AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Farmers Day 2024: ರಾಷ್ಟ್ರೀಯ ರೈತರ ದಿನವನ್ನು ಆಚರಿಸುವುದು ಏಕೆ? ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ

ರೈತ ದೇಶದ ಬೆನ್ನೆಲುಬು. ಆತ ಬೆವರು ಸುರಿಸಿ ದುಡಿದರೆ ಮಾತ್ರ ನಾವು ನೆಮ್ಮದಿಯಿಂದ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯ. ಇಂತಹ ಪ್ರತಿಯೊಬ್ಬರ ರೈತನನ್ನು ಗೌರವಿಸುವ ಸಲುವಾಗಿ ಭಾರತದಲ್ಲಿ ಪ್ರತಿವರ್ಷ ಡಿಸೆಂಬರ್‌ 23 ರಂದು ರಾಷ್ಟ್ರೀಯ ರೈತರ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆ ಯಾವಾಗ ಜಾರಿಗೆ ಬಂದಿತು, ಈ ವಿಶೇಷ ದಿನದ ಮಹತ್ವವೇನು ಈ ಎಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ.

National Farmers Day 2024: ರಾಷ್ಟ್ರೀಯ ರೈತರ ದಿನವನ್ನು ಆಚರಿಸುವುದು ಏಕೆ? ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Dec 23, 2024 | 10:14 AM

Share

ರೈತರು ತಾವು ಹಸಿದಿದ್ದರೂ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಇತರರು ನೆಮ್ಮದಿಯಿಂದ ಹೊಟ್ಟೆ ತುಂಬಿಸಿಕೊಳ್ಳುವಂತೆ ನೋಡುತ್ತಾರೆ. ಅವರು ಬೆವರು ಸುರಿಸಿ ದುಡಿದರೆ ಮಾತ್ರ ದೇಶ ಸುಭೀಕ್ಷವಾಗಿರುತ್ತದೆ. ಜೊತೆಗೆ ದೇಶದ ಆರ್ಥಿಕತೆಯಲ್ಲಿಯೂ ರೈತರ ಕೊಡುಗೆ ಅಪಾರ. ಇದೇ ಕಾರಣಕ್ಕೆ ರೈತರನ್ನು ದೇಶದ ಬೆನ್ನೆಲುಬು ಅಂತ ಕರೆಯೋದು. ಅದರಲ್ಲೂ ಭಾರತವನ್ನು ಪ್ರಾಚೀನ ಕಾಲದಿಂದಲೂ ಕೃಷಿ ಪ್ರಧಾನ ದೇಶವೆಂದು ಪರಿಗಣಿಸಲಾಗಿದೆ. ಅಂದಾಜಿನ ಪ್ರಕಾರ, ಭಾರತದ ಸುಮಾರು 60% ಶೇಕಡಾ ಜನರು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಇಂತಹ ಪ್ರತಿಯೊಬ್ಬರ ರೈತನನ್ನು ಗೌರವಿಸುವ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಅವರ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಭಾರತದಲ್ಲಿ ಪ್ರತಿವರ್ಷ ಡಿಸೆಂಬರ್‌ 23 ರಂದು ರಾಷ್ಟ್ರೀಯ ರೈತರ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆ ಯಾವಾಗ ಜಾರಿಗೆ ಬಂದಿತು, ಈ ವಿಶೇಷ ದಿನದ ಮಹತ್ವವೇನು ಈ ಎಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಷ್ಟ್ರೀಯ ರೈತರ ದಿನವನ್ನು ಡಿಸೆಂಬರ್ 23 ರಂದು ಮಾತ್ರ ಏಕೆ ಆಚರಿಸಲಾಗುತ್ತದೆ?

ರಾಷ್ಟ್ರೀಯ ರೈತರ ದಿನದ ಇತಿಹಾಸವನ್ನು ನೋಡುವುದಾದರೆ, ದೇಶದ ಐದನೇ ಪ್ರಧಾನಿ ಚೌಧರಿ ಚರಣ್‌ ಸಿಂಗ್‌ ಅವರ ಜನ್ಮ ದಿನದ ಸವಿ ನೆನಪಿಗಾಗಿ ಪ್ರತಿವರ್ಷ ಡಿಸೆಂಬರ್‌ 23 ರಂದು ಭಾರತದಲ್ಲಿ ರಾಷ್ಟ್ರೀಯ ರೈತರ ದಿನವನ್ನು ಆಚರಿಸಲಾಗುತ್ತದೆ. ಅವರು 1979 ರಿಂದ 1980 ರ ವರೆಗೆ ದೇಶದ ಪ್ರಧಾನಿಯಾಗಿದ್ದರು. ತಾವು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಇವರು ರೈತರ ಶ್ರೇಯೋಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಹಮ್ಮಿಕೊಂಡಿದ್ದರು. ರೈತರ ಸಬಲೀಕರಣಕ್ಕಾಗಿ ಹಲವು ಕಾನೂನು, ಕೃಷಿ ಸುಧಾರಣೆಗಳು, ನೀತಿಗಳನ್ನು ರೂಪಿಸಿದ್ದರು. ಅನ್ನದಾತನ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್‌ ಅವರ ಗೌರವಾರ್ಥವಾಗಿ 2001 ರಲ್ಲಿ ಭಾರತ ಸರ್ಕಾವು ಡಿಸೆಂಬರ್‌ 23 ರಂದು ರಾಷ್ಟ್ರೀಯ ರೈತರ ದಿನವನ್ನು ಆಚರಿಸಲು ಘೋಷಿಸಿತು. ಅಂದಿನಿಂದ ಪ್ರತಿವರ್ಷ ಡಿಸೆಂಬರ್‌ 23 ರಂದು ದೇಶದಲ್ಲಿ ರಾಷ್ಟ್ರೀಯ ರೈತರ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಗಣಿತ ಕ್ಷೇತ್ರಕ್ಕೆ ಖ್ಯಾತ ಗಣಿತಜ್ಞ ಶ್ರೀನಿವಾಸ ರಾಮಾನುಜನರು ನೀಡಿದ ಕೊಡುಗೆಗಳೇನು? ಇಲ್ಲಿದೆ ಮಾಹಿತಿ

ರಾಷ್ಟ್ರೀಯ ರೈತರ ದಿನದ ಮಹತ್ವ:

ದೇಶದ ಆರ್ಥಿಕತೆಗೆ ರೈತರ ಕೊಡುಗೆ ಮಹತ್ತರವಾದದ್ದು. ರೈತರ ಈ ಸೇವೆ, ಪರಿಶ್ರಮ ಮತ್ತು ಕೊಡುಗೆಗಳನ್ನು ಗೌರವಿಸುವ ಸಲುವಾಗಿ ರೈತರ ದಿನವನ್ನು ಆಚರಣೆ ಮಾಡಲಾಗುತ್ತದೆ. ಜೊತೆಗೆ ಅನಿರೀಕ್ಷಿತ ಹವಾಮಾನ ಪರಿಸ್ಥಿತಿಗಳು, ಮಾರುಕಟ್ಟೆ ಬೆಲೆಗಳ ಏರಿಳಿತ ಮತ್ತು ಆಧುನಿಕ ತಂತ್ರಜ್ಞಾನಕ್ಕೆ ಅಸಮರ್ಪಕ ಪ್ರವೇಶದಂತಹ ರೈತರು ಎದುರಿಸುತ್ತಿರುವ ವಿವಿಧ ಸವಾಲುಗಳ ಬಗ್ಗೆ ಅರಿವು ಮೂಡಿಸುವುದು ಕೂಡಾ ಈ ದಿನದ ಆಚರಣೆಯ ಉದ್ದೇಶವಾಗಿದೆ. ಅಷ್ಟೇ ಅಲ್ಲದೆ ಈ ವಿಶೇಷ ದಿನದಂದು ಸರ್ಕಾರಿ ಸಂಸ್ಥೆಗಳು, ಕೃಷಿ ಸಂಸ್ಥೆಗಳು ಮತ್ತು ತಜ್ಞರು ಬೆಳೆ ಇಳುವರಿಗಳನ್ನು ಹೆಚ್ಚಿಸಲು ಮತ್ತು ಕೃಷಿ ಆವಿಷ್ಕಾರಗಳ ಬಗ್ಗೆ ತಿಳುವಳಿಕೆ ಮೂಡಿಸಲು ರೈತರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಕೂಡಾ ನಡೆಸುತ್ತಾರೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ