Nail Care: ನಿಮಗೆ ಉಗುರು ಕಚ್ಚುವ ಅಭ್ಯಾಸವಿದ್ದರೆ ಹೀಗೆ ಮಾಡಿ

ಉಗುರು ಕಚ್ಚುವಿಕೆಯು ಸಾಮಾನ್ಯವಾಗಿ ಬಾಲ್ಯದಲ್ಲಿ ಪ್ರಾರಂಭವಾಗುತ್ತದೆ. ಇದು ಕೆಲವರಲ್ಲಿ ಪ್ರೌಢಾವಸ್ಥೆಯಲ್ಲಿ ಮುಂದುವರಿಯುತ್ತದೆ. ಇದರಿಂದ ಅಡ್ಡಪರಿಣಾಮಗಳು ಕೂಡ ಉಂಟಾಗುತ್ತದೆ. ಆರೋಗ್ಯಕ್ಕೂ ಈ ಉಗುರು ಕಚ್ಚುವಿಕೆ ಒಳ್ಳೆಯದಲ್ಲ. ನಿಮಗೂ ಈ ರೀತಿ ಉಗುರು ಕಚ್ಚುವ ಅಭ್ಯಾಸವಿದ್ದರೆ ಅದನ್ನು ಅವಾಯ್ಡ್ ಮಾಡಲು ಕೆಲವು ಸಲಹೆಗಳು ಇಲ್ಲಿವೆ.

Nail Care: ನಿಮಗೆ ಉಗುರು ಕಚ್ಚುವ ಅಭ್ಯಾಸವಿದ್ದರೆ ಹೀಗೆ ಮಾಡಿ
ಉಗುರು ಕಚ್ಚುವ ಅಭ್ಯಾಸ Image Credit source: iStock
Follow us
|

Updated on: Feb 02, 2024 | 7:04 PM

ಉಗುರು ಕಚ್ಚುವಿಕೆಯು ನಿಮ್ಮ ಉಗುರುಗಳ ಸುತ್ತಲಿನ ಚರ್ಮವನ್ನು ನೋಯುವಂತೆ ಮಾಡುತ್ತದೆ. ಇದು ಉಗುರುಗಳನ್ನು ಬೆಳೆಯುವಂತೆ ಮಾಡುವ ಅಂಗಾಂಶವನ್ನು ಹಾನಿಗೊಳಿಸುತ್ತದೆ. ಇದರಿಂದ ಉಗುರುಗಳು ಅಸಹಜವಾಗಿ ಕಾಣುತ್ತದೆ. ದೀರ್ಘಕಾಲದ ಉಗುರು ಕಚ್ಚುವಿಕೆಯು ನಿಮ್ಮ ಬಾಯಿಯಿಂದ ನಿಮ್ಮ ಬೆರಳುಗಳಿಗೆ ಮತ್ತು ನಿಮ್ಮ ಉಗುರುಗಳಿಂದ ನಿಮ್ಮ ಮುಖ ಮತ್ತು ಬಾಯಿಗೆ ಹಾನಿಕಾರಕ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳನ್ನು ರವಾನಿಸುವುದರಿಂದ ನೀವು ಸೋಂಕಿಗೆ ಗುರಿಯಾಗಬಹುದು.

ಉಗುರು ಕಚ್ಚುವಿಕೆಯನ್ನು ನಿಲ್ಲಿಸಲು ಪರಿಣಾಮಕಾರಿ ಮಾರ್ಗಗಳು ಇಲ್ಲಿವೆ…

– ನಿಮ್ಮ ಉಗುರುಗಳನ್ನು ಚಿಕ್ಕದಾಗಿ ಟ್ರಿಮ್ ಮಾಡಿ. ಇದು ಉಗುರುಗಳನ್ನು ಕಚ್ಚುವ ಪ್ರಲೋಭನೆಯನ್ನು ಕಡಿಮೆ ಮಾಡಿ, ಆರೋಗ್ಯಕರ ಉಗುರು ಬೆಳವಣಿಗೆಯನ್ನು ಉತ್ತೇಜಿಸುತ್ತದೆ.

ಇದನ್ನೂ ಓದಿ: ಗಟ್ಟಿಯಾದ ಉಗುರುಗಳನ್ನು ಪಡೆಯಲು ಈ 8 ಆಹಾರ ಸೇವಿಸಿ

– ಉಗುರು ಕಚ್ಚುವಿಕೆಯನ್ನು ಚೂಯಿಂಗ್ ಗಮ್ ಅಥವಾ ತರಕಾರಿ, ಡ್ರೈಫ್ರೂಟ್​ ಮುಂತಾದ ಆರೋಗ್ಯಕರ ಅಭ್ಯಾಸಗಳೊಂದಿಗೆ ಬದಲಿಸಿ.

– ಉಗುರು ಕಚ್ಚುವ ಪ್ರಚೋದನೆಯನ್ನು ಕಡಿಮೆ ಮಾಡಲು ಒತ್ತಡ ನಿವಾರಣೆ ಮಾಡುವ ತಂತ್ರಗಳನ್ನು ರೂಢಿಸಿಕೊಳ್ಳಿ.

– ಉಗುರು ಕಚ್ಚುವಿಕೆಯನ್ನು ದೈಹಿಕವಾಗಿ ತಡೆಗಟ್ಟಲು ಕೈಗೆ ಗ್ಲೌಸ್​ಗಳನ್ನು ಧರಿಸುವುದನ್ನು ಅಥವಾ ಬೆರಳ ತುದಿಯಲ್ಲಿ ಬ್ಯಾಂಡೇಜ್​ಗಳನ್ನು ಬಳಸುವುದನ್ನು ಮರೆಯಬೇಡಿ.

– ಸ್ಟ್ರೆಸ್ ಬಾಲ್ ಮುಂತಾದ ಚಟುವಟಿಕೆಗಳಲ್ಲಿ ನಿಮ್ಮ ಕೈಗಳನ್ನು ತೊಡಗಿಸಿಕೊಳ್ಳಿ.

– ನಿಮ್ಮ ಉಗುರುಗಳಿಗೆ ಕಹಿ ರುಚಿಯ ನೇಲ್ ಪಾಲಿಷ್ ಅನ್ನು ಹಚ್ಚಿ. ಇದರಿಂದ ಉಗುರು ಕಚ್ಚುವ ಅಭ್ಯಾಸ ನಿಧಾನವಾಗಿ ಕಡಿಮೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ