AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Energy Conservation Day 2024: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಮಾಹಿತಿ

ಪ್ರತಿ ವರ್ಷ ಡಿಸೆಂಬರ್‌ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಶಕ್ತಿಯ ಬಳಕೆಯನ್ನು ಕಡಿಮೆ ಮಾಡಿ ಇಂಧನವನ್ನು ಪರಿಣಾಮಕಾರಿಯಾಗಿ ಬಳಸುವಂತೆ ಜನರನ್ನು ಪ್ರೋತ್ಸಾಹಿಸುವುದು. ಇಂಧನ ಸಂರಕ್ಷಣೆಯ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ. ಹಾಗಾದ್ರೆ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಯಾವಾಗದಿಂದ ಆಚರಿಸಲಾಗುತ್ತಿದೆ? ಈ ದಿನದ ಆಚರಣೆಯ ಮಹತ್ವವೇನು? ಎಂಬುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

National Energy Conservation Day 2024: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 14, 2024 | 10:16 AM

Share

ಇಂಧನವು ಅತ್ಯಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದೆ. ಅತಿಯಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಅದಲ್ಲದೇ, ಮಿತಿಮೀರಿದ ಇಂಧನದ ಬಳಕೆಯಿಂದ ಭವಿಷ್ಯದಲ್ಲಿ ಇಂಧನಗಳು ಸಿಗದೇ ಹೋಗುವ ಸಾಧ್ಯತೆಯೇ ಹೆಚ್ಚು. ಮಾನವನ ಸ್ವಾರ್ಥದಿಂದಾಗಿ ನೈಸರ್ಗಿಕ ಶಕ್ತಿ ಮೂಲಗಳಾದ ಪೆಟ್ರೋಲಿಯಂ ಉತ್ಪನ್ನಗಳು, ಕಲ್ಲಿದ್ದಲು, ನೈಸರ್ಗಿಕ ಅನಿಲಗಳು ಭರಿದಾಗುತ್ತಿದೆ. ಹೀಗಾಗಿ ಮುಂದಿನ ಪೀಳಿಗೆಗಾಗಿ ಇಂಧನ ಉಳಿತಾಯ ಮಾಡುವುದು ಮತ್ತು ಇಂಧನವನ್ನು ಜಾಗರೂಕರಾಗಿ ಬಳಸುವುದು ಅಗತ್ಯ. ಇಂಧನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಡಿಸೆಂಬರ್ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಇತಿಹಾಸ

ಇಂಧನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತದಲ್ಲಿ ಮೊದಲ ಬಾರಿಗೆ 1991 ರಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಯಿತು. ಕೇಂದ್ರ ವಿದ್ಯುತ್ ಸಚಿವಾಲಯದ ಅಡಿಯಲ್ಲಿ ರೂಪುಗೊಂಡ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ-BEE 1991 ರಲ್ಲಿ ಇಂಧನ ಸಂರಕ್ಷಣಾ ದಿನವನ್ನು ಆಚರಿಸುವ ಬಗ್ಗೆ ಮಹತ್ತರ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಅಂದಿನಿಂದ ಪ್ರತಿವರ್ಷ ಡಿಸೆಂಬರ್ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ಭಾರತ ಸರ್ಕಾರದ ಅಧೀನದಲ್ಲಿರುವ ಈ ಒಂದು ಸಾಂವಿಧಾನಿಕ ಸಂಸ್ಥೆ ಶಕ್ತಿಯ ಬಳಕೆಯನ್ನು ಕಡಿಮೆ ಮಾಡಲು ಹಲವಾರು ಕಾರ್ಯತಂತ್ರಗಳು ಮತ್ತು ನೀತಿಗಳನ್ನು ಜಾರಿಗೆ ತಂದಿದೆ. ಈ ಸಮಿತಿಯು ಇಂಧನ ಸಂರಕ್ಷಣೆಗಾಗಿ 2001 ರಲ್ಲಿ ʼಶಕ್ತಿ ಸಂರಕ್ಷಣಾ ಕಾಯ್ದೆʼಯನ್ನು ಜಾರಿಗೆ ತಂದಿದೆ.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಮಹತ್ವ ಹಾಗೂ ಆಚರಣೆ

ಇಂಧನ ಸಂರಕ್ಷಣೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಶಕ್ತಿಯ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ಸಂಪನ್ಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮುಂದಿನ ಪೀಳಿಗೆಗೆ ಇಂಧನವನ್ನು ಉಳಿಸುವಲ್ಲಿ ನಾವೆಲ್ಲರೂ ಜೊತೆಗೂಡಬೇಕು. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದಂದು, ಸೆಮಿನಾರ್‌, ಕಾರ್ಯಾಗಾರಗಳು ಮತ್ತು ಇಂಧನ ಉಳಿತಾಯ ಅಭಿಯಾನಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನುಗಳನ್ನು ಆಯೋಜಿಸಲಾಗುತ್ತಾ ಬರಲಾಗುತ್ತಿದೆ.

ಪ್ರತಿ ವರ್ಷ ಡಿಸೆಂಬರ್‌ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಶಕ್ತಿಯ ಬಳಕೆಯನ್ನು ಕಡಿಮೆ ಮಾಡಿ ಇಂಧನವನ್ನು ಪರಿಣಾಮಕಾರಿಯಾಗಿ ಬಳಸುವಂತೆ ಜನರನ್ನು ಪ್ರೋತ್ಸಾಹಿಸುವುದು. ಇಂಧನ ಸಂರಕ್ಷಣೆಯ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ. ಹಾಗಾದ್ರೆ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಯಾವಾಗದಿಂದ ಆಚರಿಸಲಾಗುತ್ತಿದೆ? ಈ ದಿನದ ಆಚರಣೆಯ ಮಹತ್ವವೇನು? ಎಂಬುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಇಂಧನವು ಅತ್ಯಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದೆ. ಅತಿಯಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಅದಲ್ಲದೇ, ಮಿತಿಮೀರಿದ ಇಂಧನದ ಬಳಕೆಯಿಂದ ಭವಿಷ್ಯದಲ್ಲಿ ಇಂಧನಗಳು ಸಿಗದೇ ಹೋಗುವ ಸಾಧ್ಯತೆಯೇ ಹೆಚ್ಚು. ಮಾನವನ ಸ್ವಾರ್ಥದಿಂದಾಗಿ ನೈಸರ್ಗಿಕ ಶಕ್ತಿ ಮೂಲಗಳಾದ ಪೆಟ್ರೋಲಿಯಂ ಉತ್ಪನ್ನಗಳು, ಕಲ್ಲಿದ್ದಲು, ನೈಸರ್ಗಿಕ ಅನಿಲಗಳು ಭರಿದಾಗುತ್ತಿದೆ. ಹೀಗಾಗಿ ಮುಂದಿನ ಪೀಳಿಗೆಗಾಗಿ ಇಂಧನ ಉಳಿತಾಯ ಮಾಡುವುದು ಮತ್ತು ಇಂಧನವನ್ನು ಜಾಗರೂಕರಾಗಿ ಬಳಸುವುದು ಅಗತ್ಯ. ಇಂಧನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಡಿಸೆಂಬರ್ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಇತಿಹಾಸ

ಇಂಧನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತದಲ್ಲಿ ಮೊದಲ ಬಾರಿಗೆ 1991 ರಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಯಿತು. ಕೇಂದ್ರ ವಿದ್ಯುತ್ ಸಚಿವಾಲಯದ ಅಡಿಯಲ್ಲಿ ರೂಪುಗೊಂಡ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ-BEE 1991 ರಲ್ಲಿ ಇಂಧನ ಸಂರಕ್ಷಣಾ ದಿನವನ್ನು ಆಚರಿಸುವ ಬಗ್ಗೆ ಮಹತ್ತರ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಅಂದಿನಿಂದ ಪ್ರತಿವರ್ಷ ಡಿಸೆಂಬರ್ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ಭಾರತ ಸರ್ಕಾರದ ಅಧೀನದಲ್ಲಿರುವ ಈ ಒಂದು ಸಾಂವಿಧಾನಿಕ ಸಂಸ್ಥೆ ಶಕ್ತಿಯ ಬಳಕೆಯನ್ನು ಕಡಿಮೆ ಮಾಡಲು ಹಲವಾರು ಕಾರ್ಯತಂತ್ರಗಳು ಮತ್ತು ನೀತಿಗಳನ್ನು ಜಾರಿಗೆ ತಂದಿದೆ. ಈ ಸಮಿತಿಯು ಇಂಧನ ಸಂರಕ್ಷಣೆಗಾಗಿ 2001 ರಲ್ಲಿ ʼಶಕ್ತಿ ಸಂರಕ್ಷಣಾ ಕಾಯ್ದೆʼಯನ್ನು ಜಾರಿಗೆ ತಂದಿದೆ.

ಇದನ್ನೂ ಓದಿ: ವೈವಾಹಿಕ ಜೀವನವು ಸುಖಕರವಾಗಿಲು ಹಣಕಾಸಿನ ನಿರ್ವಹಣೆ ಹೀಗಿರಲಿ

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಮಹತ್ವ ಹಾಗೂ ಆಚರಣೆ

ಇಂಧನ ಸಂರಕ್ಷಣೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಶಕ್ತಿಯ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ಸಂಪನ್ಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮುಂದಿನ ಪೀಳಿಗೆಗೆ ಇಂಧನವನ್ನು ಉಳಿಸುವಲ್ಲಿ ನಾವೆಲ್ಲರೂ ಜೊತೆಗೂಡಬೇಕು. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದಂದು, ಸೆಮಿನಾರ್‌, ಕಾರ್ಯಾಗಾರಗಳು ಮತ್ತು ಇಂಧನ ಉಳಿತಾಯ ಅಭಿಯಾನಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನುಗಳನ್ನು ಆಯೋಜಿಸಲಾಗುತ್ತಾ ಬರಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ