AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nail Care: ಉಗುರಿನ ಮೇಲೆ ಬಿಳಿ ಚುಕ್ಕೆ ಉಂಟಾಗಲು ಕಾರಣವೇನು?

ಉಗುರಿಗೆ ಏನಾದರೂ ತಗುಲಿ ಪೆಟ್ಟಾದರೆ ಈ ಬಿಳಿ ಚುಕ್ಕೆ ಮೂಡುತ್ತದೆ. ಬಿಳಿ ಚುಕ್ಕೆಗಳಿಗಿಂತಲೂ ಬಿಳಿ ಗೆರೆಗಳು ದೊಡ್ಡದಾಗಿರುತ್ತದೆ. ಇವು ಸಾಮಾನ್ಯವಾಗಿ ಯಕೃತ್ತಿನ ಕಾಯಿಲೆಯಂತಹ ದೇಹದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಸೂಚಕವಾಗಿದೆ.

Nail Care: ಉಗುರಿನ ಮೇಲೆ ಬಿಳಿ ಚುಕ್ಕೆ ಉಂಟಾಗಲು ಕಾರಣವೇನು?
ಉಗುರುಗಳುImage Credit source: Aaj Tak
ಸುಷ್ಮಾ ಚಕ್ರೆ
|

Updated on:Sep 11, 2023 | 5:42 PM

Share

ಉಗುರುಗಳು ನಮ್ಮ ಆರೋಗ್ಯವನ್ನು ಪ್ರತಿಬಿಂಬಿಸುತ್ತವೆ. ಉಗುರುಗಳು (Nails) ಸೌಂದರ್ಯದ ಅಂಗವೂ ಹೌದು. ಈ ಉಗುರುಗಳ ಮೇಲೆ ಬಿಳಿ ಚುಕ್ಕೆಗಳು ಉಂಟಾದರೆ ಅದನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಉಗುರುಗಳ ಮೇಲೆ ಬಿಳಿ ಚುಕ್ಕೆಗಳನ್ನು ಲ್ಯುಕೋನಿಚಿಯಾ ಎಂದು ಕರೆಯಲಾಗುತ್ತದೆ. ಇದು ನಮ್ಮ ಬೆರಳಿನ ಉಗುರುಗಳು ಅಥವಾ ಕಾಲ್ಬೆರಳ ಉಗುರುಗಳ ಮೇಲ್ಮೈಯಲ್ಲಿ ಕಂಡುಬರುತ್ತದೆ. ಈ ಕಲೆಗಳ ಗಾತ್ರ ಮತ್ತು ಆಕಾರದಲ್ಲಿ ಬದಲಾಗುತ್ತದೆ. ಈ ಬಿಳಿ ಚುಕ್ಕೆಗಳು (White Spots) ಏನನ್ನು ಸೂಚಿಸುತ್ತವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಉಗುರುಗಳ ಮೇಲಿನ ಬಿಳಿ ಚುಕ್ಕೆಗಳಲ್ಲಿ ಹಲವು ವಿಧಗಳಿವೆ. ಬಿಳಿ ಚುಕ್ಕೆಗಳು, ಬಿಳಿ ಮಾರ್ಕ್, ಬಿಳಿ ಗೆರೆಗಳು ಮತ್ತು ಬಿಳಿ ಚುಕ್ಕೆಗಳು ಸೇರಿದಂತೆ ವಿವಿಧ ರೂಪಗಳಲ್ಲಿ ಇದು ಪ್ರಕಟವಾಗಬಹುದು. ಶಿಲೀಂಧ್ರ ಅಥವಾ ಫಂಗಸ್​​ನಿಂದಲೂ ಉಗುರಿನಲ್ಲಿ ಬಿಳಿ ಬಣ್ಣದ ಚುಕ್ಕೆ ಅಥವಾ ಗೆರೆ ಮೂಡುತ್ತದೆ.

ಇದನ್ನೂ ಓದಿ: Ginger Juice: ಶುಂಠಿ ಜ್ಯೂಸ್​ನಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಪರಿಹಾರ

ಬಿಳಿ ಚುಕ್ಕೆಗಳು ಉಗುರಿನ ಮೇಲೆ ಕಂಡುಬರುವ ಸಣ್ಣ, ಹಾಲಿನ ಬಿಳಿ ಬಣ್ಣದ ಚುಕ್ಕೆಗಳಾಗಿವೆ. ಇವುಗಳಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ. ಉಗುರಿಗೆ ಏನಾದರೂ ತಗುಲಿ ಪೆಟ್ಟಾದರೆ ಈ ಬಿಳಿ ಚುಕ್ಕೆ ಮೂಡುತ್ತದೆ. ಬಿಳಿ ಚುಕ್ಕೆಗಳಿಗಿಂತಲೂ ಬಿಳಿ ಗೆರೆಗಳು ದೊಡ್ಡದಾಗಿರುತ್ತದೆ. ಇವು ಸಾಮಾನ್ಯವಾಗಿ ಯಕೃತ್ತಿನ ಕಾಯಿಲೆಯಂತಹ ದೇಹದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಸೂಚಕವಾಗಿದೆ.

ಯಕೃತ್ತಿನ ಕಾಯಿಲೆ, ಮೂತ್ರಪಿಂಡ ಕಾಯಿಲೆ, ಹೃದಯ ವೈಫಲ್ಯ, ಮಧುಮೇಹ, ತೀವ್ರ ಅಪೌಷ್ಟಿಕತೆ ಮತ್ತು ರಕ್ತಹೀನತೆ ಸೇರಿದಂತೆ ವಿವಿಧ ಕಾರಣಗಳಿಂದ ಉಗುರಿನಲ್ಲಿ ಬಿಳಿ ಬಣ್ಣ ಮೂಡುತ್ತದೆ. ಅದರಲ್ಲೂ ಸಾಮಾನ್ಯವಾಗಿ ಕಬ್ಬಿಣದ ಕೊರತೆ ಇದಕ್ಕೆ ಮುಖ್ಯ ಕಾರಣವಾಗಿದೆ.

ಇದನ್ನೂ ಓದಿ: ದೇಹಕ್ಕೆ ಮಿನರಲ್ಸ್ ಯಾಕೆ ಅಗತ್ಯ? ಇಲ್ಲಿದೆ ಪೂರ್ತಿ ಮಾಹಿತಿ

ಉಗುರುಗಳ ಮೇಲಿನ ಬಿಳಿ ಚುಕ್ಕೆಗಳಿಗೂ ದೇಹದಲ್ಲಿ ವಿಟಮಿನ್ ಕೊರತೆಗೂ ಸಂಬಂಧವಿದೆ. ಸತು, ಕ್ಯಾಲ್ಸಿಯಂ ಅಥವಾ ವಿಟಮಿನ್ ಸಿ ಕೊರತೆಯಿದ್ದರೂ ಉಗುರುಗಳು ದುರ್ಬಲಗೊಂಡು, ಬಿಳಿ ಗುರುತು ಮೂಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:42 pm, Mon, 11 September 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ