AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Doctors Day: ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನ! ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ

ವೈದ್ಯರನ್ನ ದೇವರಿಗೆ ಹೊಲಿಸಲಾಗುತ್ತದೆ. ರೋಗಕ್ಕೆ ತುತ್ತಾದ ಪ್ರತಿಯೊಬ್ಬರನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವನಿಗೆ ಪುನರ್ಜನ್ಮ ನೀಡುವುದು ವೈದ್ಯರ ಕಾಯಕವಾದರೆ. ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಗಾಗಿ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ.

National Doctors Day: ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನ! ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ
National Doctors Day
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 30, 2024 | 11:01 AM

Share

‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆತನು ರೋಗಿಯ ರೋಗವನ್ನು ಪರಿಹರಿಸುವಾತ. ವೈದ್ಯ ಕೇವಲ ರೋಗ ಪರಿಹಾರಕನಾಗಿರದೇ ರೋಗಿಯ ಸಹಚಿಂತಕನೂ ಆಗಿರುತ್ತಾನೆ. ಅದಕ್ಕಾಗಿ ವೈದ್ಯರನ್ನು ದೇವರಿಗೆ ಹೊಲಿಸಲಾಗುತ್ತದೆ. ರೋಗಕ್ಕೆ ತುತ್ತಾದ ಪ್ರತಿಯೊಬ್ಬರನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವನಿಗೆ ಪುನರ್ಜನ್ಮ ನೀಡುವುದು ವೈದ್ಯರ ಕಾಯಕವಾದರೆ. ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಗಾಗಿ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ವೈದ್ಯರ ದಿನದ ಇತಿಹಾಸ :

ಭಾರತದಲ್ಲಿ 1991 ರಲ್ಲಿ ವೈದ್ಯರ ದಿನವನ್ನು ಮೊದಲ ಬಾರಿಗೆ ಆಚರಿಸಲಾಯಿತು. ಈ ದಿನವನ್ನು ಬಿ ಸಿ ರಾಯ್ ಅವರು ವೈದ್ಯಕೀಯ ರಂಗಕ್ಕೆ ನೀಡಿದ ಅಮೋಘ ಕೊಡುಗೆಗಳನ್ನು ನೆನಯಲು ಮತ್ತು ಪ್ರತಿಯೊಬ್ಬ ವೈದ್ಯರಿಗೂ ಗೌರವ ಸಲ್ಲಿಸಲು ಆಚರಣೆ ಮಾಡಲಾಗುತ್ತದೆ. ಡಾ. ಬಿಧನ್ ಚಂದ್ರ ರಾಯ್ ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಮಂತ್ರಿ, ಹಾಗೂ ಶೇಷ್ಠ ವೈದ್ಯರು. ಅವರು ಜುಲೈ 1, 1882 ರಂದು ಪಶ್ಚಿಮ ಬಂಗಾಳದಲ್ಲಿ ಜನಿಸಿದರು. ಜುಲೈ 1,1962 ರಲ್ಲಿ ಮರಣ ಹೊಂದಿದರು. ಅವರ ಜನನ ಮತ್ತು ಮರಣ ದಿನ ಜುಲೈ 1, ಆದ್ದರಿಂದ ಈ ದಿನವನ್ನು, ಅವರ ಗೌರವಾರ್ಥವಾಗಿ ವೈದ್ಯರ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: Microplastics: ಗರ್ಭಿಣಿಯರಲ್ಲಿ ಹೆಚ್ಚುತ್ತಿವೆ ಡೇಂಜರಸ್​​ ಮೈಕ್ರೋಪ್ಲಾಸ್ಟಿಕ್​ ಕಣಗಳು

ರಾಷ್ಟ್ರೀಯ ವೈದ್ಯರ ದಿನದ ಮಹತ್ವ:

ರಾಷ್ಟ್ರೀಯ ವೈದ್ಯರ ದಿನದಂದು, ವೈದ್ಯರ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಅಲ್ಲದೇ ನಮ್ಮ ಜೀವನಕ್ಕೆ ವೈದ್ಯರು ನೀಡಿದ ಕೊಡುಗೆಯನ್ನು ಸ್ಮರಿಸಿ ಪ್ರಶಂಸಿಸಲಾಗುತ್ತದೆ. ಹಾಗಾಗಿ ಈ ದಿನ ಅನೇಕ ಕಡೆಗಳಲ್ಲಿ ವೈದ್ಯರನ್ನು ಗೌರವಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಜೊತೆಗೆ ಈ ವಿಶೇಷ ದಿನವನ್ನು ಜನರ ಸೇವೆಗಾಗಿ ಪ್ರಾಣವನ್ನೇ ಪಣಕ್ಕಿಟ್ಟಿರುವ ಆರೋಗ್ಯ ಕಾರ್ಯಕರ್ತರಿಗೆ ಗೌರವ ಸಲ್ಲಿಸಲಾಗುತ್ತದೆ. ನೀವು ಕೂಡ ನಿಮ್ಮ ಬದುಕಿಗೆ ಮತ್ತೆ ಜೀವ ತುಂಬಿದ ವೈದ್ಯರಿಗೆ ಈ ದಿನ ಧನ್ಯವಾದ ಹೇಳಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು