಬ ಸಮೀಪಿಸುತ್ತಿದೆ, ಬಣ್ಣಗಳನ್ನು ಎರಚಿ ಆಡುವ ಮೊದಲು, ನಿಮ್ಮ ಆರೋಗ್ಯದ ಬಗ್ಗೆ ಎಚ್ಚರವಹಿಸಿ
ಹೋಳಿ ಬಣ್ಣಗಳುImage Credit source: Free Walking Tours
ಅಕ್ಷತಾ ವರ್ಕಾಡಿ
|

Updated on:Feb 28, 2023 | 10:39 AM

Share

ಇನ್ನೇನು ಹೋಳಿ ಹಬ್ಬ(Holi Festival) ಸಮೀಪಿಸುತ್ತಿದೆ. ನೀವು ನಿಮ್ಮ ಕುಟುಂಬ, ಸ್ನೇಹಿತರೊಂದಿಗೆ ಬಣ್ಣಗಳನ್ನು ಎರಚಿ ಆಡುವ ಮೊದಲು, ನಿಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ. ಹೌದು ಹೋಳಿ ಹಬ್ಬದ ಸಮಯದಲ್ಲಿ ಬಳಸಲಾಗುವ ಕೆಮಿಕಲ್​​ಯುಕ್ತ ಬಣ್ಣಗಳು ನಿಮ್ಮ ಚರ್ಮದ ಆರೋಗ್ಯವನ್ನು ಕೆಡಿಸುವುದು ಮಾತ್ರವಲ್ಲದೇ, ಚರ್ಮದ ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳಿಗೆ ಕಾರಣವಾಗುವ ಸಾಧ್ಯತೆ ಹೆಚ್ಚಿದೆ ಚರ್ಮಶಾಸ್ತ್ರಜ್ಞರು ಎಚ್ಚರಿಕೆ ನೀಡುತ್ತಾರೆ.

ಚರ್ಮಶಾಸ್ತ್ರಜ್ಞರಾದ ಡಾ ಮಮತಾ ಭುರಾ ಅವರ ಪ್ರಕಾರ, ಮಾರುಕಟ್ಟೆಯಲ್ಲಿ ಲಭ್ಯವಿರುವ ಪ್ಯಾಕ್ ಮಾಡದ ಬಣ್ಣಗಳು ಹೆಚ್ಚಿನ ಕ್ರೋಮಿಯಂ, ಸಿಲಿಕಾ ಮತ್ತು ಸೀಸ ಒಳಗೊಂಡಿರುತ್ತವೆ. ಗಾಢವಾದ ಮತ್ತು ದೀರ್ಘಾವಧಿಯ ಬಣ್ಣಗಳಿಗಾಗಿ ರಾಸಾಯನಿಕಗಳು ಮತ್ತು ಲೋಹದ ಆಕ್ಸೈಡ್ಗಳನ್ನು ಮಿಶ್ರಣ ಮಾಡಲಾಗುತ್ತದೆ. ಇವುಗಳು ಆರೋಗ್ಯದ ಮೇಲೆ ಅಪಾಯವನ್ನುಂಟುಮಾಡುತ್ತದೆ ಎಂದು ಎಚ್ಚರಿಸುತ್ತಾರೆ. ಕೆಂಪು ಬಣ್ಣವನ್ನು ಪಡೆಯಲು ಪಾದರಸ ಆಕ್ಸೈಡ್, ಗುಲಾಬಿಗೆ ರೋಡಮೈನ್ ಬಿ, ಕಿತ್ತಳೆಗೆ ಕ್ರೋಮಿಯಂ ಅಯೋಡೈಡ್, ಹಳದಿಗೆ ಔರಮೈನ್, ಹಸಿರು ಮತ್ತು ಕಪ್ಪು ಬಣ್ಣಕ್ಕೆ ತಾಮ್ರದ ಸಲ್ಫೇಟ್ ಮುಂತಾದ ಸಂಶ್ಲೇಷಿತ ಬಣ್ಣಗಳಲ್ಲಿ ಬಳಸುವ ಕೆಲವು ವಿಷಕಾರಿ ರಾಸಾಯನಿಕಗಳನ್ನು ತಜ್ಞರು ಪಟ್ಟಿ ಮಾಡಿದ್ದಾರೆ. ಈ ವಿಷಕಾರಿ ರಾಸಾಯನಿಕಗಳು ಚರ್ಮದ ಕಾಯಿಲೆಗಳು, ಕಣ್ಣಿನ ಸೋಂಕು, ತಾತ್ಕಾಲಿಕ ಕುರುಡುತನ, ಮೂತ್ರಪಿಂಡ ವೈಫಲ್ಯ, ಅಸ್ತಮಾ ಮತ್ತು ಚರ್ಮದ ಕ್ಯಾನ್ಸರ್​​​ಗೆ ಕಾರಣವಾಗುತ್ತವೆ. ಇದು 24-ಗಂಟೆಗಳ ತುರಿಕೆ ಮತ್ತು ನಂತರದ ಊತಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೋಳಿ ಹಬ್ಬದ ಸಮಯದಲ್ಲಿ ಭಾರತದ ಈ ಸ್ಥಳಗಳಿಗೆ ಒಮ್ಮೆಯಾದರೂ ಭೇಟಿ ನೀಡಲೇಬೇಕು

ಚರ್ಮಶಾಸ್ತ್ರಜ್ಞರಾದ ಅನಿತಾ ಸಿಂಗ್ ಮನೆಯಲಿಯೇ ಬಣ್ಣಗಳನ್ನು ತಯಾರಿಸಿ ಆರೋಗ್ಯಕರವಾಗಿ ಸಂಭ್ರಮಿಸಿ ಎಂದು ಹೇಳುತ್ತಾರೆ. ಹಳದಿ ಬಣ್ಣವನ್ನು ಪಡೆಯಲು ಅರಿಶಿನ ಪುಡಿಯನ್ನು ಹಿಟ್ಟಿನೊಂದಿಗೆ ಬೆರೆಸಿ ಬಣ್ಣಗಳನ್ನು ತಯಾರಿಸಬಹುದು ಎಂದು ಹೇಳುತ್ತಾರೆ. ಆದ್ದರಿಂದ ಈ ವರ್ಷದ ಹೋಳಿ ಇನ್ನೇನು ಸಮೀಪಿಸುತ್ತಿದೆ. ಬಣ್ಣಗಳನ್ನು ಮಾರುಕಟ್ಟೆಗಳಿಂದ ಖರೀದಿಸುವ ಮುನ್ನ ಎಚ್ಚರ ವಹಿಸುವುದು ಅಗತ್ಯವಾಗಿದೆ. ಇಲ್ಲದಿದ್ದರೆ ನಿಮ್ಮ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರಿ ಮಾರಣಾಂತಿಕ ರೋಗಕ್ಕೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ.

ಜೀವನಶೈಲಿಗೆ ಸಂಬಂಧಪಟ್ಟ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:39 am, Tue, 28 February 23

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ