AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Civil Services Day 2025: ರಾಷ್ಟ್ರೀಯ ನಾಗರಿಕ ಸೇವೆಗಳ ದಿನ ಆಚರಿಸುವುದು ಏಕೆ? ಈ ದಿನದ ಇತಿಹಾಸ ಹಾಗೂ ಮಹತ್ವ ತಿಳಿಯಿರಿ

ದೇಶದ ಅಭಿವೃದ್ಧಿಗೆ ಸಾರ್ವಜನಿಕ ಸೇವಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಪಾತ್ರ ಬಹುದೊಡ್ಡದು. ಇವರನ್ನು ಗೌರವಿಸುವ ನಿಟ್ಟಿನಲ್ಲಿ ಮೀಸಲಾಗಿರುವ ದಿನವೇ ರಾಷ್ಟ್ರೀಯ ನಾಗರಿಕ ಸೇವೆಗಳ ದಿನ. ಹೌದು ಪ್ರತಿ ವರ್ಷ ಏಪ್ರಿಲ್ 21 ರಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಈ ದಿನದ ಆಚರಣೆಯ ಹಿಂದಿನ ಇತಿಹಾಸ ಹಾಗೂ ಮಹತ್ವ ಸೇರಿದಂತೆ ಇನ್ನಿತ್ತರ ಮಾಹಿತಿ ಇಲ್ಲಿದೆ.

National Civil Services Day 2025: ರಾಷ್ಟ್ರೀಯ ನಾಗರಿಕ ಸೇವೆಗಳ ದಿನ ಆಚರಿಸುವುದು ಏಕೆ? ಈ ದಿನದ ಇತಿಹಾಸ ಹಾಗೂ ಮಹತ್ವ ತಿಳಿಯಿರಿ
National Civil Services Day
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Apr 20, 2025 | 11:31 AM

ಎಲ್ಲರಿಗೂ ಕೂಡ ತಿಳಿದಿರುವಂತೆ ಒಂದು ಕೈಯಲ್ಲಿ ಚಪ್ಪಾಳೆ ಹೊಡೆಯಲು ಸಾಧ್ಯವಿಲ್ಲ. ಹೀಗಾಗಿ ಎರಡು ಕೈ ಸೇರಿದರೇನೇ ಚಪ್ಪಾಳೆ. ಅದೇ ರೀತಿ ಒಂದು ದೇಶ (country) ವು ಅಭಿವೃದ್ಧಿಯತ್ತ ಸಾಗಬೇಕೆಂದರೆ ಪ್ರತಿಯೊಂದು ಇಲಾಖಗಳ ಪಾತ್ರ ದೊಡ್ಡದು. ದೇಶದ ಆಡಳಿತವು ಸರಿಯಾದ ರೀತಿಯಲ್ಲಿ ನಡೆಯಬೇಕಾದರೆ ನಾಗರಿಕ ಸೇವಾ ಇಲಾಖೆ (civil service department) ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಅದಲ್ಲದೇ, ರಾಷ್ಟ್ರ ಸೇವೆಯಲ್ಲಿ ನಾಗರಿಕ ಸೇವಕರ ಕಠಿಣ ಪರಿಶ್ರಮ, ಸಮರ್ಪಣೆ, ಬದ್ಧತೆಯನ್ನು ಗುರುತಿಸುವುದು ಹಾಗೂ ನಾಗರಿಕ ಸೇವಕರನ್ನು ಗುರುತಿಸಲು, ಪ್ರಶಂಸಿಸಲು ಈ ದಿನವು ಸೂಕ್ತವಾಗಿದೆ. ಹೀಗಾಗಿ ಪ್ರತಿ ವರ್ಷ ಏಪ್ರಿಲ್ 21 ರಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನ (National Civil Services Day) ವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ರಾಷ್ಟ್ರೀಯ ನಾಗರಿಕ ಸೇವೆಗಳ ದಿನದ ಇತಿಹಾಸ:

ಸ್ವತಂತ್ರ ಭಾರತದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು 1947 ರಲ್ಲಿ ನವದೆಹಲಿಯ ಮೆಟ್‌ಕಾಫ್ ಹೌಸ್‌ನಲ್ಲಿ ಆಡಳಿತಾತ್ಮಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ದಿನದ ಸವಿನೆನಪಿಗಾಗಿ ಏಪ್ರಿಲ್ 21 ರಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನವನ್ನು ಆಚರಣೆಯು ಪ್ರಾರಂಭವಾಯಿತು. ಮೊದಲ ಬಾರಿಗೆ 2006 ರಲ್ಲಿ ನವದೆಹಲಿಯ ವಿಜ್ಞಾನ ಭವನದಲ್ಲಿ ಈ ದಿನವನ್ನು ಆಚರಿಸಲಾಯಿತು, ಅಂದಿನಿಂದ ಈ ದಿನದ ಆಚರಣೆಯು ಚಾಲ್ತಿಯಲ್ಲಿದೆ.

ಇದನ್ನೂ ಓದಿ : Garlic Pickle: ನಾಲಿಗೆ ರುಚಿ ಹೆಚ್ಚಿಸೋದು ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ ಈ ಬೆಳ್ಳುಳ್ಳಿ ಉಪ್ಪಿನಕಾಯಿ

ರಾಷ್ಟ್ರೀಯ ನಾಗರಿಕ ಸೇವೆಗಳ ದಿನದ ಮಹತ್ವ ಹಾಗೂ ಆಚರಣೆ:

ದೇಶದ ಅಭಿವೃದ್ಧಿಗೆ ಸಾರ್ವಜನಿಕ ಸೇವಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾಗರಿಕ ಸೇವಕರ ಕೆಲಸವನ್ನು ಗುರುತಿಸಲು ಹಾಗೂ ಅವರ ಕೊಡುಗೆಗಳನ್ನು ಸ್ಮರಿಸುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ದೇಶದ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಉತ್ತಮ ಆಡಳಿತವನ್ನು ನೀಡಿದ ನಾಗರಿಕ ಸೇವಕರನ್ನು ಗುರುತಿಸಿ ಗೌರವ ಸಲ್ಲಿಸಲಾಗುತ್ತದೆ. ಹೌದು, ಸಾರ್ವಜನಿಕ ಆಡಳಿತ ಕ್ಷೇತ್ರದಲ್ಲಿ ಸೇವೆಗೈದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳಿಗೆ ಪ್ರಧಾನ ಮಂತ್ರಿ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಾರೆ. ಅದರೊಂದಿಗೆ ಈ ದಿನದಂದು ದೇಶದಾದಂತ್ಯ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ