AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Brothers Day: ಈ ದಿನ ನಿಮ್ಮ ಸಹೋದರನಿಗೆ ಇಷ್ಟವಾಗುವ ಉಡುಗೊರೆ ನೀಡಿ

ರಾಷ್ಟ್ರೀಯ ಸಹೋದರರ ದಿನ: ಪ್ರತಿ ವರ್ಷ ಮೇ 24 ರಂದು ರಾಷ್ಟ್ರೀಯ ಸಹೋದರರ ದಿನವನ್ನು ಆಚರಿಸಲಾಗುತ್ತದೆ. ಸಹೋದರರ ಪ್ರೀತಿ, ಮಮತೆ, ಕಾಳಜಿಯನ್ನು ನೆನೆಯುವ ಉದ್ದೇಶವನ್ನಿಟ್ಟುಕೊಂಡು ಈ ದಿನವನ್ನು ಆಚರಿಸಲಾಗುತ್ತದೆ. ಅದಕ್ಕಾಗಿಯೇ ಈ ದಿನದ ಆಚರಣೆ ನಿಜಕ್ಕೂ ಅರ್ಥಪೂರ್ಣವಾಗಿದ್ದು ಈ ದಿನದ ಇತಿಹಾಸ, ಮಹತ್ವದ ಕುರಿತ ಮಾಹಿತಿ ಇಲ್ಲಿದೆ.

National Brothers Day: ಈ ದಿನ ನಿಮ್ಮ ಸಹೋದರನಿಗೆ ಇಷ್ಟವಾಗುವ ಉಡುಗೊರೆ ನೀಡಿ
National Brothers Day: History and ImportanceImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 24, 2025 | 8:11 AM

Share

ಪ್ರಪಂಚದ ಎಲ್ಲಾ ಸಂಬಂಧಗಳಲ್ಲಿ ಸಹೋದರರ (Brothers) ಸಂಬಂಧ ಬಹಳ ವಿಶೇಷ. ಏಕೆಂದರೆ ಅಣ್ಣ, ತಮ್ಮ ಎನ್ನುವ ಭಾವನೆಯೇ ಬಹಳ ಸುರಕ್ಷಿತವಾದ ಭಾವನೆಯನ್ನು ನೀಡುತ್ತದೆ. ತಂದೆ, ತಾಯಿ ಸ್ನೇಹಿತರ ಮಮತೆ, ಕಾಳಜಿ ಒಂದು ಕಡೆಯಾದರೆ ಸಹೋದರರಲ್ಲಿ ದ್ವೇಷ, ಜಗಳ, ಕೋಪದ ಜೊತೆಗೆ ವಿವರಿಸಲಾಗದ ಪ್ರೀತಿಯೂ ಇರುತ್ತದೆ. ಕಷ್ಟ ಸುಖಗಳಿಗೆ ಜೊತೆಯಾಗುವ ಸಹೋದರ ಸಂಬಂಧಕ್ಕೆ ಬೆಲೆ ಕಟ್ಟಲು ಯಾರಿಂದಲೂ ಸಾಧ್ಯವಿರುವುದಿಲ್ಲ. ಆದರೆ ನಮ್ಮ ಒಡಹುಟ್ಟಿದವರೇ ಅಣ್ಣ ತಮ್ಮಂದಿರಾಗಿ ಪ್ರೀತಿ ನೀಡಬೇಕಾಗಿಲ್ಲ. ನಿಷ್ಕಲ್ಮಶ ಭಾವನೆಯಿಂದ ಕಾಳಜಿ ವಹಿಸುವವರು ಸಹೋದರರಾಗುತ್ತಾರೆ. ಅದಕ್ಕೆ ರಕ್ತ ಸಂಬಂಧವೇ ಆಗಬೇಕಾಗಿಲ್ಲ. ಹಾಗಾಗಿಯೇ ಇಂತಹ ಮೌಲ್ಯ ಹಾಗೂ ಮಹತ್ವ ತಿಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸಹೋದರ ದಿನವನ್ನು (National Brothers Day) ಆಚರಿಸಲಾಗುತ್ತದೆ.

ರಾಷ್ಟ್ರೀಯ ಸಹೋದರರ ದಿನದ ಇತಿಹಾಸ, ಮಹತ್ವ:

2005ರ ಮೇ 24ರಂದು ಮೊದಲ ಬಾರಿ ರಾಷ್ಟ್ರೀಯ ಸಹೋದರರ ದಿನವನ್ನು ಆಚರಿಸಲಾಗಿತ್ತು. ಅಲಬಾಮಾ ಮೂಲದ ಸಿ. ಡೇನಿಯಲ್ ರೋಡ್ಸ್ ಅವರು ರಾಷ್ಟ್ರೀಯ ಸಹೋದರರ ದಿನ ಮತ್ತು ಅದರ ಕಾರ್ಯವಿಧಾನಗಳನ್ನು ಮೊದಲು ಆಯೋಜಿಸಿ ಈ ದಿನದ ಆಚರಣೆಗೆ ಕಾರಣರಾದರು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಅದಕ್ಕಾಗಿಯೇ ಈ ದಿನದಂದು ಸಹೋದರ ಸಹೋದರಿಯರ ನಡುವಿನ ಬಾಂಧವ್ಯವನ್ನು ಗೌರವಿಸಲಾಗುತ್ತದೆ. ಈ ದಿನದಂದು ಸಹೋದರ ಸಹೋದರಿಯರು ಪ್ರೀತಿಯ ಉಡುಗೊರೆಯನ್ನು ನೀಡಿ ವಿಶೇಷ ದಿನವನ್ನು ಆಚರಿಸಿಕೊಳ್ಳುತ್ತಾರೆ.

ಇದನ್ನೂ ಓದಿ: ಅಣ್ಣನ ಪ್ರತಿ ಕ್ಷಣವನ್ನು ಹೀಗೆ ಸಂಭ್ರಮಿಸಿ, ಅವನಿಗೆ ಈ ದಿನ ವಿಶೇಷ

ಇದನ್ನೂ ಓದಿ
Image
ಮುಟ್ಟಿದರೆ ಮುನಿಯುವ ಈ ಗಿಡದಲ್ಲಿದೆ ಹಲವು ಪ್ರಯೋಜನ
Image
ಗರ್ಭಾವಸ್ಥೆಯಲ್ಲಿ ಪತಿಯ ಬೆಂಬಲ ಹೇಗಿರಬೇಕು?
Image
ಬೆಳಗ್ಗೆ ಬೇಗ ಏಳಬೇಕು ಎಂದು ಅಲಾರಾಂ ಇಡುವವರು ಈ ಸ್ಟೋರಿ ತಪ್ಪದೆ ಓದಿ
Image
ಈ ಒಂದು ಗಿಡದ ಎಲೆ ದೇಹ ಆರೋಗ್ಯಕ್ಕೆ ರಕ್ಷಣಾ ಕವಚ

ಈ ದಿನ ನಿಮ್ಮ ಸಹೋದರನನ್ನು ಖುಷಿ ಪಡಿಸುವುದು ಹೇಗೆ?

ಈಗಿನ ದಿನದಲ್ಲಿ ಒಟ್ಟು ಕುಟುಂಬಗಳಿರುವುದು ತುಂಬಾ ವಿರಳ. ಇದ್ದರೂ ಮನೆ ಮಕ್ಕಳು ಕೆಲಸಕ್ಕಾಗಿ ಬೇರೆ ಬೇರೆ ಊರುಗಳಲ್ಲಿರುತ್ತಾರೆ. ಹಾಗಾಗಿ ಒಟ್ಟು ಸೇರುವುದು ತುಂಬಾ ತಿಂಗಳಿಗೊಮ್ಮೆ ಅಥವಾ ವರ್ಷಕೊಮ್ಮೆಯಾಗಿರುತ್ತದೆ ಹಾಗಾಗಿ ಈ ದಿನದ ಪ್ರಯುಕ್ತ ಸಹೋದರರು ಎಲ್ಲಾದರೂ ಒಂದು ಕಡೆ ಒಟ್ಟು ಸೇರಿ ಒಟ್ಟಿಗೆ ಕುಳಿತು ಊಟ ಮಾಡಬಹುದು. ದೂರದ ಊರಿನಲ್ಲಿದ್ದರೆ ಒಂದು ಕರೆ ಮಾಡಿ ಮಾತನಾಡಿ ಅಥವಾ ಅವರಿಗಿಷ್ಟವಾಗುವಂತಹ ಉಡುಗೊರೆಯನ್ನು ಕಳಿಸಿ ಕೊಡಬಹುದು. ಸಹೋದರನ ಪ್ರೀತಿ ಪಡೆಯಲು ಇದೊಂದೇ ದಿನವಲ್ಲ ಆದರೆ ಈ ದಿನವನ್ನು ನಿಮ್ಮ ಸಹೋದರನನ್ನು ಖುಷಿ ಪಡಿಸಲು ನೀವು ಉಪಯೋಗ ಮಾಡಿಕೊಳ್ಳಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ