AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವಾನಗಳಿಗೆ ಆಧಾರ್ ಕಾರ್ಡ್; ಕ್ಯೂಆರ್ ಕೋಡ್ ಕಾಲರ್ ರಚಿಸಿದ ಮುಂಬೈ ಮೂಲದ ಇಂಜಿನಿಯರ್

24 ವರ್ಷ ವಯಸ್ಸಿನ ಇಂಜಿನಿಯರ್ ತನ್ನ ಪ್ರೀತಿಯ ಶ್ವಾನ ಕಳೆದುಕೊಂಡ ನಂತರ, ಈ ಸಮಸ್ಯೆಗೆ ಕ್ಯೂಆರ್ ಕೋಡ್ ಕಾಲರ್ ಕಂಡುಹಿಡಿದಿದ್ದಾರೆ.

ಶ್ವಾನಗಳಿಗೆ ಆಧಾರ್ ಕಾರ್ಡ್; ಕ್ಯೂಆರ್ ಕೋಡ್ ಕಾಲರ್ ರಚಿಸಿದ ಮುಂಬೈ ಮೂಲದ ಇಂಜಿನಿಯರ್
QR code for the dogsImage Credit source: Twitter
ಅಕ್ಷತಾ ವರ್ಕಾಡಿ
|

Updated on:Jul 08, 2023 | 11:27 AM

Share

ಅತ್ಯಂತ ಪ್ರೀತಿ, ನಂಬಿಕೆಯುಳ್ಳ ಸಾಕು ಪ್ರಾಣಿಯೆಂದರೆ ಅದು ಶ್ವಾನ. ಅಂತಹ ಮುಗ್ಧ ಮನಸ್ಸುಗಳ ಸುರಕ್ಷತೆಗಾಗಿ ಮುಂಬೈ ಮೂಲದ ಅಕ್ಷಯ್​​​ ರಿಡ್ಲಾನ್(24) ಇಂಜಿನಿಯರ್ ಒಬ್ಬರು ಕ್ಯೂಆರ್ ಕೋಡ್ ಕಾಲರ್ ತಯಾರಿಸಿದ್ದಾರೆ. ಇದು ಶ್ವಾನಗಳಿಗೆ ಆಧಾರ್ ಕಾರ್ಡ್​ನಂತಿದ್ದು, ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ ತಕ್ಷಣ ಶ್ವಾನದ ಕುರಿತಾ ಎಲ್ಲಾ ಮಾಹಿತಿಗಳು ದೊರೆಯುತ್ತವೆ. ಇದರ ಬೆಲೆ ಕೇವಲ 100 ರೂ. ಶ್ವಾನಗಳಿಗೆ ಕ್ಯೂಆರ್ ಕೋಡ್ ಮಾಡಿಸುವ ಉಪಾಯ ಹೊಳೆಯಲು ಕಾರಣವೇನು ಎಂಬುದಕ್ಕೆ ಅಕ್ಷಯ್​​​ ರಿಡ್ಲಾನ್ ತಮ್ಮ ಅನುಭವನ್ನು ಹಂಚಿಕೊಂಡಿದ್ದು, ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೆಲವು ತಿಂಗಳ ಹಿಂದೆ ಕಾಣೆಯಾಗಿದ್ದ ನನ್ನ ಪ್ರೀತಿಯ ಕಾಳು ಎಂಬ ಹೆಸರಿನ ಶ್ವಾನ ಇದಕ್ಕೆ ಮೂಲ ಸ್ಪೂರ್ತಿ ಎಂದು ಹೇಳಿದ್ದಾರೆ. ಹೌದು ಮನೆಯ ಮದುವೆ ಸಮಾರಂಭದ ಸಮಯದಲ್ಲಿ ಪಟಾಕಿಯ ಸದ್ದಿಗೆ ಓಡಿ ಹೋಗಿದ್ದ ಕಾಳು ಮತ್ತೆ ಸಿಗಲೇ ಇಲ್ಲ. ನಾನು ಅವನನ್ನು ಹುಡುಕಲು ಪ್ರಯತ್ನಿಸಿದೆ ಮತ್ತು ಸಾಮಾಜಿಕ ಮಾಧ್ಯಮದ ಮೂಲಕ ಸಮುದಾಯಗಳನ್ನು ತಲುಪಿದೆ ಆದರೆ ಎಲ್ಲವೂ ವ್ಯರ್ಥವಾಯಿತು. ಕಾಳು ಮತ್ತೆ ಸಿಗಲಿಲ್ಲ ಎಂದು ಶ್ವಾನ ಪ್ರೇಮಿ ಹೇಳಿದ್ದಾರೆ.

ಇದನ್ನೂ ಓದಿ: ಕ್ಯಾನ್ಸರ್​​ ಗೆದ್ದು ಬಂದ ಪೊಲೀಸ್​​​ ಇಲಾಖೆಯ ಶ್ವಾನ ಸಿಮ್ಮಿ

ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಲು ನಾಯಿಗಳಿಗೆ ಆಧಾರ್ ಕಾರ್ಡ್ ರಚಿಸುವ ಪ್ರಯತ್ನ ಇದಾಗಿದ್ದು, ಈ QR ಕೋಡ್ ಶ್ವಾನದ ಹೆಸರು, ವೈದ್ಯಕೀಯ ದಾಖಲೆ ಮತ್ತು ಇತಿಹಾಸ ಸೇರಿದಂತೆ ಮಾಹಿತಿಯನ್ನು ಒಳಗೊಂಡಿರುತ್ತದೆ ಮತ್ತು ಪ್ರಾಣಿಗಳ ಪಾಲಕರ ಸಂಪರ್ಕ ವಿವರಗಳನ್ನು ಸಹ ಒದಗಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:23 am, Sat, 8 July 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!