AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nail Care: ಉಗುರಿನ ಮೇಲೆ ಬಿಳಿ ಚುಕ್ಕೆ ಉಂಟಾಗಲು ಕಾರಣವೇನು?

ಉಗುರಿಗೆ ಏನಾದರೂ ತಗುಲಿ ಪೆಟ್ಟಾದರೆ ಈ ಬಿಳಿ ಚುಕ್ಕೆ ಮೂಡುತ್ತದೆ. ಬಿಳಿ ಚುಕ್ಕೆಗಳಿಗಿಂತಲೂ ಬಿಳಿ ಗೆರೆಗಳು ದೊಡ್ಡದಾಗಿರುತ್ತದೆ. ಇವು ಸಾಮಾನ್ಯವಾಗಿ ಯಕೃತ್ತಿನ ಕಾಯಿಲೆಯಂತಹ ದೇಹದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಸೂಚಕವಾಗಿದೆ.

Nail Care: ಉಗುರಿನ ಮೇಲೆ ಬಿಳಿ ಚುಕ್ಕೆ ಉಂಟಾಗಲು ಕಾರಣವೇನು?
ಉಗುರುಗಳುImage Credit source: Aaj Tak
ಸುಷ್ಮಾ ಚಕ್ರೆ
|

Updated on:Sep 11, 2023 | 5:42 PM

Share

ಉಗುರುಗಳು ನಮ್ಮ ಆರೋಗ್ಯವನ್ನು ಪ್ರತಿಬಿಂಬಿಸುತ್ತವೆ. ಉಗುರುಗಳು (Nails) ಸೌಂದರ್ಯದ ಅಂಗವೂ ಹೌದು. ಈ ಉಗುರುಗಳ ಮೇಲೆ ಬಿಳಿ ಚುಕ್ಕೆಗಳು ಉಂಟಾದರೆ ಅದನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಉಗುರುಗಳ ಮೇಲೆ ಬಿಳಿ ಚುಕ್ಕೆಗಳನ್ನು ಲ್ಯುಕೋನಿಚಿಯಾ ಎಂದು ಕರೆಯಲಾಗುತ್ತದೆ. ಇದು ನಮ್ಮ ಬೆರಳಿನ ಉಗುರುಗಳು ಅಥವಾ ಕಾಲ್ಬೆರಳ ಉಗುರುಗಳ ಮೇಲ್ಮೈಯಲ್ಲಿ ಕಂಡುಬರುತ್ತದೆ. ಈ ಕಲೆಗಳ ಗಾತ್ರ ಮತ್ತು ಆಕಾರದಲ್ಲಿ ಬದಲಾಗುತ್ತದೆ. ಈ ಬಿಳಿ ಚುಕ್ಕೆಗಳು (White Spots) ಏನನ್ನು ಸೂಚಿಸುತ್ತವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಉಗುರುಗಳ ಮೇಲಿನ ಬಿಳಿ ಚುಕ್ಕೆಗಳಲ್ಲಿ ಹಲವು ವಿಧಗಳಿವೆ. ಬಿಳಿ ಚುಕ್ಕೆಗಳು, ಬಿಳಿ ಮಾರ್ಕ್, ಬಿಳಿ ಗೆರೆಗಳು ಮತ್ತು ಬಿಳಿ ಚುಕ್ಕೆಗಳು ಸೇರಿದಂತೆ ವಿವಿಧ ರೂಪಗಳಲ್ಲಿ ಇದು ಪ್ರಕಟವಾಗಬಹುದು. ಶಿಲೀಂಧ್ರ ಅಥವಾ ಫಂಗಸ್​​ನಿಂದಲೂ ಉಗುರಿನಲ್ಲಿ ಬಿಳಿ ಬಣ್ಣದ ಚುಕ್ಕೆ ಅಥವಾ ಗೆರೆ ಮೂಡುತ್ತದೆ.

ಇದನ್ನೂ ಓದಿ: Ginger Juice: ಶುಂಠಿ ಜ್ಯೂಸ್​ನಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಪರಿಹಾರ

ಬಿಳಿ ಚುಕ್ಕೆಗಳು ಉಗುರಿನ ಮೇಲೆ ಕಂಡುಬರುವ ಸಣ್ಣ, ಹಾಲಿನ ಬಿಳಿ ಬಣ್ಣದ ಚುಕ್ಕೆಗಳಾಗಿವೆ. ಇವುಗಳಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ. ಉಗುರಿಗೆ ಏನಾದರೂ ತಗುಲಿ ಪೆಟ್ಟಾದರೆ ಈ ಬಿಳಿ ಚುಕ್ಕೆ ಮೂಡುತ್ತದೆ. ಬಿಳಿ ಚುಕ್ಕೆಗಳಿಗಿಂತಲೂ ಬಿಳಿ ಗೆರೆಗಳು ದೊಡ್ಡದಾಗಿರುತ್ತದೆ. ಇವು ಸಾಮಾನ್ಯವಾಗಿ ಯಕೃತ್ತಿನ ಕಾಯಿಲೆಯಂತಹ ದೇಹದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಸೂಚಕವಾಗಿದೆ.

ಯಕೃತ್ತಿನ ಕಾಯಿಲೆ, ಮೂತ್ರಪಿಂಡ ಕಾಯಿಲೆ, ಹೃದಯ ವೈಫಲ್ಯ, ಮಧುಮೇಹ, ತೀವ್ರ ಅಪೌಷ್ಟಿಕತೆ ಮತ್ತು ರಕ್ತಹೀನತೆ ಸೇರಿದಂತೆ ವಿವಿಧ ಕಾರಣಗಳಿಂದ ಉಗುರಿನಲ್ಲಿ ಬಿಳಿ ಬಣ್ಣ ಮೂಡುತ್ತದೆ. ಅದರಲ್ಲೂ ಸಾಮಾನ್ಯವಾಗಿ ಕಬ್ಬಿಣದ ಕೊರತೆ ಇದಕ್ಕೆ ಮುಖ್ಯ ಕಾರಣವಾಗಿದೆ.

ಇದನ್ನೂ ಓದಿ: ದೇಹಕ್ಕೆ ಮಿನರಲ್ಸ್ ಯಾಕೆ ಅಗತ್ಯ? ಇಲ್ಲಿದೆ ಪೂರ್ತಿ ಮಾಹಿತಿ

ಉಗುರುಗಳ ಮೇಲಿನ ಬಿಳಿ ಚುಕ್ಕೆಗಳಿಗೂ ದೇಹದಲ್ಲಿ ವಿಟಮಿನ್ ಕೊರತೆಗೂ ಸಂಬಂಧವಿದೆ. ಸತು, ಕ್ಯಾಲ್ಸಿಯಂ ಅಥವಾ ವಿಟಮಿನ್ ಸಿ ಕೊರತೆಯಿದ್ದರೂ ಉಗುರುಗಳು ದುರ್ಬಲಗೊಂಡು, ಬಿಳಿ ಗುರುತು ಮೂಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:42 pm, Mon, 11 September 23

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ