AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Farmers Day 2025: ರೈತನೇ ದೇಶದ ಬೆನ್ನೆಲುಬು, ಜಗದ ಹಸಿವು ನೀಗಿಸುವ ಅನ್ನದಾತನಿಗೊಂದು ನಮನ

ಭಾರತವು ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಲಕ್ಷಾಂತರ ಜನರ ಜೀವನೋಪಾಯ ಮತ್ತು ದೇಶದ ಆಹಾರ ಭದ್ರತೆ, ಹೆಚ್ಚಿನ ಪಾಲಿನ ಆರ್ಥಿಕತೆ ಕೃಷಿಯನ್ನೇ ಅವಲಂಬಿಸಿದೆ. ಈ ಕೃಷಿ ಸಂಸ್ಕೃತಿ ಮತ್ತು ಅನ್ನದಾತರ ಕೊಡುಗೆ, ಕಠಿಣ ಪರಿಶ್ರಮಗಳನ್ನು ಗೌರವಿಸಲು, ರೈತರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಧ್ವನಿ ಎತ್ತಲು ಪ್ರತಿವರ್ಷ ಡಿಸೆಂಬರ್‌ 23 ರಂದು ರಾಷ್ಟ್ರೀಯ ರೈತರ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

National Farmers Day 2025: ರೈತನೇ ದೇಶದ ಬೆನ್ನೆಲುಬು, ಜಗದ ಹಸಿವು ನೀಗಿಸುವ ಅನ್ನದಾತನಿಗೊಂದು ನಮನ
ರಾಷ್ಟ್ರೀಯ ರೈತರ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: Dec 23, 2025 | 9:34 AM

Share

ರೈತ (Farmers) ದೇಶದ ಬೆನ್ನೆಲುಬು. ಆತ ಬೆವರು ಸುರಿಸಿ ದುಡಿದರೆ ಮಾತ್ರ ನಾವು ನೆಮ್ಮದಿಯಿಂದ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯ. ರೈತರು ತಾವು ಹಸಿದಿದ್ದರೂ, ಕಷ್ಟದಲ್ಲಿದ್ದರೂ,  ಕಷ್ಟಪಟ್ಟು ಬೆವರು ಸುರಿಸಿ ದುಡಿದು ಇತರರು ನೆಮ್ಮದಿಯಿಂದ ಹೊಟ್ಟೆ ತುಂಬಿಸಿಕೊಳ್ಳುವಂತೆ ನೋಡುತ್ತಾರೆ. ಜೊತೆಗೆ ದೇಶದ ಆರ್ಥಿಕತೆಯಲ್ಲಿಯೂ ಸಹ ರೈತರ ಕೊಡುಗೆ ಅಪಾರ. ರಾಷ್ಟ್ರದ ಪ್ರಗತಿಗೆ ರೈತರ ಕೊಡುಗೆಗಳನ್ನು ಗೌರವಿಸಲು,  ಕಷ್ಟಪಟ್ಟು ಶ್ರಮಿಸುವ ಪ್ರತಿಯೊಬ್ಬರ ರೈತನನ್ನು ಗೌರವಿಸಲು,  ರೈತರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಧ್ವನಿ ಎತ್ತಲು ಭಾರತದಲ್ಲಿ ಪ್ರತಿವರ್ಷ ಡಿಸೆಂಬರ್‌ 23 ರಂದು ರಾಷ್ಟ್ರೀಯ ರೈತರ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಹಿನ್ನೆಲೆ, ಮಹತ್ವವೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ರಾಷ್ಟ್ರೀಯ ರೈತರ ದಿನದ ಇತಿಹಾಸವೇನು?

ಪ್ರತಿವರ್ಷ ಡಿಸೆಂಬರ್‌ 23 ರಂದು ರಾಷ್ಟ್ರೀಯ ರೈತರ ದಿನವನ್ನು ಆಚರಿಸಲಾಗುತ್ತದೆ. ದೇಶದ ಐದನೇ ಪ್ರಧಾನಿ ಚೌಧರಿ ಚರಣ್‌ ಸಿಂಗ್‌ ಅವರ ಜನ್ಮ ದಿನದ ಸವಿ ನೆನಪಿಗಾಗಿ ಪ್ರತಿವರ್ಷ ಡಿಸೆಂಬರ್‌ 23 ರಂದು ಭಾರತದಲ್ಲಿ ರಾಷ್ಟ್ರೀಯ ರೈತರ ದಿನವನ್ನು ಆಚರಿಸಲಾಗುತ್ತದೆ. ಅವರು 1979 ರಿಂದ 1980 ರ ವರೆಗೆ ದೇಶದ ಪ್ರಧಾನಿಯಾಗಿದ್ದರು. ತಾವು ಪ್ರಧಾನಿಯಾಗಿದ್ದ ಅವಧಿಯಲ್ಲಿ ರೈತರ ಶ್ರೇಯೋಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಜಾರಿಗೆ ತಂದರು. ರೈತರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಬಲಿಷ್ಠರಾಗದ ಹೊರತು ದೇಶದ ಒಟ್ಟಾರೆ ಅಭಿವೃದ್ಧಿ ಅಸಾಧ್ಯ ಎಂದು ನಂಬಿದ್ದ ಚೌಧರಿ ಚರಣ್ ಸಿಂಗ್ ರೈತರ ಸಬಲೀಕರಣಕ್ಕಾಗಿ ಹಲವು ಕಾನೂನು, ಕೃಷಿ ಸುಧಾರಣೆಗಳು, ನೀತಿಗಳನ್ನು ರೂಪಿಸಿದ್ದರು. ಅವರ ಸಂಪೂರ್ಣ ರಾಜಕೀಯ ಜೀವನವು ರೈತರು, ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಆರ್ಥಿಕತೆಯ ಉನ್ನತಿಗೆ ಮೀಸಲಾಗಿತ್ತು. ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್‌ ಅವರ ಗೌರವಾರ್ಥವಾಗಿ 2001 ರಲ್ಲಿ ಭಾರತ ಸರ್ಕಾವು ಡಿಸೆಂಬರ್‌ 23 ರಂದು ರಾಷ್ಟ್ರೀಯ ರೈತರ ದಿನವನ್ನು ಆಚರಿಸಲು ಘೋಷಿಸಿತು. ಅಂದಿನಿಂದ ಪ್ರತಿವರ್ಷ ಡಿಸೆಂಬರ್‌ 23 ರಂದು ದೇಶದಲ್ಲಿ ಈ ವಿಶೇಷ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರೀಯ ಗಣಿತ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು ಗೊತ್ತಾ?

ರಾಷ್ಟ್ರೀಯ ರೈತರ ದಿನದ ಮಹತ್ವವೇನು?

  • ರಾಷ್ಟ್ರೀಯ ರೈತರ ದಿನದ ಪ್ರಾಥಮಿಕ ಉದ್ದೇಶವೆಂದರೆ ರಾಷ್ಟ್ರೀಯ ಮಟ್ಟದಲ್ಲಿ ರೈತರ ಕೊಡುಗೆಗಳನ್ನು ಗುರುತಿಸುವುದು ಮತ್ತು ಕೃಷಿ ಸಮಸ್ಯೆಗಳ ಬಗ್ಗೆ ಸಮಾಜ, ಸರ್ಕಾರ ಮತ್ತು ನೀತಿ ನಿರೂಪಕರ ಗಮನವನ್ನು ಕೇಂದ್ರೀಕರಿಸುವುದು.
  • ಈ ದಿನವು ರೈತರ ಸಮಸ್ಯೆಗಳು, ಸವಾಲುಗಳು ಮತ್ತು ಹಕ್ಕುಗಳ ಕುರಿತು ಚರ್ಚೆಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಹವಾಮಾನ ಬದಲಾವಣೆ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು, ಮಾರುಕಟ್ಟೆ ಅನಿಶ್ಚಿತತೆ ಮತ್ತು ತಾಂತ್ರಿಕ ಬದಲಾವಣೆಯಂತಹ ವಿಷಯಗಳನ್ನು ಈ ದಿನದಂದು ವಿಶೇಷವಾಗಿ ಚರ್ಚಿಸಲಾಗುತ್ತದೆ.
  • ಹೆಚ್ಚುವರಿಯಾಗಿ, ರೈತರ ದಿನವು ಹೊಸ ಪೀಳಿಗೆಗೆ ಕೃಷಿಯ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಮತ್ತು ರೈತರ ಬಗ್ಗೆ ಗೌರವ ಬೆಳೆಸುವ ಗುರಿಯನ್ನು ಹೊಂದಿದೆ.
  • ದೇಶದ ಆಹಾರ ಸ್ವಾವಲಂಬನೆಯು ರೈತರ ಕಠಿಣ ಪರಿಶ್ರಮದ ಮೇಲೆ ಅವಲಂಬಿತವಾಗಿದೆ ಎಂಬುದನ್ನು ಈ ದಿನ ನಮಗೆ ನೆನಪಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್
Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ
Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ
ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ