AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naraka Chaturdashi 2024: ನರಕ ಚತುರ್ದಶಿಯಂದು ಪ್ರೀತಿ ಪಾತ್ರರಿಗೆ ಶುಭ ಕೋರಲು ಇಲ್ಲಿದೆ ಶುಭಾಶಯಗಳು

ಹಿಂದೂ ಧರ್ಮದಲ್ಲಿ ನರಕ ಚತುರ್ದಶಿಗೆ ವಿಶೇಷ ಮಹತ್ವವನ್ನು ನೀಡಲಾಗಿದೆ. ಶ್ರೀಕೃಷ್ಣನು ನರಕಾಸುರನನ್ನು ವಧೆ ಮಾಡಿ ವಿಜಯ ಸಾಧಿಸಿದ ದಿನವಾಗಿದೆ. ದೀಪಾವಳಿಯ ಒಂದು ದಿನ ಮುಂಚಿತವಾಗಿ ಆಚರಿಸಲಾಗುವ ನರಕ ಚತುರ್ದಶಿಯೂ ವಿವಿದೆಡೆಯಲ್ಲಿ ವಿಭಿನ್ನ ಸಂಪ್ರದಾಯದೊಂದಿಗೆ ಆಚರಿಸಲಾಗುತ್ತದೆ. ಈ ಬಾರಿಯ ನರಕ ಚತುರ್ದಶಿಗೆ ಬಂಧು-ಬಾಂಧವರಿಗೆ ಹಾಗೂ ಆತ್ಮೀಯರಿಗೆ ಶುಭ ಕೋರಲು ಬಯಸಿದರೆ ವಿಶೇಷ ಸಂದೇಶಗಳು ಇಲ್ಲಿದೆ.

Naraka Chaturdashi 2024: ನರಕ ಚತುರ್ದಶಿಯಂದು ಪ್ರೀತಿ ಪಾತ್ರರಿಗೆ ಶುಭ ಕೋರಲು ಇಲ್ಲಿದೆ ಶುಭಾಶಯಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Oct 30, 2024 | 3:36 PM

Share

ಬೆಳಕಿನ ಹಬ್ಬ ದೀಪಾವಳಿಯು ಐದು ದಿನಗಳ ಕಾಲ ಆಚರಿಸುವ ಹಬ್ಬವಾಗಿದ್ದು, ನರಕ ಚತುರ್ದಶಿಯೂ ಒಂದು ಭಾಗವಾಗಿದೆ. ಈ ಹಬ್ಬವನ್ನು ಕೆಲವೆಡೆ ಚೋಟಿ ದೀಪಾವಳಿ ಎಂದೂ ಕರೆಯುತ್ತಾರೆ. ಈ ಹಬ್ಬವನ್ನು ಪ್ರತಿ ವರ್ಷ ಆಶ್ವಯುಜ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯಂದು ಆಚರಿಸಲಾಗುತ್ತದೆ. ಶ್ರೀಕೃಷ್ಣನು ನರಕಾಸುರನನ್ನು ಕೊಂದು ಇಡೀ ಜಗತ್ತನ್ನು ರಕ್ಷಿಸಿದ ದಿನವಾಗಿದೆ. ಈ ನರಕ ಚತುರ್ದಶಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿಯ ಶುಭಾಶಯ ಕೋರಿ ಹಬ್ಬವನ್ನು ಸಂಭ್ರಮಿಸಬಹುದಾಗಿದೆ.

  • ಶ್ರೀಕೃಷ್ಣ ನರಕಾಸುರನ ವಿರುದ್ಧ ಜಯ ಸಾಧಿಸಿದಂತೆ ನಿಮ್ಮ ಬದುಕಿನಲ್ಲಿರುವ ಕಷ್ಟಗಳು ದೂರವಾಗಲಿ, ಜೀವನದಲ್ಲಿ ನೀವು ಜಯ ಸಾಧಿಸಲಿ ನರಕ ಚತುರ್ದಶಿ ಶುಭಾಶಯಗಳು.
  • ದುಷ್ಟ ಶಿಕ್ಷಣ, ಶಿಕ್ಷರಕ್ಷಣದ ಸಂಕೇತವಾಗಿರುವ ನರಕ ಚತುರ್ದಶಿ ಹಬ್ಬವು ಜೀವನದ ದುಃಖಗಳನ್ನು ಪರಿಹರಿಸಿ, ಮಂಗಳವನ್ನು ಉಂಟು ಮಾಡಲಿ. ನಿಮಗೂ ನಿಮ್ಮ ಕುಟುಂಬಕ್ಕೂ ನರಕ ಚತುರ್ದಶಿ ಶುಭಾಶಯಗಳು.
  • ಕೆಟ್ಟದ್ದರ ಮೇಲೆ ಒಳಿತಿನ ವಿಜಯವಾಗಲಿ. ಬದುಕಿನಲ್ಲಿ ಸದಾ ಸಂತೋಷವೇ ತುಂಬಿರಲಿ. ನರಕ ಚತುರ್ದಶಿ ಹಬ್ಬದ ಶುಭಾಶಯಗಳು.
  • ನಿಮ್ಮ ಜೀವನದಲ್ಲಿ ಸಮೃದ್ಧಿ, ಆರೋಗ್ಯ ಮತ್ತು ಸಂಪತ್ತು ತುಂಬಿ ತುಳುಕಲಿ. ನರಕ ಚತುರ್ದಶಿಯ ಶುಭಾಶಯಗಳು.
  • ನಾಡಿನ ಜನತೆಗೆ ನರಕ ಚತುರ್ದಶಿ ದೀಪಾವಳಿ ಹಬ್ಬದ ಶುಭಾಶಯಗಳು. ಈ ಸಂಭ್ರಮದ ಬೆಳಕಿನ ಹಬ್ಬವು ನೋವುಗಳ ಕತ್ತಲೆಯನ್ನು ದೂರಸರಿಸಿ ನಲಿವಿನ ಬೆಳಕನ್ನು ಪಸರಿಸಲಿ, ಎಲ್ಲರಿಗೂ ಉತ್ತಮ ಆರೋಗ್ಯ, ಸಮೃದ್ಧಿಗಳನ್ನು ಹೊತ್ತು ತರಲಿ.
  • ಶ್ರೀಕೃಷ್ಣ ಪರಮಾತ್ಮನು ನರಕಾಸುರನ ವಧಿಸಿ ಜಗದ ಕಂಟಕವ ನಿವಾರಿಸಿದಂತೆ, ನಾವು ನಮ್ಮೊಳಿರುವ ಅಹಂಕಾರವೆಂಬ ತಮವ ತೊಡೆದು ಪ್ರೀತಿಯ ದೀಪವನ್ನು ಬೆಳಗೋಣ. ಎಲ್ಲರಿಗೂ ನರಕ ಚತುರ್ದಶಿಯ ಶುಭಾಶಯಗಳು.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್